ಏಕದಿನ ವಿಶ್ವಕಪ್ 2023 | 1983ರ ಕಪಿಲ್ ದೇವ್ – ಸಯ್ಯದ್ ಕಿರ್ಮಾನಿ ದಾಖಲೆ ಮುರಿದ ನೆದರ್ಲೆಂಡ್ಸ್ ಆಟಗಾರರು

Date:

ಐಸಿಸಿ ಏಕದಿನ ವಿಶ್ವಕಪ್ 2023ರ ಟೂರ್ನಿಯಲ್ಲಿ ಶ್ರೀಲಂಕಾ ಹಾಗೂ ನೆದರ್ಲೆಂಡ್ಸ್‌ ನಡುವೆ ನಡೆಯುತ್ತಿರುವ 19ನೇ ಪಂದ್ಯದಲ್ಲಿ(ಅಕ್ಟೋಬರ್ 21) ನೆದರ್ಲೆಂಡ್ಸ್‌ನ ಆಟಗಾರರು ಹೊಸ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

ಮೊಟ್ಟ ಮೊದಲ ಬಾರಿಗೆ ಕಪಿಲ್‌ ದೇವ್‌ ಸಾರಥ್ಯದ ಭಾರತ ತಂಡ ಜಯಿಸಿದ್ದ 1983ರ ಪ್ರುಡೆನ್ಶಿಯಲ್ ವಿಶ್ವಕಪ್‌ನ ಪ್ರಮುಖ ದಾಖಲೆಯನ್ನು ನೆದರ್ಲೆಂಡ್ಸ್‌ನ ಇಬ್ಬರು ಆಟಗಾರರಾದ ಸೈಬ್ರಾಂಡ್ ಎಂಗಲ್‌ಬ್ರೆಕ್ಟ್ ಹಾಗೂ ಲೋಗನ್ ವ್ಯಾನ್ ಬೀಕ್ ಸರಿಗಟ್ಟಿದ್ದಾರೆ.

ಶ್ರೀಲಂಕಾ ವಿರುದ್ಧ ಲಖನೌದಲ್ಲಿ ನಡೆಯುತ್ತಿರುವ ಇಂದಿನ ಪಂದ್ಯದಲ್ಲಿ ಆರು ಮತ್ತು ಏಳನೇ ಕ್ರಮಾಂಕದ ಆಟಗಾರರಾದ ಸೈಬ್ರಾಂಡ್ ಎಂಗಲ್‌ಬ್ರೆಕ್ಟ್ ಹಾಗೂ ಲೋಗನ್ ವ್ಯಾನ್ ಬೀಕ್ 7 ವಿಕೆಟ್ ಜೊತೆಯಾಟದಲ್ಲಿ 130 ರನ್‌ಗಳನ್ನು ಪೇರಿಸಿ ದಾಖಲೆ ನಿರ್ಮಿಸಿದರು. ಇದರೊಂದಿಗೆ 1983ರಲ್ಲಿ ನಿರ್ಮಿಸಿದ್ದ 40 ವರ್ಷಗಳ ಕಪಿಲ್ ದೇವ್ ಹಾಗೂ ಕರ್ನಾಟಕದವರಾದ ಸಯ್ಯದ್ ಕಿರ್ಮಾನಿ ದಾಖಲೆಯನ್ನು ಅಳಿಸಿಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂದಿನ ಪಂದ್ಯದಲ್ಲಿ ಸೈಬ್ರಾಂಡ್ ಎಂಗಲ್‌ಬ್ರೆಕ್ಟ್ 82 ಎಸೆತಗಳಲ್ಲಿ 4 ಬೌಂಡರಿ ಹಾಗೂ 1 ಸಿಕ್ಸರ್‌ನೊಂದಿಗೆ 70 ರನ್‌ ಗಳಿಸಿದರೆ, ಲೋಗನ್ ವ್ಯಾನ್ ಬೀಕ್ 75 ಚೆಂಡುಗಳಲ್ಲಿ 1 ಬೌಂಡರಿ 1 ಸಿಕ್ಸರ್‌ನೊಂದಿಗೆ 59 ರನ್ ಪೇರಿಸಿದರು.

ಇವರಿಬ್ಬರ ಜೊತೆಯಾಟವು ಏಕದಿನ ವಿಶ್ವಕಪ್‌ನಲ್ಲಿ 7 ಅಥವಾ ಏಳರ ನಂತರದ ವಿಕೆಟ್‌ಗಳಲ್ಲಿ ಗಳಿಸಿದ ಅತ್ಯಧಿಕ ರನ್‌ಗಳ ಜೊತೆಯಾಟವಾಗಿದೆ.

1983ರ ಜೂನ್‌ 18ರಂದು ಇಂಗ್ಲೆಂಡ್‌ನ ಟನ್‌ಬ್ರಿಡ್ಜ್ ವೆಲ್ಸ್ ನಡೆದ ಮೂರನೇ ಏಕದಿನ ಪ್ರುಡೆನ್ಶಿಯಲ್ ವಿಶ್ವಕಪ್‌ನಲ್ಲಿ ಕಪಿಲ್ ದೇವ್ ಹಾಗೂ ಸಯ್ಯದ್ ಕಿರ್ಮಾನಿ ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಮುರಿಯದ 9ನೇ ವಿಕೆಟ್‌ ಜೊತೆಯಾಟದಲ್ಲಿ 126 ರನ್‌ ಬಾರಿಸಿದ್ದರು. ಆಗ ಭಾರತ ತಂಡವು 140 ರನ್‌ಗಳಿಗೆ 8 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಅಂದಿನ ಪಂದ್ಯದಲ್ಲಿ ನಾಯಕ ಕಪಿಲ್‌ ದೇವ್ 138 ಚೆಂಡುಗಳಲ್ಲಿ 16 ಬೌಂಡರಿ 6 ಸಿಕ್ಸರ್‌ಗಳೊಂದಿಗೆ 175 ರನ್‌ ಸಿಡಿಸಿದರೆ, ಸಯ್ಯದ್ ಕಿರ್ಮಾನಿ 56 ಎಸೆತಗಳಲ್ಲಿ 2 ಬೌಂಡರಿಯೊಂದಿಗೆ 26 ರನ್‌ ಗಳಿಸಿದ್ದರು.

ಈ ಸುದ್ದಿ ಓದಿದ್ದೀರಾ? ಭಾರತ ಗೆಲ್ಲಲು ಬೇಕಿದ್ದು 26, ಕೊಹ್ಲಿ ಶತಕಕ್ಕೂ ಬೇಕಿತ್ತು 26: ಸತ್ಯ ಬಿಚ್ಚಿಟ್ಟ ಕೆ ಎಲ್ ರಾಹುಲ್

ಆ ಪಂದ್ಯದಲ್ಲಿ ಜಿಂಬಾಬ್ವೆ ತಂಡವನ್ನು 235 ರನ್‌ಗಳಿಗೆ ಆಲೌಟ್‌ ಮಾಡಿ 31 ರನ್‌ಗಳ ವಿಜಯ ಸಾಧಿಸಿತ್ತು. ಅಲ್ಲದೆ ಭಾರತ ತಂಡವು ಟೂರ್ನಿಯಲ್ಲಿ ಹೊಸ ಐತಿಹಾಸಿಕ ಸಾಧನೆ ಮಾಡಿ ಮೊದಲ ವಿಶ್ವಕಪ್‌ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...