ಕೇರಳ: ಆಫ್ರಿಕಾ ಫುಟ್‌ಬಾಲ್ ಆಟಗಾರನ ಮೇಲೆ ಪ್ರೇಕ್ಷಕರಿಂದ ಹಲ್ಲೆ, ಜನಾಂಗೀಯ ನಿಂದನೆ

Date:

ಫುಟ್‌ಬಾಲ್ ಆಟ ನಡೆಯುತ್ತಿದ್ದ ವೇಳೆ ಆಫ್ರಿಕಾ ಖಂಡದ ಐವರಿ ಕೋಸ್ಟ್‌ ದೇಶದ ಫುಟ್‌ಬಾಲ್‌ ಆಟಗಾರನ ಮೇಲೆ ಪ್ರೇಕ್ಷಕರು ಹಲ್ಲೆ ನಡೆಸಿದ ಘಟನೆ ಕೇರಳ ಪಲಪ್ಪುರಂ ಜಿಲ್ಲೆಯಲ್ಲಿ ನಡೆದಿದೆ. ಹಲ್ಲೆ ನಡೆಸಿದ ಗುಂಪು ಜನಾಂಗೀಯವಾಗಿ ನಿಂದಿಸಿದೆ ಎಂದು ಆರೋಪಿಸಲಾಗಿದೆ.

ಘಟನೆ ನಡೆಯುತ್ತಿರುವಾಗ ಪ್ರೇಕ್ಷಕನೊಬ್ಬ ಫುಟ್‌ಬಾಲ್ ಆಟಗಾರನ ಮೇಲೆ ಕಾಲಿನಿಂದ ಒದ್ದಿದ್ದಾನೆ.

ವೈರಲ್‌ ಆಗಿರುವ ವಿಡಿಯೋದಲ್ಲಿರುವಂತೆ, ಹಲ್ಲೆಗೊಳಗಾದ ಯುವಕನ ಹೆಸರು ದೈರ್ರಸ್ಸುಬಾ ಹಸ್ಸಾನೆ ಜೂನಿಯರ್. ಈತ ನೀಲಿ ಬಣ್ಣದ ಟಿಶರ್ಟ್ ಧರಿಸಿದ್ದಾನೆ. ಜನರು ಈತನನ್ನು ಮೈದಾನದಲ್ಲಿ ಅಟ್ಟಾಡಿಸಿಕೊಂಡು ಹಲ್ಲೆ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಟ್ಟಾಡಿಸಿಕೊಂಡು ಓಡಿದ ಜನ ಐವರಿ ಕೋಸ್ಟ್‌ ಆಟಗಾರರನ್ನು ಪದೇಪದೆ ಹಲ್ಲೆ ನಡೆಸಿದ್ದಾರೆ. ಪೆಟ್ಟು ತಿಂದ ಯುವಕ ಮೈದಾನದ ದ್ವಾರದಿಂದ ತೆರಳಿದ್ದಾನೆ.

ಈ ಸುದ್ದಿ ಓದಿದ್ದಾರಾ? ಈ ದಿನ ಸಂಪಾದಕೀಯ | ಮಾರ್ಚ್ ನಲ್ಲೇ ನೀರಿಗಾಗಿ ಹಾಹಾಕಾರ, ಮಿತ ಬಳಕೆಯ ಪಾಠ ಕಲಿಯಲು ಇದು ಸಕಾಲ

ಘಟನೆಯ ನಂತರ ಹಲ್ಲೆಗೊಳಗಾದ ದೈರ್ರಸ್ಸುಬಾ ಹಸ್ಸಾನೆ ಜೂನಿಯರ್ ದೂರು ನೀಡಿದ್ದು, ಪೊಲೀಸರು ಈತನ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.

ಫುಟ್‌ಬಾಲ್‌ ಆಟಗಾರ ದೂರಿನಲ್ಲಿ, ಕಾರ್ನರ್‌ ಕಿಕ್‌ನಲ್ಲಿ ಫುಟ್‌ಬಾಲನ್ನು ಒದೆಯುತ್ತಿರುವ ಸಂದರ್ಭದಲ್ಲಿ ಮೈದಾನದಲ್ಲಿದ್ದ ಪ್ರೇಕ್ಷಕರು ನಿಂದಿಸಿದ್ದಾರೆ. ಪ್ರೇಕ್ಷಕರ ಗುಂಪು ಈತನತ್ತ ಕಲ್ಲುಗಳನ್ನು ತೂರಿದ್ದಾರೆ. ಪೊಲೀಸರು ಪ್ರಕರಣವನ್ನು ತನಿಖೆ ನಡೆಸುತ್ತಿದ್ದಾರೆ.

ದೈರ್ರಸ್ಸುಬಾ ಹಸ್ಸಾನೆ ಜೂನಿಯರ್ ಜವಾಹರ್‌ ಮಾವೋರ್‌ ಫುಟ್‌ಬಾಲ್‌ ಕ್ಲಬ್‌ ಅನ್ನು ಪ್ರತಿನಿಧಿಸುತ್ತಿದ್ದು, ಈ ಕ್ಲಬ್‌ ಸೆವೆನ್ಸ್‌ ಕ್ಲಬ್‌ ಟೂರ್ನಮೆಂಟ್‌ನ ಭಾಗವಾಗಿದೆ. ಮಲಪ್ಪುರಂನಲ್ಲಿ ಸೆವೆನ್ಸ್‌ ಫುಟ್‌ಬಾಲ್‌ ಪ್ರತಿಷ್ಠಿತ ಕ್ರೀಡಾ ಕಾರ್ಯಕ್ರಮವಾಗಿದ್ದು, ಸ್ಥಳೀಯ ಕ್ರೀಡಾಂಗಣಗಳಲ್ಲಿ ಪಂದ್ಯಗಳನ್ನು ಆಯೋಜಿಸಲಾಗುತ್ತದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...