ವಿಶ್ವಕಪ್ | ಶಮಿ, ಸಿರಾಜ್‌ ದಾಳಿಗೆ ಶ್ರೀಲಂಕಾ ಧೂಳೀಪಟ; ದಾಖಲೆ ಜಯದೊಂದಿಗೆ ಭಾರತ ಸೆಮಿಫೈನಲ್‌ ಪ್ರವೇಶ

Date:

ಐಸಿಸಿ ಏಕದಿನ ವಿಶ್ವಕಪ್‌ 2023ರ ಟೂರ್ನಿಯಲ್ಲಿ ಭಾರತದ ಗೆಲುವಿನ ಓಟ ಮುಂದುವರಿದಿದೆ. ಮೊಹಮ್ಮದ್ ಶಮಿ ಹಾಗೂ ಮೊಹಮ್ಮದ್ ಸಿರಾಜ್‌ ಬೌಲಿಂಗ್‌ ದಾಳಿಗೆ  ಶ್ರೀಲಂಕಾ ಬ್ಯಾಟ್ಸ್‌ಮನ್‌ಗಳು ಬ್ಯಾಟ್‌ ಬೀಸಲು ಸಾಧ್ಯವಾಗದೆ 302 ರನ್‌ಗಳ ದಾಖಲೆ ಅಂತರದಿಂದ ಸೋಲನ್ನು ಅನುಭವಿಸಿದರು.

ಮುಂಬೈನ್‌ ವಾಂಖೇಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ನೀಡಿದ 358 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಕುಸಾಲ್‌ ಮೆಂಡಿಸ್‌ ಸಾರಥ್ಯದ ಶ್ರೀಲಂಕಾ ತಂಡ 19.4 ಓವರ್‌ಗಳಲ್ಲಿ ಕೇವಲ 55 ರನ್‌ಗಳಿಗೆ ಆಲೌಟ್‌ ಆದರು.  ಶ್ರೀಲಂಕಾ 11 ಬ್ಯಾಟ್ಸ್‌ಮನ್‌ಗಳಲ್ಲಿ  ಐವರು ಬ್ಯಾಟ್ಸ್‌ಮನ್‌ಗಳು ಶೂನ್ಯಕ್ಕೆ ಔಟಾದರೆ, ಇಬ್ಬರು 1 ರನ್‌ಗಳಿಗೆ ಪೆವಿಲಿಯನ್‌ಗೆ ತೆರಳಿದರು.

ಲಂಕಾ ಬೌಲರ್‌ಗಳನ್ನು ಧೂಳೀಪಟ ಮಾಡಿದ  ಮೊಹಮ್ಮದ್‌ ಶಮಿ  ವಿಶ್ವಕಪ್‌ ಟೂರ್ನಿಯಲ್ಲಿ ಎರಡನೇ ಬಾರಿ 5 ವಿಕೆಟ್ ಕಬಳಿಸಿದರು.  ಕೇವಲ ಮೂರು ಪಂದ್ಯಗಳಲ್ಲಿ 14 ವಿಕೆಟ್‌ ಕಿತ್ತು ದಾಖಲೆ ನಿರ್ಮಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮತ್ತೊಬ್ಬ ವೇಗಿ ಮೊಹಮದ್‌ ಸಿರಾಜ್‌ 16/3 ವಿಕೆಟ್‌ ಉರಿಸಿದರೆ, ಬುಮ್ರಾ 8/1 ಹಾಗೂ ರವೀಂದ್ರ ಜಡೇಜಾ 4/1 ವಿಕೆಟ್ ಪಡೆದು ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ವಿಶ್ವಕಪ್‌ ಟೂರ್ನಿಯಲ್ಲಿ ಸತತ 7 ಗೆಲುವು ದಾಖಲಿಸಿರುವ ಭಾರತ ಮತ್ತೊಂದು ದಾಖಲೆ ನಿರ್ಮಿಸಿತು. ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆಯುವುದರ ಜೊತೆಗೆ ಸೆಮಿಫೈನಲ್‌ ಪ್ರವೇಶವನ್ನು ಖಚಿತಪಡಿಸಿಕೊಂಡಿತು.

ಶ್ರೇಯಸ್‌, ಗಿಲ್‌, ವಿರಾಟ್ ಅರ್ಧ ಶತಕ

ಮೊದಲು ಟಾಸ್‌ ಗೆದ್ದ ಶ್ರೀಲಂಕಾ ಮೊದಲು ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡು ಭಾರತವನ್ನು ಬ್ಯಾಟಿಂಗ್‌ ಆಹ್ವಾನಿಸಿದರು.

ಬ್ಯಾಟಿಂಗ್‌ ಆರಂಭಿಸಿದ ಮೊದಲ ಓವರ್‌ನಲ್ಲಿ ಲಂಕಾ ವೇಗಿ ಮಧುಶಂಕಾ ನಾಯಕ ರೋಹಿತ್‌ ಶರ್ಮಾ(4) ಅವರನ್ನು ಬೌಲ್ಡ್‌ ಮಾಡಿ ಟೀಂ ಇಂಡಿಯಾಗೆ ಆರಂಭಿಕ ಆಘಾತ ನೀಡಿದರು.

ನಂತರ ಎರಡನೇ ವಿಕೆಟ್‌ಗೆ ವಿರಾಟ್‌ ಕೊಹ್ಲಿ ಅತ್ಯುತ್ತಮ 189 ರನ್‌ಗಳ ಜೊತೆಯಾಟವಾಡಿದ ಉದಯೋನ್ಮುಖ ಆಟಗಾರ ಶುಭಮನ್‌ ಗಿಲ್‌ 92 ಎಸೆತಗಳಲ್ಲಿ 11 ಬೌಂಡರಿ ಹಾಗೂ 2 ಸಿಕ್ಸರ್‌ನೊಂದಿಗೆ 92 ರನ್‌ ಗಳಿಸಿ 8 ರನ್‌ನಿಂದ ಶತಕ ತಪ್ಪಿಸಿಕೊಂಡರು.

ಕೊಹ್ಲಿ ದಾಖಲೆ

ಶುಭಮನ್‌ ಔಟಾದ ಎರಡು ಓವರ್‌ಗಳ ತರುವಾಯು 88 ರನ್‌ ಗಳಿಸಿದ್ದ ವಿರಾಟ್‌ ಕೊಹ್ಲಿ ಕೂಡ ಔಟಾದರು. 94 ಚೆಂಡುಗಳ ಅವರ ಆಟದಲ್ಲಿ 11 ಬೌಂಡರಿಗಳಿದ್ದವು. ಕೊಹ್ಲಿ ಈ ಪಂದ್ಯದಲ್ಲಿ ಸಂಗಕ್ಕರ, ಶಕೀಬ್‌ ಹಾಗೂ ರೋಹಿತ್‌ ದಾಖಲೆಯನ್ನು ಸರಿಗಟ್ಟಿದರು.

ಏಕದಿನ ವಿಶ್ವಕಪ್‌ನಲ್ಲಿ ಹೆಚ್ಚು ಬಾರಿ 50ಕ್ಕಿಂತ ಹೆಚ್ಚು ರನ್‌ಗಳಿಸಿದವರ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇ ರಿದರು. ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ ಅವರು 21 ಬಾರಿ ಏಕದಿನ ವಿಶ್ವಕಪ್‌ನಲ್ಲಿ ಹೆಚ್ಚು ಬಾರಿ 50ಕ್ಕಿಂತ ಹೆಚ್ಚು ರನ್ ಗಳಿಸಿದ್ದಾರೆ. ವಿರಾಟ್ ಕೊಹ್ಲಿ 13ನೇ ಬಾರಿ ಈ ಸಾಧನೆ ಮಾಡಿದರು.

ಶ್ರೀಲಂಕಾದ ಕುಮಾರ ಸಂಗಕ್ಕರ, ಬಾಂಗ್ಲಾದೇಶದ ಶಕಿಬ್ ಅಲ್ ಹಸನ್ ಮತ್ತು ಭಾರತದ ರೋಹಿತ್ ಶರ್ಮ ಅವರು 12 ಬಾರಿ 50ಕ್ಕಿಂತ ಹೆಚ್ಚು ರನ್‌ಗಳಿಸಿದ್ದಾರೆ.

ಶುಭಮನ್‌ ಹಾಗೂ ವಿರಾಟ್‌ ಪೆವಿಲಿಯನ್‌ಗೆ ತೆರಳಿದ ನಂತರ ಶ್ರೇಯಸ್‌ ಅಯ್ಯರ್ ಬಿರುಸಿನ ಆಟವಾಡಿದರು. 56 ಚೆಂಡುಗಳಲ್ಲಿ 6 ಸಿಕ್ಸರ್‌ ಹಾಗೂ 3 ಬೌಂಡರಿ ಸಹಿತ 82 ಚಚ್ಚಿದರು. ಕೊನೆಯಲ್ಲಿ ರವೀಂದ್ರ ಜಡೇಜಾ 24 ಎಸೆತಗಳಲ್ಲಿ 1 ಸಿಕ್ಸರ್‌ 1 ಬೌಂಡರಿಯೊಂದಿಗೆ 35 ರನ್‌ ಬಾರಿಸಿದರು.

ಅಂತಿಮವಾಗಿ ಭಾರತ 50 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 357 ರನ್‌ ಕಲೆ ಹಾಕಿತು.

ಶ್ರೀಲಂಕಾ ಪರ ದಿಲ್ಶನ್ ಮಧುಶಂಕ 80 ರನ್‌ ಕೊಟ್ಟರು ಪ್ರಮುಖ 5 ವಿಕೆಟ್‌ಗಳನ್ನು ಕಬಳಿಸುವಲ್ಲಿ ಯಶಸ್ವಿಯಾದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...