ಐಪಿಎಲ್‌ 2023 | ಕ್ವಾಲಿಫೈಯರ್​ 2, ಫೈನಲ್‌ ಪಂದ್ಯದ ಟಿಕೆಟ್‌ ಪಡೆಯಲು ನೂಕುನುಗ್ಗಲು, ಕಾಲ್ತುಳಿತ

Date:

ಐಪಿಎಲ್‌ನ ಕೊನೆಯ ಎರಡು ಪಂದ್ಯಗಳ ಆನ್‌ಲೈನ್ ಟಿಕೆಟ್‌ಗಳ ಪ್ರತಿಯನ್ನೂ ಆಫ್‌ಲೈನ್‌ನಲ್ಲಿ ಸ್ಟೇಡಿಯಂನಲ್ಲಿ ಪಡೆಯಲು ಹೇಳಿರುವುದು ನೂಕುನುಗ್ಗಲು, ಕಾಲ್ತುಳಿತ ಸಮಸ್ಯೆಯನ್ನು ಸೃಷ್ಟಿಸಿದೆ.

ಐಪಿಎಲ್‌ 16ನೇ ಆವೃತ್ತಿಯ ಕ್ವಾಲಿಫೈಯರ್​ 2 ಮತ್ತು ಫೈನಲ್‌ ಪಂದ್ಯದ ಟಿಕೆಟ್‌ ಮಾರಾಟದ ವೇಳೆ ಭಾರಿ ಜನಸಂದಣಿಯಿಂದಾಗಿ ಕಾಲ್ತುಳಿತ ಉಂಟಾಗಿದೆ. ಈ ಕುರಿತ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಶುಕ್ರವಾರ, ಗುಜರಾತ್​ ಟೈಟನ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ಕ್ವಾಲಿಫೈಯರ್​ 2 ಮತ್ತು ಮೇ 29ರಂದು ಫೈನಲ್‌ ಪಂದ್ಯ ನಡೆಯಲಿದೆ. ಈ ಹಿನ್ನಲೆಯಲ್ಲಿ ಟಿಕೆಟ್‌ ಪಡೆಯಲು ಸ್ಟೇಡಿಯಂನ ಹೊರ ಭಾಗದಲ್ಲಿ ಭಾರಿ ಜನಸಂದಣಿ ನೆರೆದಿತ್ತು. ಭದ್ರತೆಗೆ ನಿಯೋಜಿಸಿದ್ದ ಪೊಲೀಸರು, ಸಾವಿರಾರು ಸಂಖ್ಯೆಯಲ್ಲಿದ್ದ ಅಭಿಮಾನಿಗಳನ್ನು ನಿಯಂತ್ರಿಸಲು ವಿಫಲರಾದ ಪರಿಣಾಮ ನೂಕುನುಗ್ಗಲು ಉಂಟಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರಿ ಬಿಸಿಲಿನ ತಾಪದ ನಡುವೆಯೂ ಅಭಿಮಾನಿಗಳು ಹಲವು ಗಂಟೆಗಳ ಕಾದು ಕುಳಿತ ಪರಿಣಾಮ  ಕಾಲ್ತುಳಿತದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ವೇಳೆ  ತೀವ್ರ ಶಾಖದ ಪರಿಣಾಮ ಕೆಲವರು ಮೂರ್ಛೆ ಹೋದರು. ಆನ್‌ಲೈನ್‌ನಲ್ಲಿ ಟಿಕೆಟ್‌ಗಳನ್ನು ಬುಕ್ ಮಾಡಿದ್ದರೂ ಸಹ, ಸ್ಟೇಡಿಯಂನ ಬಾಕ್ಸ್ ಆಫೀಸ್‌ನಿಂದ ಟಿಕೆಟ್‌ ಪ್ರತಿಗಳನ್ನು ಪಡೆಯಲು ಸೂಚಿಸಲಾಗಿತ್ತು. ಇದು ನೂಕುನುಗ್ಗಲಿಗೆ ಪ್ರಮುಖ ಕಾರಣವಾಗಿತ್ತು.

ಈ ಸುದ್ದಿ ಓದಿದ್ದೀರಾ?: ಈ ದಿನ ಸಂಪಾದಕೀಯ | ಬೆಂಗಳೂರು: ಅಂಡರ್‌ಪಾಸ್, ಫ್ಲೈಓವರ್, ರಸ್ತೆ ಗುಂಡಿ; ಹೆಜ್ಜೆ ಹೆಜ್ಜೆಗೂ ಕಾಡುವ ಸಾವು!

ಒಂದು ಲಕ್ಷಕ್ಕೂ ಹೆಚ್ಚು ಪ್ರೇಕ್ಷಕರು ಕುಳಿತು ಪಂದ್ಯ ವೀಕ್ಷಿಸುವ ಸಾಮರ್ಥ್ಯವಿದ್ದರೂ ಸಹ ನರೇಂದ್ರ ಮೋದಿ ಸ್ಟೇಡಿಯಂನ ನಿರ್ಗಮನ ದ್ವಾರಗಳು ಅತ್ಯಂತ ಕಿರಿದಾಗಿವೆ. ಇದು ಅಧಿಕಾರಿಗಳಿಗೆ ಸಮಸ್ಯೆ ತಂದಿಟ್ಟಿದೆ. ಟಿಕೆಟ್‌ ವಿತರಣೆಗಾಗಿ ಸೂಕ್ತ ವ್ಯವಸ್ಥೆ ಮಾಡದ ಬಿಸಿಸಿಐ ವಿರುದ್ಧ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಜೀವಕ್ಕಿಂತ ಜನರಿಗೆ ಐಪಿಎಲ್​ ಟಿಕೆಟ್ ಹೆಚ್ಚಾಯಿತೆ ಎಂದು ನೆಟ್ಟಿಗರು ಪ್ರತಿಕ್ರಿಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...