ಮಹಿಳಾ ವಿಶ್ವಕಪ್‌ ಗೆದ್ದ ತಂಡಕ್ಕೆ ಎಷ್ಟು ಬಹುಮಾನ?

Date:

7 ಬಾರಿ ವಿಶ್ವ ಚಾಂಪಿಯನ್‌ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ಭಾರತ ಮಹಿಳಾ ಕ್ರಿಕೆಟ್‌ ತಂಡ 2025ನೇ ಸಾಲಿನ ವಿಶ್ವಕಪ್‌ ಫೈನಲ್‌ ತಲುಪಿದೆ. ನವೆಂಬರ್ 2ರಂದು ಮುಂಬೈನ ಡಿ ವೈ ಪಾಟೀಲ್‌ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್‌ನಲ್ಲಿ ಭಾರತ ತಂಡ ಪ್ರಶಸ್ತಿಗಾಗಿ ದಕ್ಷಿಣ ಆಫ್ರಿಕಾ ವಿರುದ್ಧ ಸೆಣೆಸಲಿದೆ. ಐಸಿಸಿಯಿಂದ ಚಾಂಪಿಯನ್‌ ತಂಡಕ್ಕೆ 37.3 ಕೋಟಿ ರೂ. ಹಾಗೂ ರನ್ನರ್‌ ಅಪ್‌ ತಂಡಕ್ಕೆ 20 ಕೋಟಿ ರೂ. ಬಹುಮಾನ ಸಿಗಲಿದೆ.

ಇದಲ್ಲದೇ ಭಾರತ ಪ್ರಶಸ್ತಿ ಗೆದ್ದರೆ ನಗದು ಬಹುಮಾನ ನೀಡಲು ಬಿಸಿಸಿಐ ಬದ್ಧವಾಗಿದೆ ಎಂದು ವರದಿಗಳು ತಿಳಿಸಿವೆ. ಬಿಸಿಸಿಐ ಮಾಜಿ ಕಾರ್ಯದರ್ಶಿ ಹಾಗೂ ಹಾಲಿ ಐಸಿಸಿ ಅಧ್ಯಕ್ಷ ಜಯ್‌ ಶಾ ಪ್ರತಿಪಾದಿಸಿದ ʻಸಮಾನ ವೇತನʼ ನೀತಿ ಅಡಿಯಲ್ಲಿ ಮಹಿಳಾ ತಂಡ‌ ಪ್ರಶಸ್ತಿ ಗೆದ್ದರೆ ಅವರಿಗೆ ನಗದು ಬಹುಮಾನ ನೀಡಲು ಬಿಸಿಸಿಐ ಸಂಪೂರ್ಣ ಸಿದ್ಧವಾಗಿದೆ.

ಕಳೆದ ವರ್ಷ ಅಮೆರಿಕಾದಲ್ಲಿ ನಡೆದ ಟೂರ್ನಿಯ ಫೈನಲ್‌ನಲ್ಲಿ ಪುರುಷರ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಗೆದ್ದು ಟಿ20 ವಿಶ್ವಕಪ್‌ ಟ್ರೋಫಿ ಮುಡಿಗೇರಿಸಿಕೊಂಡಿತ್ತು. ಆಗ ಭಾರತ ತಂಡಕ್ಕೆ ಬಿಸಿಸಿಐ 125 ಕೋಟಿ ಬಹುಮಾನ ನೀಡಿತ್ತು. ಅದೇ ರೀತಿ ಮಹಿಳಾ ತಂಡ ವಿಶ್ವಕಪ್‌ ಗೆದ್ದರೂ ಅಷ್ಟೇ ಮೊತ್ತವನ್ನ ಬಹುಮಾನವಾಗಿ ನೀಡಲು ಉನ್ನತ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? Ind vs Aus T20: ಮೆಲ್ಬೋರ್ನ್‌ನಲ್ಲಿ ಆಸ್ಟ್ರೇಲಿಯಾ ಗೆಲುವು

ಈ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಆದ್ರೆ ಕೆಲ ಕ್ರಿಕೆಟ್‌ ತಜ್ಞರು ಹಾಗೂ ಬಿಸಿಸಿಐ ಮಂಡಳಿಯ ಕೆಲ ಅಧಿಕಾರಿಗಳು ಟ್ರೋಫಿ ಗೆಲ್ಲುವ ಮೊದಲೇ ಬಹುಮಾನ ಘೋಷಣೆ ಮಾಡುವುದು ಸರಿಯಲ್ಲ ಅಂತ ಹೇಳಿದ್ದಾರೆಂಬುದಾಗಿ ವರದಿಗಳು ತಿಳಿಸಿವೆ.

2008ರಲ್ಲಿ ಭಾರತ ಮೊದಲ ಬಾರಿ ಫೈನಲ್‌ ಪ್ರವೇಶಿಸಿದಾಗ ಆಸೀಸ್‌ ವಿರುದ್ಧವೇ 98 ರನ್‌ಗಳಿಂದ ಸೋತಿತ್ತು. 2017ರಲ್ಲಿ ಇಂಗ್ಲೆಂಡ್‌ ವಿರುದ್ಧ ಲಾರ್ಡ್ಸ್‌ನಲ್ಲಿ 9 ರನ್‌ಗಳ ವಿರೋಚಿತ ಸೋಲು ಕಂಡಿತ್ತು. ಲಾರ್ಡ್ಸ್‌ನಲ್ಲಿ ಮಹಿಳಾ ತಂಡ ಸೋತಾಗ ಪ್ರತಿಯೊಬ್ಬರಿಗೂ ತಲಾ 50 ಲಕ್ಷ ಬಹುಮಾನ ಘೋಷಿಸಿತ್ತು. ಸದ್ಯ 8 ವರ್ಷಗಳ ಬಳಿಕ ಭಾರತ 3ನೇ ಬಾರಿಗೆ ಫೈನಲ್‌ ತಲುಪಿದ್ದು, ಚೊಚ್ಚಲ ಟ್ರೋಫಿ ಮುಡಿಗೇರಿಸಿಕೊಳ್ಳುವ ತವಕದಲ್ಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...