ಐಪಿಎಲ್‌ 2023 |ನಾಥನ್ ಎಲ್ಲಿಸ್ ಮಾರಕ ಬೌಲಿಂಗ್; ಪಂಜಾಬ್‌ಗೆ ರೋಚಕ ಜಯ

Date:

ನಾಥನ್ ಎಲ್ಲಿಸ್ ಮಾರಕ ಬೌಲಿಂಗ್‌ ಪರಿಣಾಮ ಪಂಜಾಬ್‌ ಕಿಂಗ್ಸ್ ಇಲೆವೆನ್‌ ತಂಡ, ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ 5 ರನ್‌ಗಳ ರೋಚಕ ಜಯ ಗಳಿಸಿತು.

ಕೊನೆಯ ಓವರ್‌ಗಳಲ್ಲಿ ಶಿಮ್ರಾನ್ ಹೆಟ್ಮೆಯರ್,ಧ್ರುವ್ ಜುರೆಲ್ ಸಿಕ್ಸರ್‌ ಬೌಂಡರಿ ಮೂಲಕ ಗೆಲುವಿನ ಭರವಸೆ ಚಿಗುರಿಸಿದರೂ ಗುರಿ ನೆರವೇರಲಿಲ್ಲ.

ಗುವಾಹಟಿಯ ಬರ್ಸಾಪರಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ 198 ರನ್‌ ಗುರಿ ಬೆನ್ನಟ್ಟಿದ ರಾಜಸ್ಥಾನ್‌ ರಾಯಲ್ಸ್ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 192 ರನ್‌ ಗಳಿಸಲಷ್ಟೆ ಶಕ್ತವಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊನೆಯ ಗಳಿಗೆಯಲ್ಲಿ ಸ್ಪೋಟಕ ಆಟವಾಡಿದ ಶಿಮ್ರಾನ್ ಹೆಟ್ಮೆಯರ್ (36),ಧ್ರುವ್ ಜುರೆಲ್ (32) ಸೋಲಿನಲ್ಲೂ ಪ್ರೇಕ್ಷಕರ ಮನದಲ್ಲಿ ಉಳಿದರು.

ಪಂಜಾಬ್‌ ತಂಡದ ನಾಥನ್ ಎಲ್ಲಿಸ್ 30/4 ಹಾಗೂ ಅರ್ಶ್‌ದೀಪ್ ಸಿಂಗ್‌ 47/2 ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.

ಟಾಸ್‌ ಸೋತು ಬ್ಯಾಟಿಂಗ್‌ ಆರಂಭಿಸಿದ ಪಂಜಾಬ್‌ ಕಿಂಗ್ಸ್ ತಂಡದ ಪ್ರಭಾಸಿಮ್ರಾನ್, ಶಿಖರ್ ಧವನ್ ಮೊದಲ ಎಸೆತದಿಂದಲೇ ಬ್ಯಾಟ್‌ ಬೀಸಿ ಸಂಜು ಸ್ಯಾಮ್ಸನ್‌ ನೇತೃತ್ವದ ರಾಜಸ್ಥಾನ್‌ ರಾಯಲ್ಸ್ ತಂಡದ ಬೌಲರ್‌ಗಳನ್ನು ಬೆವರಿಳಿಸತೊಡಗಿದರು.

ಸಿಕ್ಸ್ ಹಾಗೂ ಬೌಂಡರಿ ಬಾರಿಸುತ್ತಿದ್ದ ಪ್ರಭಾಸಿಮ್ರಾನ್ ಸಿಂಗ್‌ ಹತ್ತನೇ ಓವರ್‌ನಲ್ಲಿ ಜೇಸನ್‌ ಹೋಲ್ಡರ್‌ ಬೌಲಿಂಗ್‌ನಲ್ಲಿ ವಿಕೇಟ್‌ ಕೀಪರ್‌ ಜಾಸ್‌ ಬಟ್ಲರ್‌ಗೆ ಕ್ಯಾಚಿತ್ತು ನಿರ್ಗಮಿಸಿದರು. 34 ಚಂಡುಗಳಲ್ಲಿ 60 ರನ್‌ ಬಾರಿಸಿದ ಪ್ರಭಾಸಿಮ್ರಾನ್ ಬ್ಯಾಟಿಂಗ್‌ನಲ್ಲಿ 7 ಅಮೋಘ ಬೌಂಟರಿ ಹಾಗೂ 3 ಭರ್ಜರಿ ಸಿಕ್ಸರ್‌ ಒಳಗೊಂಡಿದ್ದವು.

ಮೂರನೇ ಕ್ರಮಾಂಕದಲ್ಲಿ ಆಗಮಿಸಿದ ಭಾನುಕಾ ರಾಜಪಕ್ಸೆ ಗಾಯಗೊಂಡು ನಿವೃತ್ತರಾದರೆ, ನಾಲ್ಕನೇ ಕ್ರಮಾಂಕದ ಜಿತೀಶ್ ಶರ್ಮಾ, ಧವನ್‌ಗೆ ಜೊತೆಯಾಗಿ 16 ಎಸೆತಗಳಲ್ಲಿ ಎರಡು ಬೌಂಡರಿ ಹಾಗೂ ಒಂದು ಸಿಕ್ಸರ್‌ನೊಂದಿಗೆ 27 ರನ್‌ ಬಾರಿಸಿದರು. ಸಿಕಂದರ್ ರಝಾ ಕೂಡ ಹೆಚ್ಚು ಹೊತ್ತು ನಿಲ್ಲದೆ ಒಂದು ರನ್‌ ಗಳಿಸಿ ಅಶ್ವಿನ್‌ಗೆ ಬೌಲ್ಡ್‌ ಆದರು.

ಕೊನೆಯವರೆಗೂ ಆಟವಾಡಿದ ನಾಯಕ ಶಿಖರ್ ಧವನ್‌ 56 ಎಸೆತಗಳಲ್ಲಿ 9 ಬೌಂಡರಿ ಹಾಗೂ 3 ಭರ್ಜರಿ ಸಿಕ್ಸರ್‌ನೊಂದಿಗೆ 86 ರನ್‌ ಪೇರಿಸಿ ಪಂಜಾಬ್‌ 20 ಓವರ್‌ಗಳಲ್ಲಿ 197/4 ಮೊತ್ತ ದಾಖಲಿಸಲು ಕಾರಣರಾದರು.

ರಾಜಸ್ಥಾನ್‌ ಪರ ಹೋಲ್ಡರ್‌ 2, ಚಹಾಲ್‌ ಹಾಗೂ ಅಶ್ವಿನ್ ತಲಾ ಒಂದು ವಿಕೆಟ್ ಕಬಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...