ಟಿ20 ವಿಶ್ವಕಪ್‌ ಫೈನಲ್ | ಸೋಲಿಲ್ಲದವರ ನಡುವೆ ಇಂದು ‘ಚಾಂಪಿಯನ್’ ಪಟ್ಟಕ್ಕಾಗಿ ಸೆಣಸಾಟ

Date:

ಚುಟುಕು ಮಾದರಿಯ ಕ್ರಿಕೆಟ್ ಪಂದ್ಯಾಟವಾಗಿರುವ ಟಿ20 ವಿಶ್ವಕಪ್‌ ಫೈನಲ್​ ಕಾದಾಟಕ್ಕೆ ವೇದಿಕೆ ಸಿದ್ದಗೊಂಡಿದೆ. ಇಂದು ನಡೆಯುವ ಫೈನಲ್​ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಪ್ರಶಸ್ತಿಗಾಗಿ ಕಾದಾಟ ನಡೆಸಲಿದೆ. ಕೂಟದ ಅಜೇಯ ತಂಡಗಳ ನಡುವೆ ನಡೆಯಲಿರುವ ಈ ಸೆಣಸಾಟವು ಕ್ರೀಡಾಭಿಮಾನಿಗಳಲ್ಲಿ ತೀವ್ರ ಕುತೂಹಲ ಉಂಟು ಮಾಡಿದೆ.

ಐಸಿಸಿ ಟಿ20 ವಿಶ್ವಕಪ್‌ ಫೈನಲ್ ಪಂದ್ಯವು ಇಂದು ಬಾರ್ಬಡೋಸ್‌ನ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ 2ನೇ ಸೆಮಿ ಫೈನಲ್ ಪಂದ್ಯಕ್ಕೆ ಇನ್ನಿಲ್ಲದಂತೆ ಕಾಡಿದ್ದ ಮಳೆರಾಯ, ಇಂದು ನಡೆಯಲಿರುವ ಫೈನಲ್ ಪಂದ್ಯಕ್ಕೂ ಅಡ್ಡಿಪಡಿಸುವ ಸಾಧ್ಯತೆ ಇದೆ. ಹಮಾವಾನ ಇಲಾಖೆ ಮೂಲಗಳ ಪ್ರಕಾರ ಶನಿವಾರ ಬಾರ್ಬಡೋಸ್‌ನಲ್ಲಿ ಶೇ.70ರಷ್ಟು ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಫೈನಲ್ ಪಂದ್ಯವು, ಒಂದು ವೇಳೆ ಮಳೆಯಿಂದಾಗಿ ರದ್ದಾದರೆ. ಮೀಸಲು ದಿನದಲ್ಲಿ ಆಟ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಡೀ ಟೂರ್ನಿಯಲ್ಲಿ ಒಂದೂ ಪಂದ್ಯ ಸೋಲದೇ ಅಜೇಯವಾಗಿ ಉಳಿದಿರುವ ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ಮತ್ತು ಏಡೆನ್ ಮಾರ್ಕರಮ್ ನೇತೃತ್ವದ ದಕ್ಷಿಣ ಆಫ್ರಿಕಾ ತಂಡಗಳ ಪೈಕಿ ಯಾರು ಚಾಂಪಿಯನ್ ಆಗಲಿದ್ದಾರೆ ಎಂಬ ಕುತೂಹಲ ಎಲ್ಲೆಡೆ ಮನೆಮಾಡಿದೆ. ಕ್ರಿಕೆಟ್ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾ ತಂಡ ಐಸಿಸಿ ವಿಶ್ವಕಪ್ ಟೂರ್ನಿಯ ಫೈನಲ್ ತಲುಪಿದೆ.

ಈ ಬಾರಿ ಫೈನಲ್ ಗೆದ್ದು ತನ್ನ ಹಣೆಗೆ ಅಂಟಿಕೊಂಡಿರುವ ‘ಚೋಕರ್ಸ್’ ಹಣೆಪಟ್ಟಿಯನ್ನು ಅಳಿಸಿಹಾಕಲು ಏಡನ್ ಮಾರ್ಕರಮ್ ಪಡೆ ಉತ್ಸುಕವಾಗಿದ್ದು, ಐಸಿಸಿ ವಿಶ್ವಕಪ್ ನಲ್ಲಿ ಬರೋಬ್ಬರಿ 10 ವರ್ಷಗಳ ಬಳಿಕ ಫೈನಲ್ ತಲುಪಿರುವ ಭಾರತ ಕೂಡ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿದೆ. ಟೀಮ್ ಇಂಡಿಯಾ ಪ್ರಶಸ್ತಿ ಗೆದ್ದಲ್ಲಿ, ಎರಡನೇ ಬಾರಿಗೆ ಗೆದ್ದಂತಾಗಲಿದೆ. 2007ರಲ್ಲಿ ಪಾಕಿಸ್ತಾನವನ್ನು ಸೋಲಿಸಿ, ಟೀಮ್ ಇಂಡಿಯಾ ಪ್ರಶಸ್ತಿ ಗೆದ್ದಿತ್ತು.

ಭಾರತ ಮತ್ತು ದಕ್ಷಿಣ ಆಫ್ರಿಕಾ ಮುಖಾಮುಖಿ

ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಇದುವರೆಗೆ 26 ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಭಾರತ 14 ಪಂದ್ಯ ಗೆದ್ದರೆ, ದಕ್ಷಿಣ ಆಫ್ರಿಕಾ 11 ಪಂದ್ಯಗಳನ್ನು ಗೆದ್ದಿದೆ.ಒಂದು ಪಂದ್ಯ ಫಲಿತಾಂಶ ಕಂಡಿಲ್ಲ.

ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಒಟ್ಟು 6 ಪಂದ್ಯಗಳಲ್ಲಿ ಆಡಿದ್ದು, ಭಾರತ 4 ಪಂದ್ಯ ಗೆದ್ದಿದೆ. 2 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಗೆಲುವು ಕಂಡಿದೆ. 2022ರಲ್ಲಿ ನಡೆದಿದ್ದ ವಿಶ್ವಕಪ್​ ಟೂರ್ನಿಯಲ್ಲಿ ರೋಹಿತ್​ ಪಡೆ ದಕ್ಷಿಣ ಆಫ್ರಿಕಾ ವಿರುದ್ಧ 5 ವಿಕೆಟ್​ ಅಂತರದ ಸೋಲು ಕಂಡಿತ್ತು.

ಶೇ.70ರಷ್ಟು ಮಳೆ ಸಾಧ್ಯತೆ

ಇಂಗ್ಲೆಂಡ್​ ಮತ್ತು ಭಾರತ ನಡುವಣ ಸೆಮಿ ಫೈನಲ್​ ಪಂದ್ಯಕ್ಕೂ ಮಳೆ ಅಡ್ಡಿಪಡಿಸಿತ್ತು. ಇದೀಗ ಫೈನಲ್​ ಪಂದ್ಯಕ್ಕೂ ಹವಾಮಾನ ಇಲಾಖೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಶೇ.70ರಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ತಿಳಿಸಿದೆ.

ಫೈನಲ್ ಪಂದ್ಯಕ್ಕೆ ಮೀಸಲು ದಿನ

ಇನ್ನು ಹಾಲಿ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯಕ್ಕೆ ಐಸಿಸಿ ಮೀಸಲು ದಿನವನ್ನು ಇರಿಸಿದ್ದು, ಒಂದೊಮ್ಮೆ ನಿಗದಿತ ದಿನ ಪಂದ್ಯ ನಡೆಯದೇ ಇದ್ದರೆ, ಮೀಸಲು ದಿನಕ್ಕೆ ಮುಂದುವರಿಯಲಿದೆ.

ಸೂಪರ್​ 8 ಹಂತದಲ್ಲಿ ಮತ್ತು ಸೆಮಿಫೈನಲ್​ ಪಂದ್ಯ ಮಳೆಯಿಂದ ಮೀಸಲು ದಿನವೂ ಫಲಿತಾಂಶ ಕಾಣದಿದ್ದರೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ಸ್ಥಾನ ಮುಂದಿನ ಹಂತಕ್ಕೇರುತ್ತದೆ. ಆದರೆ ಫೈನಲ್​ ಪಂದ್ಯಕ್ಕೆ ಈ ನಿಯಮ ಅನ್ವಯವಾಗುವುದಿಲ್ಲ.

ಜಂಟಿ ವಿಜೇತರ ಘೋಷಣೆ

ಒಂದು ವೇಳೆ ಫೈನಲ್‌ ಪಂದ್ಯ ಮೀಸಲು ದಿನದಲ್ಲಿಯೂ ನಡೆಯದೇ ಹೋದರೆ, ಆಗ ಎರಡೂ ತಂಡಗಳನ್ನು ಜಂಟಿ ವಿಜೇತರು ಎಂದು ಘೋಷಿಸಲಾಗುತ್ತದೆ. 2002ರಲ್ಲಿ ಶ್ರೀಲಂಕಾದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯ ಮಳೆಯಿಂದ ಪೂರ್ಣಗೊಳಿಸಲು ಸಾಧ್ಯವಾಗದ ಕಾರಣ ಭಾರತ ಮತ್ತು ಆತಿಥೇಯ ಶ್ರೀಲಂಕಾ ಎರಡು ತಂಡಗಳನ್ನು ಜಂಟಿ ವಿಜೇತರನ್ನಾಗಿ ಘೋಷಣೆ ಮಾಡಲಾಗಿತ್ತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...