ಕುಸ್ತಿಪಟುಗಳ ಮೇಲಿನ ಹಲ್ಲೆಗೆ ಕುಂಬ್ಳೆ ಬೇಸರ; ಆದಷ್ಟು ಬೇಗ ಸಮಸ್ಯೆ ಪರಿಹರಿಸಿ ಎಂದ ಕ್ರಿಕೆಟಿಗ

Date:

ನವದೆಹಲಿಯಲ್ಲಿ ಧರಣಿನಿರತ ಕುಸ್ತಿಪಟುಗಳ ಮೇಲಿನ ಹಲ್ಲೆಗೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಅನಿಲ್‌ ಕುಂಬ್ಳೆ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಅವರು, “ಮೇ 28 ರಂದು ನಮ್ಮ ಕುಸ್ತಿಪಟುಗಳ ಮೇಲೆ ಹಲ್ಲೆ ಮಾಡಿದ ನಂತರ ಏನಾಯಿತು ಎಂಬುದನ್ನು ಕೇಳಿ ಬೇಸರವಾಯಿತು. ಸರಿಯಾದ ಮಾತುಕತೆಯ ಮೂಲಕ ಯಾವುದನ್ನಾದರೂ ಪರಿಹರಿಸಬಹುದು. ಆದಷ್ಟು ಬೇಗ ಪರಿಹಾರವಾಗಲೆಂದು ಆಶಿಸುತ್ತೇನೆ” ಎಂದು ತಿಳಿಸಿದ್ದಾರೆ.

ಈ ನಡುವೆ ತಾವು ಕೂಡ ಕುಸ್ತಿಪಟುಗಳ ಪ್ರತಿಭಟನೆಗೆ ಬೆಂಬಲಿಸುವುದಾಗಿ ತಿಳಿಸಿದ್ದಾರೆ. ಸುದ್ದಿಸಂಸ್ಥೆಯೊಂದಿಗೆ ಮಾತನಾಡಿ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕ್ರಿಕೆಟಿಗರ ಪೈಕಿ ಭಾರತ ತಂಡದ ಮಾಜಿ ನಾಯಕ ಕಪಿಲ್‌ ದೇವ್ ಹಾಗೂ ಇರ್ಫಾನ್ ಪಠಾಣ್ ಬೆಂಬಲ ವ್ಯಕ್ತಪಡಿಸಿದ ನಂತರ ಅನಿಲ್‌ ಕುಂಬ್ಳೆ ಸಹ ಕುಸ್ತಿಪಟುಗಳ ಪ್ರತಿಭಟನೆಗೆ ಕೈಜೋಡಿಸಿದ್ದಾರೆ.

ತೀವ್ರಗೊಂಡ ಪ್ರತಿಭಟನೆ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಸಿಂಗ್‌ ಅವರನ್ನು ಬಂಧಿಸುವಂತೆ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ಕ್ರೀಡಾಪಟುಗಳು ಪದಕಗಳನ್ನು ಗಂಗಾ ನದಿಯಲ್ಲಿ ಎಸೆಯಲು ತೀರ ಪ್ರದೇಶಕ್ಕೆ ಮಂಗಳವಾರ ಸಂಜೆ ಆಗಮಿಸಿದ್ದರು. ಆದರೆ ಕುಸ್ತಿಪಟುಗಳು ತಮ್ಮ ಪದಕಗಳನ್ನು ಗಂಗಾ ನದಿಯಲ್ಲಿ ಬಿಡುವುದನ್ನು ರೈತ ನಾಯಕರು ತಡೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹರಿದ್ವಾರದಲ್ಲಿ ಚಾರಿತ್ರಿಕ ಪ್ರತಿಭಟನೆ; ಕುಸ್ತಿಪಟುಗಳು ಪದಕ ನದಿಗೆಸೆಯುವುದ ತಡೆದ ರೈತ ನಾಯಕ

ಹರಿದ್ವಾರದಲ್ಲಿ ಕುಸ್ತಿಪಟುಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ‘ರೈತ ನಾಯಕ’ ನರೇಶ್ ಟಿಕಾಯತ್, ನದಿಯಲ್ಲಿ ಬಿಡುವುದಕ್ಕಾಗಿ ಕುಸ್ತಿಪಟುಗಳು ತಂದಿದ್ದ ಪದಕಗಳನ್ನು ತಮ್ಮ ವಶಕ್ಕೆ ಪಡೆದಿದ್ದಾರೆ. ಸಮಸ್ಯೆ ಪರಿಹಾರಕ್ಕೆ ತಮಗೆ ʻಐದು ದಿನಗಳ ಸಮಯವನ್ನು ಕೊಡಿʼ ಎಂದು ಟಿಕಾಯತ್‌ ಕುಸ್ತಿಪಟುಗಳಲ್ಲಿ ಮನವಿ ಮಾಡಿದ್ದಾರೆ.

ಇನ್ನು ತಮ್ಮ ಪ್ರತಿಭಟನೆಗೆ ಕೇಂದ್ರ ಸರ್ಕಾರ ಸ್ಪಂದಿಸುವ ಬದಲು ಹಲ್ಲೆಯ ಮೂಲಕ, ಪ್ರತಿಭಟನೆಗೆ ಜಾಗ ನಿರಾಕರಿಸುವ ಮೂಲಕ ಪ್ರತಿಭಟನೆ ಹತ್ತಿಕ್ಕುವುದಕ್ಕೆ ಕುಸ್ತಿಪಟುಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಗಣ್ಯ ಅಥ್ಲೀಟ್‌ಗಳಲ್ಲಿ ಒಬ್ಬರಾದ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸಾಕ್ಷಿ ಮಲಿಕ್, “ನಾವು ಗೆದ್ದ ಪದಕಗಳನ್ನ ಗಂಗಾ ನದಿಗೆ ಎಸೆದು ಅಮರಣಾಂತ ಉಪವಾಸ ಕೂರುತ್ತೇವೆ” ಎಂದು ಪತ್ರ ಬರೆದಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...