ಟಿ20: ಹಲವು ದಾಖಲೆಗಳ ಪಂದ್ಯದಲ್ಲಿ 133 ರನ್​ಗಳಿಂದ ಬಾಂಗ್ಲಾ ಮಣಿಸಿದ ಭಾರತ

Date:

ಬಾಂಗ್ಲಾದೇಶ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಮೊದಲೆರಡು ಪಂದ್ಯಗಳನ್ನು ಗೆದ್ದು ಸರಣಿ ವಶಪಡಿಸಿಕೊಂಡಿದ್ದ ಟೀಂ ಇಂಡಿಯಾ, ಇದೀಗ ಮೂರನೇ ಹಾಗೂ ಕೊನೆಯ ಪಂದ್ಯದಲ್ಲೂ ಬಾಂಗ್ಲಾದೇಶವನ್ನು ಮಣಿಸಿದೆ. ಹೈದರಾಬಾದ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟೀಂ ಇಂಡಿಯಾ, ಬಾಂಗ್ಲಾದೇಶ ತಂಡವನ್ನು ಬರೋಬ್ಬರಿ 133 ರನ್​ಗಳಿಂದ ಸೋಲಿಸಿದೆ.

ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ. ಟೆಸ್ಟ್ ಸರಣಿಯನ್ನೂ 2-0 ಅಂತರದಿಂದ ಕಳೆದುಕೊಂಡಿದ್ದ ಬಾಂಗ್ಲಾದೇಶ ತಂಡಕ್ಕೆ ಭಾರತ ಪ್ರವಾಸದಲ್ಲಿ ಒಂದೇ ಒಂದು ಗೆಲುವು ದಾಖಲಿಸಲು ಸಾಧ್ಯವಾಗಲಿಲ್ಲ. ಭಾರತಕ್ಕೆ ಬರುವ ಮುನ್ನ ಪಾಕಿಸ್ತಾನವನ್ನು ಅವರದ್ದೇ ನೆಲದಲ್ಲಿ ಮಣಿಸಿದ್ದ ಬಾಂಗ್ಲಾ ತಂಡದ ಮೇಲೆ ಸಾಕಷ್ಟು ನಿರೀಕ್ಷೆಗಳಿದ್ದವು. ಆದರೆ ಭಾರತವನ್ನು ಭಾರತದಲ್ಲಿ ಮಣಿಸಲು ಸಾಧ್ಯವೇ ಇಲ್ಲ ಎಂಬುದನ್ನು ಸಾಬೀತು ಮಾಡುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಗಿದೆ.

ಸಂಜು- ಸೂರ್ಯ ಸಿಡಿಲಬ್ಬರದ ಬ್ಯಾಟಿಂಗ್‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 6 ವಿಕೆಟ್ ನಷ್ಟಕ್ಕೆ ಟಿ20 ವಿಶ್ವ ದಾಖಲೆಯ 297 ರನ್ ಗಳಿಸಿತು. ತಂಡದ ಪರ ಶತಕದ ಇನ್ನಿಂಗ್ಸ್ ಆಡಿದ ಸಂಜು ಸ್ಯಾಮ್ಸನ್ ಗೆಲುವಿನ ರೂವಾರಿಗಳಲ್ಲಿ ಪ್ರಮುಖರಾಗಿದ್ದಾರೆ. ತಮ್ಮ ಇನಿಂಗ್ಸ್​ನಲ್ಲಿ 111 ರನ್ ಬಾರಿಸಿದ ಸಂಜು ಕೇವಲ 22 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರೆ, ಆ ಬಳಿಕ 40 ಎಸೆತಗಳಲ್ಲಿ ಶತಕ ಸಿಡಿಸಿದರು. ಸಂಜುಗೆ ಜೊತೆ ನೀಡಿದ ನಾಯಕ ಸೂರ್ಯಕುಮಾರ್ ಯಾದವ್ 35 ಎಸೆತಗಳಲ್ಲಿ 8 ಬೌಂಡರಿ ಹಾಗೂ 5 ಸಿಕ್ಸರ್ ನೆರವಿನಿಂದ 75 ರನ್ ಗಳಿಸಿದರು.

ಈ ಸುದ್ದಿ ಓದಿದ್ದೀರಾ? ಮಹಿಳಾ ಟಿ20 ವಿಶ್ವಕಪ್ | ಪಾಕಿಸ್ತಾನವನ್ನು ಮಣಿಸಿದ ಭಾರತ ತಂಡ

ಕೊನೆಯಲ್ಲಿ ತಂಡದ ಸ್ಕೋರ್ ​ ವೇಗ ಹೆಚ್ಚಿಸದ ಹಾರ್ದಿಕ್ ಪಾಂಡ್ಯ 18 ಎಸೆತಗಳಲ್ಲಿ 47 ರನ್ ಬಾರಿಸಿದರೆ, ಬ್ಯಾಟಿಂಗ್ ಕ್ರಮಾಂಕದಲ್ಲಿ ಮುಂಬಡ್ತಿ ಪಡೆದು ಬಂದ ರಿಯಾನ್ ಪರಾಗ್ 13 ಎಸೆತಗಳಲ್ಲಿ 34 ರನ್ ಗಳಿಸಿದರು. ಉಳಿದಂತೆ ರಿಂಕು ಸಿಂಗ್ ಔಟಾಗದೆ 8 ರನ್ ಬಾರಿಸಿದರೆ, ಅಭಿಷೇಕ್ ಶರ್ಮಾ 4 ರನ್ ಕೊಡುಗೆ ನೀಡಿದರು. ವಾಷಿಂಗ್ಟನ್ ಸುಂದರ್ 1 ರನ್ ಗಳಿಸಿ ಅಜೇಯರಾಗಿ ಮರಳಿದರು. ಬಾಂಗ್ಲಾದೇಶ ಪರ ತಂಜಿಮ್ ಹಸನ್ ಶಾಕಿಬ್ 3 ವಿಕೆಟ್ ಪಡೆದರೆ, ತಸ್ಕಿನ್ ಅಹ್ಮದ್, ಮುಸ್ತಫಿಜುರ್ ಮತ್ತು ಮಹಮ್ಮದುಲ್ಲಾ ತಲಾ 1 ವಿಕೆಟ್ ಪಡೆದರು.

ಹಲವು ದಾಖಲೆಗಳನ್ನು ಬರೆದ ಟೀಂ ಇಂಡಿಯಾ

ಬಾಂಗ್ಲಾದೇಶ ವಿರುದ್ಧ 297 ರನ್ ಕಲೆಹಾಕಿದ ಭಾರತಕ್ಕೆ ಇದು ಟಿ20 ಕ್ರಿಕೆಟ್‌ನಲ್ಲಿ ಅತಿ ದೊಡ್ಡ ಸ್ಕೋರ್ ಆಗಿದೆ. ಇದಕ್ಕೂ ಮುನ್ನ 2017ರಲ್ಲಿ ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ 260 ರನ್ ಗಳಿಸಿತ್ತು. ಅದೇ ಹೊತ್ತಿಗೆ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 250 ರನ್‌ಗಳ ಗಡಿ ದಾಟಿದ್ದು ಇದು ಮೂರನೇ ಬಾರಿ.ಇದಲ್ಲದೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಭಾರತ ತಂಡ ಅತಿ ವೇಗದ ಶತಕ ಬಾರಿಸಿದ ದಾಖಲೆಯನ್ನೂ ಮಾಡಿದೆ.

ಟೀಂ ಇಂಡಿಯಾ ಕೇವಲ 7.1 ಓವರ್‌ಗಳಲ್ಲಿ 100 ರನ್‌ಗಳ ಗಡಿಯನ್ನು ಪೂರೈಸಿತು, ಇದು ಹೊಸ ವಿಶ್ವ ದಾಖಲೆಯಾಗಿದೆ.ಅಂತಾರಾಷ್ಟ್ರೀಯ ಟಿ20 ಪಂದ್ಯವೊಂದರಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆಯನ್ನು ಭಾರತ ತಂಡ ಮಾಡಿದೆ. ಬಾಂಗ್ಲಾದೇಶ ವಿರುದ್ಧ ಭಾರತದ ಬ್ಯಾಟ್ಸ್‌ಮನ್‌ಗಳು ಒಟ್ಟು 22 ಸಿಕ್ಸರ್‌ಗಳನ್ನು ಬಾರಿಸಿದ್ದು, ಇದು ಹೊಸ ವಿಶ್ವ ದಾಖಲೆಯಾಗಿದೆ.

Sanju samson t20

ತತ್ತರಿಸಿದ ಬಾಂಗ್ಲಾ

ಭಾರತ ನೀಡಿದ 297 ರನ್​ಗಳ ಬೃಹತ್ ಗುರಿಗೆ ಉತ್ತರವಾಗಿ ಬಾಂಗ್ಲಾದೇಶ ನಿಗದಿತ ಓವರ್‌ಗಳಲ್ಲಿ ಏಳು ವಿಕೆಟ್‌ಗೆ 164 ರನ್ ಗಳಿಸಲಷ್ಟೇ ಶಕ್ತವಾಯಿತು. ಬಾಂಗ್ಲಾದೇಶ ಪರ ತೌಹೀದ್ ಹೃದೋಯ್ 42 ಎಸೆತಗಳಲ್ಲಿ 63 ರನ್ ಗಳಿಸಿ ಅಜೇಯರಾಗಿ ಉಳಿದರೆ, ಲಿಟ್ಟನ್ ದಾಸ್ 42 ರನ್​​ಗಳ ಕಾಣಿಕೆ ನೀಡಿದರು. ಉಳಿದಂತೆ ಯಾರಿಂದಲೂ ಹೇಳಿಕೊಳ್ಳುವಂತಹ ಪ್ರದರ್ಶನ ಕಂಡುಬರಲಿಲ್ಲ. ಭಾರತದ ಪರ ರವಿ ಬಿಷ್ಣೋಯ್ ಗರಿಷ್ಠ ಮೂರು ವಿಕೆಟ್ ಪಡೆದರೆ, ವೇಗದ ಬೌಲರ್ ಮಯಾಂಕ್ ಯಾದವ್ ಎರಡು ವಿಕೆಟ್ ಪಡೆದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...