ಭಾರತ–ಆಸ್ಟ್ರೇಲಿಯ ಏಕದಿನ ಸರಣಿ | ಆಸೀಸ್‌ಗೆ ಸುಲಭ ತುತ್ತಾದ ಟೀಂ ಇಂಡಿಯಾ; ಸರಣಿ ಸಮಬಲ

Date:

  • 117 ರನ್‌ಗಳಿಗೆ ಆಲೌಟ್ ಆದ ಟೀಂ ಇಂಡಿಯಾ ಆಟಗಾರರು
  • ಆಸ್ಟ್ರೇಲಿಯ ಪರ ಮಹತ್ವದ 5 ವಿಕೆಟ್ ಪಟೆದ ಮಿಷೆಲ್ ಸ್ಟಾರ್ಕ್

ಆಸ್ಟ್ರೇಲಿಯ ತಂಡ ಭಾರತದ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ 10 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸುವುದರ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು 1-1 ರೊಂದಿಗೆ ಸಮಬಲ ಸಾಧಿಸಿದೆ.

ವಿಶಾಖಪಟ್ಟಣಂನ ಡಾ ವೈ ಎಸ್ ರಾಜಶೇಖರ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ನೀಡಿದ ಅತ್ಯಲ್ಪ 117 ರನ್ನುಗಳ ಸವಾಲನ್ನು ಸ್ಟೀವನ್ ಸ್ಮಿತ್ ನೇತೃತ್ವದ ಆಸೀಸ್ ತಂಡ ಕೇವಲ 11 ಓವರ್‌ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ ಗುರಿ ಮುಟ್ಟಿತು.

ಸ್ಫೋಟಕ ಆಟವಾಡಿದ ಆರಂಭಿಕ ಆಟಗಾರರಾದ ಮಿಷೆಲ್ ಮಾರ್ಷ್ ಹಾಗೂ ಟ್ರಾವಿಸ್ ಹೆಡ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಮಿಷಲ್ ಮಾರ್ಷ್ ಕೇವಲ 36 ಎಸೆತಗಳಲ್ಲಿ 6 ಭರ್ಜರಿ ಸಿಕ್ಸರ್ ಹಾಗೂ 6 ಬೌಂಡರಿಗಳೊಂದಿಗೆ ಅಜೇಯ 66 ರನ್ ಬಾರಿಸಿದರು. ಮಾರ್ಷ್‌ಗೆ ಜೊತೆಯಾದ ಟ್ರಾವೀಸ್ ಹೆಡ್ 30 ಚೆಂಡುಗಳಲ್ಲಿ 10 ಬೌಂಡರಿಗಳೊಂದಿಗೆ 51 ಗಳಿಸುವುದರ ಮೂಲಕ ಅಜೇಯರಾಗಿ ಉಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಆಸೀಸ್‌ನ ವೇಗದ ಬೌಲಿಂಗ್ ದಾಳಿಗೆ ಸಿಲುಕಿ 26 ಓವರ್‌ಗಳಲ್ಲಿ 117 ರನ್‌ಗಳಿಗೆ ಆಲೌಟ್ ಆಯಿತು.

ಅಕ್ಷರ್ ಪಟೇಲ್ ಅಜೇಯ 29 ಹಾಗೂ ವಿರಾಟ್ ಕೊಹ್ಲಿ 31 ರನ್ ಕಲೆ ಹಾಕಿದ್ದು ಬಿಟ್ಟರೆ ಉಳಿದ ಆಟಗಾರರು ಯಾರೂ 20ರ ಗಡಿ ದಾಟಲಿಲ್ಲ. ಸೂರ್ಯ ಕುಮಾರ್ ಯಾದವ್ ಎರಡನೇ ಪಂದ್ಯದಲ್ಲೂ ಶೂನ್ಯಕ್ಕೆ ನಿರ್ಗಮಿಸಿದರು. ಹಾರ್ದಿಕ್ ಪಾಂಡ್ಯ 1, ಶುಭ್ಮನ್ ಗಿಲ್ 0, ರಾಹುಲ್ 9, ರೋಹಿತ್ 13, ರವೀಂದ್ರ ಜಡೇಜಾ 16 ಹೀಗೆ ಪ್ರಮುಖ ಆಟಗಾರರು ಒಬ್ಬರ ಹಿಂದೆ ಒಬ್ಬರಂತೆ ಪೆವಿಲಿಯನ್ ಕಡೆ ಪರೇಡ್ ನಡೆಸಿದರು.

5 ವಿಕೆಟ್ ಪಡೆದ ಮಿಷೆಲ್ ಸ್ಟಾರ್ಕ್, ಸಿಯಾನ್ ಅಬ್ಬೋಟ್ 23/3 ಹಾಗೂ ಆಡಂ ಝಂಪಾ 13/2 ವಿಕೆಟ್ ಪಡೆಯುವ ಮೂಲಕ ಟೀಂ ಇಂಡಿಯಾ ಆಟಗಾರರರಿಗೆ ಮುಳುವಾದರು.

ಸರಣಿಯ ಮೂರನೇ ಹಾಗೂ ಮಹತ್ವದ ಅಂತಿಮ ಪಂದ್ಯ ಮಾರ್ಚ್ 22ರಂದು ಚೆನ್ನೈನಲ್ಲಿ ನಡೆಯಲಿದೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...