ʻನಿವೃತ್ತಿ ಘೋಷಿಸಲು ಸರಿಯಾದ ಸಮಯʼ ಆದರೆ…; ಗೊಂದಲಗಳಿಗೆ ತೆರೆ ಎಳೆದ ಧೋನಿ

Date:

  • ಮುಂದಿನ ಐಪಿಎಲ್‌ ಆಡುವ ಸುಳಿವು ನೀಡಿದ ಧೋನಿ
  • ʻಜನರ ಪ್ರೀತಿಗಾಗಿ ನನ್ನ ಆಟವನ್ನು ಮುಂದುವರಿಸಬೇಕಿದೆʼ

ಈ ಬಾರಿಯ ಐಪಿಎಲ್‌ ಚಾಂಪಿಯನ್‌ ಯಾರಾಗಲಿದ್ದಾರೆ ಎನ್ನುವುದಕ್ಕಿಂತಲೂ ಹೆಚ್ಚಾಗಿ ಮಹೇಂದ್ರ ಸಿಂಗ್‌ ಧೋನಿ ಐಪಿಎಲ್‌ನಿಂದ ನಿವೃತ್ತಿಯಾಗುತ್ತಾರ ಎಂಬ ಪ್ರಶ್ನೆಯು ಟೂರ್ನಿಯುದ್ದಕ್ಕೂ ಎಲ್ಲೆಡೆ ಚರ್ಚೆಯಾಗಿತ್ತು.

ಈ ಕುರಿತ ಎಲ್ಲಾ ಊಹಪೋಹಗಳಿಗೆ ಸೋಮವಾರ ತಡರಾತ್ರಿ ಸ್ವತಃ ಎಂಎಸ್‌ ಧೋನಿ ತೆರೆ ಎಳಿದಿದ್ದಾರೆ. ಅಹಮದಾಬಾದ್‌ನಲ್ಲಿ ನಡೆದ ಐಪಿಎಲ್‌ 16ನೇ ಆವೃತ್ತಿಯ ಫೈನಲ್‌ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌,  ಹಾಲಿ ಚಾಂಪಿಯನ್‌ ಗುಜರಾತ್‌ ಟೈಟನ್ಸ್‌ ತಂಡವನ್ನು 5 ವಿಕೆಟ್‌ಗಳಿಂದ ರೋಚಕವಾಗಿ ಮಣಿಸಿ, 5ನೇ ಬಾರಿಗೆ ಚಾಂಪಿಯನ್‌ ಪಟ್ಟವನ್ನೇರಿತ್ತು.

ಪಂದ್ಯದ ಬಳಿಕ ವೀಕ್ಷಕ ವಿವರಣೆಗಾರ ಹರ್ಷಾ ಭೋಗ್ಲೆ ಜೊತೆಗಿನ ಮಾತುಕತೆಯ ವೇಳೆ ತಮ್ಮ ನಿವೃತ್ತಿ ಕುರಿತ ಎಲ್ಲಾ ಗೊಂದಲಗಳಿಗೂ  ಧೋನಿ ತೆರೆ ಎಳಿದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಈಗಿನ ಪರಿಸ್ಥಿತಿಯನ್ನು ಗಮನಿಸಿದರೆ, ನಿವೃತ್ತಿ ಘೋಷಿಸಲು ಇದು ನನಗೆ ಸರಿಯಾದ ಸಮಯ. ಆದರೆ, ಈ ವರ್ಷ ನಾನು ಎಲ್ಲೇ ಹೋದರೂ ಸಹ ಅಭಿಮಾನಿಗಳು ನನ್ನ ಮೇಲೆ ಅತಿಯಾದ ಪ್ರೀತಿ ಮತ್ತು ವಾತ್ಸಲ್ಯ ತೋರಿಸಿದ್ದಾರೆ. ಎಲ್ಲರಿಗೂ ತುಂಬಾ ಧನ್ಯವಾದಗಳು ಎಂದು ಹೇಳುವುದು ಸುಲಭದ ವಿಷಯ, ಆದರೆ ಮುಂದಿನ ಒಂಬತ್ತು ತಿಂಗಳು ಅಭ್ಯಾಸ ನಡೆಸಿ ಕನಿಷ್ಠ ಒಂದು ಸೀಸನ್ ಆದರೂ ಆಡಬಯಸುತ್ತೇನೆ. ಇದು ನನ್ನ ದೇಹಕ್ಕೆ ಸುಲಭವಾಗುವುದಿಲ್ಲ. ಆದರೆ, ಅಭಿಮಾನಿಗಳಿಗೆ ನನ್ನಿಂದ ಉಡುಗೊರೆಯಾಗಲಿದೆʼ ಎಂದು ಹೇಳಿದ್ದಾರೆ. ಜನರು ತೋರಿದ ಪ್ರೀತಿ ನೋಡಿದರೆ ನನ್ನ ಆಟವನ್ನು ಮುಂದುವರಿಸಬೇಕಿದೆ ಎಂದು ಧೋನಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...