ಕ್ರಿಕೆಟ್ ಅನ್ನು ಹಾಳುಮಾಡಿದ ಭಾರತ: ಏಕಪಕ್ಷೀಯ ಟಿ20 ವಿಶ್ವಕಪ್ ಗೆಲುವಿಗೆ ಶೋಯೆಬ್ ಅಖ್ತರ್ ಅಸಮಾಧಾನ

Date:

2026ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಸಾಧಿಸಿದ ಭರ್ಜರಿ ಜಯಿಸಿದ ಬೆನ್ನಲ್ಲೇ ಪಾಕ್‌ನ ಮಾಜಿ ವೇಗದ ಬೌಲರ್ ಶೋಯೆಬ್ ಅಖ್ತರ್, ಭಾರತದ ಈ ಪ್ರಾಬಲ್ಯವು “ಕ್ರಿಕೆಟ್ ಅನ್ನು ಹಾಳುಮಾಡಿದೆ” ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

​ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ 96 ರನ್‌ಗಳ ಬೃಹತ್ ಅಂತರದಿಂದ ನ್ಯೂಜಿಲೆಂಡ್ ಅನ್ನು ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡಿತು. ಕ್ರಿಕೆಟ್ ಪಂಡಿತರು ಭಾರತದ ಈ ಅದ್ಭುತ ಪ್ರದರ್ಶನವನ್ನು ಕೊಂಡಾಡುತ್ತಿದ್ದರೆ, ಸಂದರ್ಶನವೊಂದರಲ್ಲಿ ಮಾತನಾಡಿದ ಅಖ್ತರ್, ಭಾರತದ ತಂಡವನ್ನು ನೆರೆಹೊರೆಯ ಕ್ರಿಕೆಟ್ ಆಟದಲ್ಲಿ ದಬ್ಬಾಳಿಕೆ ಮಾಡುವ ‘ಶ್ರೀಮಂತ ಹುಡುಗನಿಗೆ’ ಹೋಲಿಸಿದ್ದಾರೆ.

​”ಇದೊಂಥರಾ ಬೀದಿಯಲ್ಲಿರುವ ಶ್ರೀಮಂತ ಹುಡುಗನೊಬ್ಬ ತನ್ನ ನೆರೆಹೊರೆಯ ಬಡ ಮಕ್ಕಳನ್ನು ಕರೆದು, ‘ಬನ್ನಿ ಕ್ರಿಕೆಟ್ ಆಡೋಣ’ ಎಂದಂತಿದೆ. ಭಾರತ ನಮ್ಮ ಜೊತೆ ಇದನ್ನೇ ಮಾಡುತ್ತಿದೆ. ಎಂಟು ತಂಡಗಳಲ್ಲಿ ನಾಲ್ಕನ್ನು ಉಳಿಸಿಕೊಳ್ಳುತ್ತಾರೆ, ಆಮೇಲೆ ಆ ನಾಲ್ಕರಲ್ಲಿ ಮೂರನ್ನು ಕರೆದು ಮುಂದಕ್ಕೆ ಹೋಗುತ್ತಾರೆ. ನಂತರ ‘ನೋಡಿ, ನಾನು ಗೆದ್ದೆ’ ಎನ್ನುತ್ತಾರೆ. ಅವರು ಕ್ರಿಕೆಟ್ ಅನ್ನು ಸಂಪೂರ್ಣವಾಗಿ ಹಾಳುಮಾಡಿದ್ದಾರೆ” ಎಂದು ಅಖ್ತರ್ ವಾಗ್ದಾಳಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ನ್ಯೂಜಿಲೆಂಡ್ ಮಣಿಸಿ 96 ರನ್‌ಗಳ ಬೃಹತ್ ಜಯ; ಸತತ 2ನೇ ಬಾರಿ ಟಿ20 ವಿಶ್ವಕಪ್ ಗೆದ್ದ ಭಾರತ

ಫೈನಲ್ ಪಂದ್ಯಕ್ಕೂ ಮುನ್ನ ಮಾತನಾಡಿದ್ದ ಅಖ್ತರ್, ಭಾರತವೇ ಗೆಲ್ಲುವ ನೆಚ್ಚಿನ ತಂಡ ಎಂಬುದನ್ನು ಒಪ್ಪಿಕೊಂಡಿದ್ದರೂ, “ಕ್ರಿಕೆಟ್‌ನ ಒಳಿತಿಗಾಗಿ ನ್ಯೂಜಿಲೆಂಡ್ ಗೆಲ್ಲಬೇಕು” ಎಂಬ ಆಶಯ ವ್ಯಕ್ತಪಡಿಸಿದ್ದರು. “ಭಾರತದ 150 ಕೋಟಿ ಜನರ ನಿರೀಕ್ಷೆಯ ಒತ್ತಡ ಭಾರತದ ಮೇಲಿದೆ. ಇದೇ ಅಹಮದಾಬಾದ್‌ನಲ್ಲಿ ಆಸ್ಟ್ರೇಲಿಯಾ ಎದುರು ಏಕದಿನ ವಿಶ್ವಕಪ್ ಫೈನಲ್ ಸೋತ ಇತಿಹಾಸವೂ ಇದೆ. ಆದರೆ, ಕ್ರಿಕೆಟ್‌ನ ಒಳಿತಿಗಾಗಿ ಈ ಬಾರಿ ನ್ಯೂಜಿಲೆಂಡ್ ವಿಶ್ವಕಪ್ ಗೆಲ್ಲುವ ಸಮಯ ಬಂದಿದೆ” ಎಂದಿದ್ದರು.

ಒಂದೆಡೆ ಟೀಕೆಗಳ ಮಳೆಗರೆದರೂ, ಭಾರತದ ಯಶಸ್ಸಿನ ಹಿಂದಿರುವ ಮುಖ್ಯ ಕಾರಣವೊಂದನ್ನು ಅಖ್ತರ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಕಠಿಣ ಪರಿಸ್ಥಿತಿಯಲ್ಲೂ ಆಟಗಾರರ ಬೆನ್ನಿಗೆ ನಿಂತ ಭಾರತ ತಂಡದ ಮುಖ್ಯ ತರಬೇತುದಾರ ಗೌತಮ್ ಗಂಭೀರ್ ಅವರ ನಿಲುವೇ ಇಂಥ ಪ್ರಮುಖ ಟೂರ್ನಿಗಳಲ್ಲಿ ಗೆಲುವಿನ ವ್ಯತ್ಯಾಸವನ್ನು ತಂದುಕೊಡುತ್ತದೆ ಎಂದು ಅವರು ಹೊಗಳಿದ್ದಾರೆ.

ಪಾಕಿಸ್ತಾನದ ಮತ್ತೋರ್ವ ಮಾಜಿ ಆಟಗಾರ ಮೊಹಮ್ಮದ್ ಆಮಿರ್ ಕೂಡ ‘ಹಾರ್ನಾ ಮನಾ ಹೈ’ ಕಾರ್ಯಕ್ರಮದಲ್ಲಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. “ಭಾರತದ ಗೆಲುವಿನ ಬಹುಪಾಲು ಶ್ರೇಯಸ್ಸು ನ್ಯೂಜಿಲೆಂಡ್ ಬೌಲರ್‌ಗಳಿಗೆ ಸಲ್ಲಬೇಕು. ಕಿವೀಸ್ ಬೌಲರ್‌ಗಳು ಒತ್ತಡ ಹೇರಲು ವಿಫಲರಾಗಿದ್ದೇ ಭಾರತೀಯ ಬ್ಯಾಟರ್‌ಗಳು ಸುಲಭವಾಗಿ, ತಮ್ಮದೇ ವೇಗದಲ್ಲಿ ರನ್ ಕಲೆಹಾಕಲು ಕಾರಣವಾಯಿತು” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...