ಐಪಿಎಲ್ 2023 | ಫೈನಲ್‌ನಲ್ಲಿ ಧೋನಿ ಪಡೆಗೆ 215 ಗುರಿ ನೀಡಿದ ಗುಜರಾತ್‌ ಟೈಟಾನ್ಸ್, ಚೆನ್ನೈಗೆ ಮಳೆ ಕಾಟ

Date:

ಸಾಯಿ ಸುದರ್ಶನ್ ಸ್ಫೋಟಕ ಬ್ಯಾಟಿಂಗ್ ಹಾಗೂ ವೃದ್ಧಿಮಾನ್ ಸಾಹ ಆಕರ್ಷಕ ಅರ್ಧ ಶತಕದ ನೆರವಿನಿಂದ ಐಪಿಎಲ್‌ 2023ರ 16ನೇ ಆವೃತ್ತಿಯ ಫೈನಲ್‌ ಪಂದ್ಯದಲ್ಲಿ ಗುಜರಾತ್‌ ಟೈಟಾನ್ಸ್ ತಂಡ ಚೆನ್ನೈ ಸೂಪರ್‌ ಕಿಂಗ್ಸ್ ತಂಡಕ್ಕೆ 215 ರನ್‌ ಗುರಿ ನೀಡಿದೆ. ಆಟ ಆರಂಭವಾದರೂ ಚೆನ್ನೈಗೆ ಮಳೆ ಕಾಟ ತಡೆಯೊಡ್ಡಿದೆ.

ಟಾಸ್ ಗೆದ್ದ ನಾಯಕ ಧೋನಿ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಶುಭಮನ್ ಗಿಲ್ ಹಾಗೂ ವೃದ್ದಿಮಾನ್ ಸಾಹ ಜೊತೆಯಾಟಕ್ಕೆ ಚೆನ್ನೈ ಬೌಲರ್‌ಗಳು ಸುಸ್ತಾದರು. ಕಳೆದ ಕೆಲ ಪಂದ್ಯಗಳಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲರಾಗಿದ್ದ ವೃದ್ಧಿಮಾನ್‌ ಸಾಹ ಫೈನಲ್‌ನಲ್ಲಿ ಅಬ್ಬರಿಸಿದರು. 

ಆರಂಭದಲ್ಲಿ 20 ಚೆಂಡುಗಳಲ್ಲಿ 7 ಬೌಂಡರಿಗಳೊಂದಿಗೆ  39  ರನ್ ಸಿಡಿಸಿ ಶುಭಮನ್ ಗಿಲ್, ಧೋನಿ ಮಿಂಚಿನ ಸ್ಟಂಪಿಂಗ್‌ಗೆ ಔಟ್ ಆದರು. ಗಿಲ್ ವಿಕೆಟ್ ಪತನ ಬಳಿಕ ಸಾಹ ಹಾಗೂ ಸಾಯಿ ಸುದರ್ಶನ್ ಆರ್ಭಟ ಆರಂಭಗೊಂಡಿತು. ಸಾಹ 39 ಎಸೆತದಲ್ಲಿ 5 ಬೌಂಡರಿ 1 ಸಿಕ್ಸರ್‌ನೊಂದಿಗೆ 54 ರನ್ ಗಳಿಸಿ ಔಟಾದರು. ಆದರೆ ಸಾಯಿ ಸುದರ್ಶನ್ ಸ್ಫೋಟಕ ಬ್ಯಾಟಿಂಗ್ ಮುಂದುವರೆಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಐಪಿಎಲ್‌ 2023 | ಫೈನಲ್‌ನಲ್ಲಿ ಮತ್ತೆ ಮಳೆ ಬಂದರೆ ಸೂಪರ್‌ ಓವರ್‌? ನಿಯಮ ಏನು ಹೇಳುತ್ತದೆ?

ಬೌಂಡರಿ , ಸಿಕ್ಸರ್ ಆಟದ ಮೂಲಕ ಚೆನ್ನೈ ಬೌಲರ್‌ಗಳ ಬೆವರಿಳಿಸಿದರು. ಶತಕದ ಸಮೀಪದಲ್ಲಿದ್ದಾಗ ಸಾಯಿ ಸುದರ್ಶನ್ ಪತಿರಾಣ ಬೌಲಿಂಗ್‌ ಎಲ್‌ಬಿ ಬಲೆಗೆ ಬಿದ್ದರು. 47 ಎಸೆತದಲ್ಲಿ 8 ಬೌಂಡರಿ ಹಾಗೂ 6 ಸಿಕ್ಸರ್ ಮೂಲಕ 96 ರನ್ ಸಿಡಿಸಿದರು.

ರಶೀದ್ ಖಾನ್ ಈ ಪಂದ್ಯದಲ್ಲಿ ಅಬ್ಬರಿಸಲಿಲ್ಲ. ಆದರೆ ನಾಯಕ ಹಾರ್ದಿಕ್ ಪಾಂಡ್ಯ 12 ಎಸೆತದಲ್ಲಿ ಅಜೇಯ 21 ರನ್ ಸಿಡಿಸಿದರು. ಅಂತಿಮವಾಗಿ ಗುಜರಾತ್ ಟೈಟಾನ್ಸ್ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 214 ರನ್ ಪೇರಿಸಿತು.

ಚೆನ್ನೈ ಬ್ಯಾಟಿಂಗ್ ಆರಂಭಗೊಂಡು ಮೊದಲ ಓವರ್‌ನ ಮೂರು ಎಸೆತದಲ್ಲಿ ನಾಲ್ಕು ರನ್‌ ಗಳಿಸಿತ್ತು. ಅಷ್ಟರಲ್ಲೇ ಮಳೆ ಆರಂಭವಾಗಿ ಪಂದ್ಯವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...