ಏಕದಿನ ವಿಶ್ವಕಪ್ 2023 | ಇಂಗ್ಲೆಂಡ್ ಬೌಲರ್‌ಗಳ ದಾಳಿಗೆ ನಲುಗಿದ ಭಾರತ: ಆಂಗ್ಲರಿಗೆ ಸಾಧಾರಣ ಸವಾಲು

Date:

ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ಭಾರತ ತಂಡ ಅಲ್ಪ ಮೊತ್ತಕ್ಕೆ ಮುಗ್ಗರಿಸಿದೆ. ಐದು ಸತತ ಗೆಲುವಿನಿಂದ ಆತ್ಮವಿಶ್ವಾಸದಲ್ಲಿದ್ದ ಟೀಂ ಇಂಡಿಯಾ ಕೊನೆಯ ಸ್ಥಾನದಲ್ಲಿರುವ ಇಂಗ್ಲೆಂಡ್ ವಿರುದ್ಧ 9 ವಿಕೆಟ್ ನಷ್ಟಕ್ಕೆ 229 ರನ್‌ಗಳಷ್ಟೆ ಪೇರಿಸಲು ಸಾಧ್ಯವಾಯಿತು.

ಲಖನೌದ ಏಕನಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಗೆದ್ದ ಇಂಗ್ಲೆಂಡ್‌ ತಂಡದ ನಾಯಕ ಜೋಸ್‌ ಬಟ್ಲರ್ ಟೀಂ ಇಂಡಿಯಾವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದರು.

ವಿಶ್ವಕಪ್ ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ತಂಡ ಆರಂಭದಲ್ಲಿಯೇ ಮುಗ್ಗರಿಸಿತು. ನಾಲ್ಕನೇ ಓವರ್‌ನಲ್ಲಿಯೇ ಉದಯೋನ್ಮುಖ ಆಟಗಾರ ಶುಭಮನ್‌ ಗಿಲ್(9) ಅವರು ವೇಗಿ ಕ್ರಿಸ್ ವೋಕ್ಸ್ ಚೆಂಡನ್ನು ಎದುರಿಸಲು ಹೋಗಿ ಬೌಲ್ಡ್‌ ಆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಂತರ ಆಗಮಿಸಿದ ಸ್ಟಾರ್‌ ಆಟಗಾರ ವಿರಾಟ್‌ ಕೊಹ್ಲಿ ಒಂದು ರನ್‌ ಕೂಡ ಗಳಿಸದೆ ಡೇವಿಡ್ ವಿಲ್ಲಿ ಬೌಲಿಂಗ್‌ನಲ್ಲಿ ಕೆಟ್ಟ ಹೊಡತಕ್ಕೆ ಮುಂದಾಗಿ ಬೆನ್‌ ಸ್ಟೋಕ್ಸ್‌ಗೆ ಕ್ಯಾಚಿತ್ತು ಶೂನ್ಯಕ್ಕೆ ನಿರ್ಗಮಿಸಿದರು. ನಾಲ್ಕನೇ ಕ್ರಮಾಂಕದಲ್ಲಿ ಆಗಮಿಸಿದ ಶ್ರೇಯಸ್‌ ಅಯ್ಯರ್‌ ಕೂಡ 16 ಚೆಂಡುಗಳನ್ನು ತಿಂದು ಕೇವಲ 4 ರನ್‌ ಗಳಿಸಿ 12ನೇ ಓವರ್‌ನಲ್ಲಿ ವೋಕ್ಸ್‌ ಬೌಲಿಂಗ್‌ನಲ್ಲಿ ವುಡ್‌ಗೆ ಕ್ಯಾಚಿತ್ತು ಪೆವಿಲಿಯನ್‌ಗೆ ತೆರಳಿದರು.

ರೋಹಿತ್‌ ಶರ್ಮಾ ಅರ್ಧ ಶತಕ

ಶ್ರೇಯಸ್‌ ನಂತರ ಕ್ರೀಸಿಗೆ ಬಂದ ಐದನೇ ಕ್ರಮಾಂಕದ ಭರವಸೆಯ ಆಟಗಾರ ಕನ್ನಡಿಗ ಕೆ ಎಲ್‌ ರಾಹುಲ್ ನಾಯಕ ರೋಹಿತ್‌ ಶರ್ಮಾ ಅವರೊಂದಿಗೆ ಐದನೇ ವಿಕೆಟ್ ಜೊತೆಯಾಟದಲ್ಲಿ 91 ರನ್‌ ಪೇರಿಸಿದರು. ರಾಹುಲ್‌ (39) 31ನೇ ಓವರ್‌ನಲ್ಲಿ ವಿಲ್ಲಿ ಬೌಲಿಂಗ್‌ನಲ್ಲಿ ಬ್ಯಾಟ್‌ ಬೀಸಲು ಹೋಗಿ ಬೈರ್‌ಸ್ಟೋಗೆ ಕ್ಯಾಚಿತ್ತು ನಿರ್ಗಮಿಸಿದರು.

ಪ್ರಮುಖ ಆಟಗಾರರು ಔಟಾದ ನಂತರ ಏಕಾಂಗಿಯಾಗಿ ಹೋರಾಟ ನಡೆಸಿದ ನಾಯಕ ರೋಹಿತ್‌ ಶರ್ಮಾ 37 ಓವರ್‌ನ ಐದನೇ ಎಸೆತದಲ್ಲಿ 87 ರನ್‌ ಗಳಿಸಿ ಸ್ಪಿನ್ನರ್‌ ಅದಿಲ್‌ ರಶೀದ್‌ ಬೌಲಿಂಗ್‌ನಲ್ಲಿ ಲಿವಿಂಗ್‌ ಸ್ಟೋನ್‌ಗೆ ಕ್ಯಾಚ್‌ ನೀಡಿ ಔಟಾದರು. 101 ಚೆಂಡುಗಳ ರೋಹಿತ್ ಆಟದಲ್ಲಿ 10 ಬೌಂಡರಿ ಹಾಗೂ 3 ಸಿಕ್ಸರ್‌ಗಳಿದ್ದವು.

ಈ ಸುದ್ದಿ ಓದಿದ್ದೀರಾ? ಭಾರತದ ಮಾಜಿ ಕ್ರಿಕೆಟಿಗ, ಲೆಜೆಂಡರಿ ಸ್ಪಿನ್ನರ್ ಬಿಶನ್ ಸಿಂಗ್ ಬೇಡಿ ನಿಧನ

ನಂತರದಲ್ಲಿ ಸೂರ್ಯ ಕುಮಾರ್‌ ಯಾದವ್‌ ಮಾತ್ರ ಒಂದಷ್ಟು ಹೊತ್ತು ಕ್ರೀಸಿನಲ್ಲಿದ್ದು 47 ಎಸೆತಗಳಲ್ಲಿ 4 ಬೌಂಡರಿ 1 ಸಿಕ್ಸರ್‌ನೊಂದಿಗೆ 49 ರನ್‌ ಗಳಿಸಿ ಇಂದು ರನ್‌ನಿಂದ ಅರ್ಧ ಶತಕ ವಂಚಿತರಾಗಿ ವಿಲ್ಲಿ ಬೌಲಿಂಗ್‌ನಲ್ಲಿ ಔಟಾದರು.

ಕೊನೆಯಲ್ಲಿ ಜಸ್‌ಪ್ರೀತ್‌ ಬೂಮ್ರಾ (16) ಹಾಗೂ ಕುಲದೀಪ್‌ ಯಾದವ್‌ (9) ರನ್‌ ಗಳಿಸಿದರು.

ಅಂತಿಮವಾಗಿ ಭಾರತ 50 ಓವರ್‌ಗಳಲ್ಲಿ 229 ರನ್‌ ಕಲೆ ಹಾಕಿತು. ಇಂಗ್ಲೆಂಡ್‌ ಪರ ಡೇವಿಡ್‌ ವಿಲ್ಲಾ 45/3, ಅದಿಲ್‌ ರಶೀದ್ 35/2, ಕ್ರಿಸ್‌ ವೋಕ್ಸ್‌ 33/2 ವಿಕೆಟ್‌ ಗಳಿಸಿ ಯಶಸ್ವಿ ಬೌಲರ್‌ಗಳೆನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...