ಟಿ20| ಪಾಕಿಸ್ತಾನ ವಿರುದ್ಧ ಐತಿಹಾಸಿಕ ಜಯ ಸಾಧಿಸಿದ ಅಫ್ಘಾನಿಸ್ಥಾನ

Date:

ಟಿ20 ಕ್ರಿಕೆಟ್‌ ಇತಿಹಾಸದಲ್ಲೇ ಅಫ್ಘಾನಿಸ್ಥಾನ ತಂಡ, ಬಲಿಷ್ಠ ಪಾಕಿಸ್ತಾನದ ವಿರುದ್ಧ ಚೊಚ್ಚಲ ಗೆಲುವು ಸಾಧಿಸಿದೆ. ಶಾರ್ಜಾ ಕ್ರಿಕೆಟ್‌ ಮೈದಾನದಲ್ಲಿ ನಡೆದ ಮೂರು ಟಿ20 ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಅಪ್ಘಾನ್‌ ಪಡೆ 6 ವಿಕೆಟ್‌ಗಳ ಅಂತರದಲ್ಲಿ ಪಾಕಿಸ್ತಾನವನ್ನು ಮಣಿಸಿತು.

ಟಾಸ್‌ ಗೆದ್ದ ಪಾಕಿಸ್ತಾನ ಮೊದಲು ಬ್ಯಾಟ್‌ ಮಾಡಲು ನಿರ್ಧರಿಸಿತ್ತು. ಆದರೆ ಅಫ್ಘಾನಿಸ್ತಾನದ ಬಿಗು ಬೌಲಿಂಗ್‌ ದಾಳಿ ಎದುರು ರನ್‌ ಗಳಿಸಲು ಪರದಾಡದ ಶಾದಾಬ್‌ ಖಾನ್‌ ಪಡೆ. ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟದಲ್ಲಿ ಕೇವಲ 92 ರನ್‌ಗಳಿಸಲಷ್ಟೇ ಶಕ್ತವಾಯಿತು. ಸುಲಭ ಗುರಿಯನ್ನು 17.5 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟದಲ್ಲಿ ಬೆನ್ನತ್ತಿದ ಅಫ್ಘಾನಿಸ್ತಾನ, ಪಾಕ್‌ ವಿರುದ್ಧ ಮೊದಲ ಗೆಲುವಿನ ಸಂಭ್ರವನ್ನಾಚರಿಸಿತು. ಲಾಂಗ್‌ ಆಫ್‌ ಕಡೆಗೆ ಭರ್ಜರಿ ಸಿಕ್ಸರ್‌ ಬಾರಿಸುವ ಮೂಲಕ ಮುಹಮ್ಮದ್‌ ನಬಿ ಗೆಲುವಿನ ಗಡಿ ದಾಟಿಸಿದರು.

ನಾಯಕ ಬಾಬರ್‌ ಅಝಂ ಸೇರಿದಂತೆ ಐವರು ಪ್ರಮುಖ ಆಟಗಾರರಿಗೆ ಸರಣಿಯ ಮೊದಲ ಪಂದ್ಯದಲ್ಲಿ ವಿಶ್ರಾಂತಿ ನೀಡಲಾಗಿತ್ತು. ಇದರ ಭರಪೂರ ಲಾಭ ಪಡೆದ ರಶೀದ್‌ ಖಾನ್‌ ಬಳಗ ಹೊಸ ಇತಿಹಾಸ ರಚಿಸಿತು.  

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಾಕ್‌ ಪರ   18 ರನ್‌ಗಳಿಸಿದ ಇಮಾದ್‌ ವಾಸಿಂ ಟಾಪ್‌ ಸ್ಕೋರರ್‌ ಎನಿಸಿಕೊಂಡರು. ಉಳಿದಂತೆ ಆರಂಭಿಕ ಸಾಯಿಮ್‌ ಅಯ್ಯೂಬ್‌ 17, ತಯ್ಯಬ್‌ ತಾಹಿರ್‌ 16 ಹಾಗೂ ನಾಯಕ ಶಾದಾಬ್‌ ಖಾನ್‌ 12 ರನ್‌ಗಳಿಸಿದರು. ಅಪ್ಘಾನ್‌ ಪರ 6 ಬೌಲರ್‌ಗಳು 9 ವಿಕೆಟ್‌ಗಳನ್ನು ಹಂಚಿಕೊಂಡರು

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...