ವೆಸ್ಟ್‌ ಇಂಡೀಸ್‌ಗೆ 6 ವಿಕೆಟ್ ಜಯ; ಭಾರತ ತಂಡದ ಕಳಪೆ ಪ್ರದರ್ಶನ

Date:

ರೊಮಾರಿಯೋ ಶೆಫರ್ಡ್, ಗುಡಾಕೇಶ್ ಮೋಟಿ ಅವರ ಅಮೋಘ ಬೌಲಿಂಗ್ ಹಾಗೂ ನಾಯಕ ಶಾಯ್‌ ಹೋಪ್ ಮತ್ತು ಕೇಸಿ ಕಾರ್ಟಿ ಅವರ ಸಮಯೋಚಿತ ಬ್ಯಾಟಿಂಗ್‌ ನೆರವಿನಿಂದ ವೆಸ್ಟ್ ಇಂಡೀಸ್‌ ತಂಡ ಭಾರತದ ವಿರುದ್ಧ 6 ವಿಕೆಟ್‌ಗಳ ಅಂತರದಲ್ಲಿ ಗೆಲುವು ಸಾಧಿಸಿತು.

ಬಾರ್ಬಡೋಸ್‌ನ ಬ್ರಿಜ್‌ಟೌನ್‌ನಲ್ಲಿ ನಡೆದ ಎರಡನೆ ಏಕದಿನ ಪಂದ್ಯದಲ್ಲಿ ಭಾರತ ನೀಡಿದ 181 ರನ್‌ಗಳ ಸುಲಭ ಗುರಿಯನ್ನು ಬೆನ್ನಟ್ಟಿದ ವೆಸ್ಟ್ ಇಂಡೀಸ್‌ ತಂಡ 36.4 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಜಯಗಳಿಸಿ ಸರಣಿಯನ್ನು ಸಮಬಲ ಮಾಡಿಕೊಂಡಿದೆ.

181 ರನ್‌ಗಳ ಸುಲಭ ಗುರಿಯೊಂದಿಗೆ ಇನ್ನಿಂಗ್ಸ್‌ ಆರಂಭಿಸಿದ ವಿಂಡೀಸ್ ಆರಂಭಿಕರಾದ​ ಕೈಲ್ ಮೇಯರ್ಸ್ (36) ಮತ್ತು ಬ್ರಾಂಡನ್ ಕಿಂಗ್ (15) ವೇಗದ ಆರಂಭ ನೀಡಿದರು. ಕೇವಲ 8.2 ಓವರ್‌ಗಳಲ್ಲಿ 53 ರನ್‌ಗಳ ಜೊತೆಯಾಟವಾಡಿದರು. ಇವರಿಬ್ಬರ ಜೋಡಿಯನ್ನು ವೇಗಿ ಶಾರ್ದೂಲ್ ಠಾಕೂರ್ 9ನೇ ಓವರ್‌ನಲ್ಲಿ ಮುರಿದರು. ಬಳಿಕ 13 ನೇ ಓವರ್‌ನಲ್ಲಿ ಅಲಿಕ್ ಅಥಾನಾಜ್(6) ಅವರನ್ನು ಪೆವಿಲಿಯನ್‌ಗೆ ಕಳಿಸುವ ಮೂಲಕ ಶಾರ್ದೂಲ್ ಮೂರು ವಿಕೆಟ್ ಕಬಳಿಸಿದರು. ಆ ನಂತರ ಬಂದ ಶಿಮ್ರೋನ್ ಹೆಟ್ಮೆಯರ್(9) ಹೆಚ್ಚು ಹೊತ್ತು ನಿಲ್ಲದೆ ಕುಲದೀಪ್​ ಯಾದವ್​ಗೆ ಔಟಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಲ್ಕು ವಿಕೆಟ್ ಕಳೆದುಕೊಂಡ ವಿಂಡೀಸ್‌ಗೆ ನಾಯಕ ಶಾಯ್ ಹೋಪ್ ಹಾಗೂ ಯುವ ಬ್ಯಾಟ್ಸ್‌ಮನ್ ಕೇಸಿ ಕಾರ್ಟಿ ಅವರ 91 ರನ್‌ಗಳ ಜೊತೆಯಾಟದಿಂದ ತಂಡವನ್ನು ಗೆಲುವಿನ ದಡಕ್ಕೆ ಸೇರಿಸಿದರು. ಶಾಯ್ ಹೋಪ್(80 ಎಸೆತ, ಎರಡು ಬೌಂಡರಿ,ಎರಡು ಸಿಕ್ಸರ್) ಅಜೇಯ 63 ರನ್ ಬಾರಿಸಿದರೆ, ಯುವ ಬ್ಯಾಟ್ಸ್‌ಮನ್ ಕೇಸಿ ಕಾರ್ಟಿ ಕೂಡ ಅಜೇಯ 48(65 ಚೆಂಡು, 4 ಬೌಂಡರಿ) ರನ್​ಗಳ ಕೊಡುಗೆ ನೀಡಿದರು.

ಹಾರ್ದಿಕ್‌ ಪಾಂಡ್ಯ ಸಾರಥ್ಯ

ಇದಕ್ಕೂ ಮೊದಲು ರೋಹಿತ್‌ ಶರ್ಮಾ ಹಾಗೂ ವಿರಾಟ್‌ ಕೊಹ್ಲಿ ಅವರ ವಿಶ್ರಾಂತಿಯೊಂದಿಗೆ ತಂಡದ ಸಾರಥ್ಯ ವಹಿಸಿಕೊಂಡ ಹಾರ್ದಿಕ್‌ ಪಾಂಡ್ಯ ಟಾಸ್ ಸೋತು ಬ್ಯಾಟಿಂಗ್ ಜವಾಬ್ದಾರಿ ವಹಿಸಿಕೊಂಡರು.

ಮಧ್ಯ ಪ್ರದೇಶದಲ್ಲಿ ಅತಿ ಹೆಚ್ಚು ಹುಲಿಗಳು; ಕರ್ನಾಟಕಕ್ಕೆ ಎರಡನೇ ಸ್ಥಾನ

ಟೀಂ ಇಂಡಿಯಾ ಪರ ಆರಂಭಿಕರಾಗಿ ಬಂದ ಇಶಾನ್ ಕಿಶನ್ (55) ಅಮೋಘ ಅರ್ಧಶತಕ ಬಾರಿಸಿ, ಗಿಲ್ ಅವರೊಂದಿಗೆ 90 ರನ್‌ಗಳ ಜೊತೆಯಾಟವಾಡಿದರು. ಶುಭಮನ್‌ ಗಿಲ್ (34) ಕೂಡ ಉತ್ತಮ ಆರಂಭ ಪಡೆದುಕೊಂಡರಾದರೂ ದೊಡ್ಡ ಇನ್ನಿಂಗ್ಸ್ ಕಟ್ಟಲು ಸಾಧ್ಯವಾಗಲಿಲ್ಲ. ಗಿಲ್ ಔಟಾದ ನಂತರ ಇಬ್ಬರ ಜೊತೆಯಾಟ ಮುರಿದುಕೊಂಡಿತು. ಇಲ್ಲಿಂದ ಭಾರತ ತಂಡದ ಪೆವಿಲಿಯನ್ ಪರೇಡ್ ಶುರುವಾಯಿತು.

ಹನ್ನೊಂದರ ಬಳಗದಲ್ಲಿ ಅವಕಾಶ ಪಡೆದಿದ್ದ ಸಂಜು ಸ್ಯಾಮ್ಸನ್ ಮತ್ತು ಅಕ್ಷರ್ ಪಟೇಲ್​ಗೆ ಬ್ಯಾಟಿಂಗ್ ಬಡ್ತಿ ಸಿಕ್ಕಿತ್ತು. ಆದರೆ ಇಬ್ಬರು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲಿಲ್ಲ. ಸಂಜು ಸ್ಯಾಮ್ಸನ್ 9 ರನ್ ಗಳಿಸಿ ಔಟಾದರು. ಅಕ್ಷರ್ ಪಟೇಲ್ (1) ಬಂದಷ್ಟೇ ವೇಗವಾಗಿ ಪೆವಿಲಿಯನ್ ಕಡೆ ಹೆಜ್ಜೆ ಹಾಕಿದರು. ನಾಯಕ ಹಾರ್ದಿಕ್ ಪಾಂಡ್ಯ ಕೂಡ 7 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರೆ, ಸ್ಟಾರ್‌ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ 24 ರನ್ ಗಳಿಸಿ ತಮ್ಮ ವಿಕೆಟ್ ಒಪ್ಪಿಸಿದರು.

ರವೀಂದ್ರ ಜಡೇಜಾ(10) ಮತ್ತು ಶಾರ್ದೂಲ್ ಠಾಕೂರ್(16) ಕೂಡ ಹೆಚ್ಚಿನ ಹೊತ್ತು ನಿಲ್ಲಲಿಲ್ಲ. ಟೀಂ ಇಂಡಿಯಾವನ್ನು ಕಾಡಿದ ವೆಸ್ಟ್ ಇಂಡೀಸ್ ಬೌಲರ್​ಗಳಾದ ಗುಡ್ಕೇಶ್ ಮೋತಿ (36/3) ಮತ್ತು ವೇಗದ ಬೌಲರ್ ರೊಮಾರಿಯೊ ಶೆಫರ್ಡ್ (37/3) ವಿಕೆಟ್ ಪಡೆದರೆ,ಅಲ್ಜಾರಿ ಜೊಸೆಫ್ (35/2) ವಿಕೆಟ್ ಪಡೆದು ಭಾರತ ತಂಡವನ್ನು 181 ರನ್‌ಗಳಿಗೆ ಆಲೌಟ್‌ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...