ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷರಾಗಿ ಅಜಿತ್‌ ಅಗರ್ಕರ್‌ ನೇಮಕ; ಅನುಭವಗಳ ನಡುವೆ ಹಲವು ಸವಾಲುಗಳು?

Date:

ಐದು ತಿಂಗಳ ನಂತರ ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಕೊನೆಗೂ ಹಿರಿಯರ ಆಯ್ಕೆ ಸಮಿತಿ ಅಧ್ಯಕ್ಷರನ್ನಾಗಿ ಮಾಜಿ ಆಲ್‌ರೌಂಡರ್‌ ಅಜಿತ್‌ ಅಗರ್ಕರ್‌ ಅವರನ್ನು ನೇಮಕ ಮಾಡಿದೆ.

ಚೇತನ್‌ ಶರ್ಮಾ ಈ ವರ್ಷದ ಫೆಬ್ರವರಿಯಲ್ಲಿ ರಾಜೀನಾಮೆ ನೀಡಿದ ನಂತರ ಐದು ತಿಂಗಳಿಂದ ಆಯ್ಕೆ ಸಮಿತಿ ಅಧ್ಯಕ್ಷರ ಸಮಿತಿ ಖಾಲಿಯಿತ್ತು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಅನುಭವ ಹೊಂದಿದ ಹಲವಾರು ಆಟಗಾರರಿದ್ದರೂ ಸಮಿತಿಗೆ ಯಾರನ್ನೂ ಆಯ್ಕೆ ಮಾಡಿರಲಿಲ್ಲ. ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿ ಅಕ್ಟೋಬರ್‌-ನವೆಂಬರ್‌ ತಿಂಗಳಿನಲ್ಲಿ ಭಾರತದಲ್ಲೇ ನಡೆಯುವ ಕಾರಣ ಅಜಿತ್‌ ಅಗರ್ಕರ್‌ ನೇಮಕ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.

ಸುಬ್ರೋತೊ ಬ್ಯಾನರ್ಜಿ, ಸಲೀಲ್ ಅಂಕೋಲಾ, ಶ್ರೀಧರನ್ ಶರತ್ ಸದ್ಯಸರಾಗಿರುವ ಆಯ್ಕೆ ಸಮಿತಿಯಲ್ಲಿ ಶಿವಸುಂದರ್ ದಾಸ್ ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಸುಲಕ್ಷಣ ನಾಯಕ್, ಅಶೋಕ್ ಮಲ್ಹೋತ್ರಾ ಮತ್ತು ಜತಿನ್ ಪರಾಂಜಪೆ ಅವರನ್ನೊಳಗೊಂಡ ಕ್ರಿಕೆಟ್ ಸಲಹಾ ಸಮಿತಿಯು ಅಭ್ಯರ್ಥಿಗಳ ಸಂದರ್ಶನ ನಡೆಸಿದ ಬಳಿಕ ಅಜಿತ್ ಅಗರ್ಕರ್ ಅವರನ್ನು ಆಯ್ಕೆ ಸಮಿತಿ ಅಧ್ಯಕ್ಷರ ಸ್ಥಾನಕ್ಕೆ ನೇಮಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2020ರಲ್ಲಿ ಕೂಡ ಅಗರ್ಕರ್ ಅವರು ಆಯ್ಕೆಗಾರರ ಹುದ್ದೆಯ ಆಕಾಂಕ್ಷಿಯಾಗಿದ್ದರು. ಆದರೆ ಮಾಜಿ ಎಡಗೈ ಸ್ಪಿನ್ನರ್ ಕನ್ನಡಿಗ ಸುನಿಲ್ ಜೋಶಿ ಅವರನ್ನು ಬಿಸಿಸಿಐ ಮುಖ್ಯ ಆಯ್ಕೆಗಾರರನ್ನಾಗಿ ನೇರ ನೇಮಕಾತಿಗೊಳಿಸಲು ನಿರ್ಧರಿಸಿದ ನಂತರ ಉಳಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿರಲಿಲ್ಲ. ಈಗ ಮಾಜಿ ಆಲ್‌ರೌಂಡರ್‌ ಅಜಿತ್‌ ಅಗರ್ಕರ್‌ ಅವರನ್ನು ಆಯ್ಕೆ ಮಾಡಿರುವುದಕ್ಕೆ ಪ್ರಮುಖ ಕಾರಣಗಳು ಇಂತಿವೆ.

ಈ ಸುದ್ದಿ ಓದಿದ್ದೀರಾ? ಕೋಟಿ ಕೊಟ್ಟರೂ ಯಾರಿಗೂ ಬೇಡವಾದ ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥನ ಸ್ಥಾನ!

ಅತ್ಯಂತ ಕಿರಿಯ ಅಭ್ಯರ್ಥಿ

ಹಿಂದೆ ಆಯ್ಕೆಯಾಗಿರುವ ಆಯ್ಕೆ ಸಮಿತಿಯ ಮುಖ್ಯಸ್ಥರಿಗೆ ಹೋಲಿಸಿದರೆ ಅಜಿತ್‌ ಅಗರ್ಕರ್‌ ಅತ್ಯಂತ ಕಿರಿಯವರಾಗಿದ್ದಾರೆ. ಸದ್ಯ ಅವರಿಗೆ 45 ವರ್ಷ. ಟಿ20, ಏಕದಿನ ಮತ್ತು ಟೆಸ್ಟ್‌ ಕ್ರಿಕೆಟ್‌ ಸೇರಿದಂತೆ ಎಲ್ಲ ಮಾದರಿಯಲ್ಲಿ ಆಡಿರುವ ಆಟಗಾರರನ್ನು ಏಕದಿನ ವಿಶ್ವಕಪ್‌ನ ಭಾರತ ತಂಡ ಹಾಗೂ ಇತರ ಸರಣಿಗಳಿಗೆ ನೇಮಕ ಮಾಡಲು ಹಾಗೂ ಆಯ್ಕೆ ಪ್ರಕ್ರಿಯೆಯನ್ನು ಮೇಲ್ವಿಚಾರಣೆ ಮಾಡಲು ಬಿಸಿಸಿಐ ಕಿರಿಯ ಅಭ್ಯರ್ಥಿಯನ್ನು ನೇಮಿಸಿದೆ.

ಆಯ್ಕೆ ಸಮಿತಿಯಲ್ಲಿ ಇದ್ದ ಅನುಭವ

ಅಜಿತ್‌ ಅಗರ್ಕರ್ ಆಯ್ಕೆಗಾರರ ಮುಖ್ಯಸ್ಥನಾಗಿ​ ಹುದ್ದೆಗೇರಿದ್ದು ಇದೇ ಮೊದಲಲ್ಲ. 2017 ಮತ್ತು 2019ರಲ್ಲಿ ಮುಂಬೈ ಕ್ರಿಕೆಟ್ ಅಸೋಸಿಯೇಷನ್‌ಗೆ 2 ಬಾರಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿ ಅನುಭವವನ್ನು ಹೊಂದಿದ್ದಾರೆ. ರಿಕಿ ಪಾಂಟಿಂಗ್ ಮತ್ತು ಸೌರವ್ ಗಂಗೂಲಿ ಅವರಿದ್ದ 2023ರ ಐಪಿಎಲ್ ಫ್ರಾಂಚೈಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಸಹಾಯಕ ಕೋಚ್ ಆಗಿದ್ದರು. ಒಂದು ವಾರದ ಹಿಂದಷ್ಟೇ ರಾಜೀನಾಮೆ ನೀಡಿದ್ದರು.

ಹೆಚ್ಚು ಸಂಬಳ ಪಡೆಯುವ ಅಗರ್ಕರ್

ಆಯ್ಕೆ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಅಗರ್ಕರ್ ಅವರಿಗೆ ಹಿಂದಿನ ಮುಖ್ಯಸ್ಥರಿಗಿಂತ ಹೆಚ್ಚಿನ ಸಂಭಾವನೆ ನೀಡಲಾಗುತ್ತದೆ. ಹಿಂದಿನ ಮುಖ್ಯಸ್ಥರಿಗೆ ವಾರ್ಷಿಕವಾಗಿ 80 ರಿಂದ 1 ಕೋಟಿ ರೂ.ವರೆಗೂ ಸಂಭಾವನೆ ನೀಡಲಾಗುತ್ತಿತ್ತು. ಹಲವು ಅನುಭವ ಹೊಂದಿರುವ ಅಗರ್ಕರ್‌ಗೆ ವಾರ್ಷಿಕ 3 ಕೋಟಿ ರೂ.ಗೆ ಹೆಚ್ಚಿಸಲು ಆಡಳಿತ ಮಂಡಳಿ ಒಪ್ಪಿಗೆ ಸೂಚಿಸಿದೆ.

9 ವರ್ಷ ಅನುಭವ, ಹಲವು ಸವಾಲುಗಳು

ಅಜಿತ್‌ ಅಗರ್ಕರ್‌ ತಮ್ಮ 1998 ರಿಂದ 2013ರ ವರೆಗಿನ ಒಂಬತ್ತು ವರ್ಷಗಳ ಕ್ರಿಕೆಟ್ ವೃತ್ತಿಜೀವನದಲ್ಲಿ 191 ಏಕದಿನ ಪಂದ್ಯ ಹಾಗೂ 26 ಟೆಸ್ಟ್ ಪಂದ್ಯಗಳಲ್ಲಿ ಆಡಿದ ಅನುಭವ ಹೊಂದಿದ್ದಾರೆ. ಇವೆರಡೂ ಮಾದರಿಯಲ್ಲಿ 349 ಅಂತಾರಾಷ್ಟ್ರೀಯ ವಿಕೆಟ್‌ಗಳನ್ನು ಪಡೆದಿದ್ದಾರೆ.  

ಅನುಭವಿ ಕ್ರಿಕೆಟಿಗನಾದ ಅಗರ್ಕರ್, ಆಧುನಿಕ ಕ್ರಿಕೆಟಿನ ಬಗ್ಗೆ ಹೆಚ್ಚು ಜ್ಞಾನ ಹೊಂದಿದ್ದಾರೆ. ಸದ್ಯ ಜಾಗತಿಕ ಕ್ರಿಕೆಟಿನಲ್ಲಿ ಬಲಿಷ್ಠ ತಂಡವೆನಿಸಿರುವ ಭಾರತವು, ಕಳೆದ ಒಂದು ದಶಕದಿಂದ ಐಸಿಸಿ ಟ್ರೋಫಿಯ ಬರ ಅನುಭವಿಸುತ್ತಿದೆ. ಹೀಗಾಗಿ ಆಯ್ಕೆ ಸಮಿತಿಯ ಮುಖ್ಯಸ್ಥರ ಹುದ್ದೆ ಪಡೆದಿರುವ ಅಜಿತ್‌ ಅಗರ್ಕರ್‌ ಮುಂದೆ ಹಲವು ಸವಾಲುಗಳಿವೆ.

ಜುಲೈನಲ್ಲಿ ಪ್ರಾರಂಭವಾಗುವ ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸುವುದು ಅಗರ್ಕರ್ ಮುಂದಿರುವ ಮೊದಲ ಸವಾಲು. ಈಗಾಗಲೇ ಏಕದಿನ ಹಾಗೂ ಟೆಸ್ಟ್ ತಂಡವನ್ನು ಘೋಷಿಸಲಾಗಿದೆ. ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್ ಟೂರ್ನಿಗೂ ಮುನ್ನ ಏಷ್ಯಾಕಪ್ ನಡೆಯಲಿದೆ. ಇದು ಹೊಸ ಆಯ್ಕೆ ಸಮಿತಿಯ ಮುಂದಿರುವ ಮತ್ತೊಂದು ಸವಾಲು. ಹೀಗಾಗಿ ಭಾರತಕ್ಕೆ ಪ್ರಮುಖ ಸವಾಲುಗಳಿರುವ ಸಮಯದಲ್ಲಿಯೇ ಅಗರ್ಕರ್ ಅವರು ಮುಖ್ಯಸ್ಥನ ಸ್ಥಾನ ಅಲಂಕರಿಸಿದ್ದಾರೆ.

blank profile picture 973460 640
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...