ಶ್ರೀಲಂಕಾ ಕ್ರಿಕೆಟ್ ಮಂಡಳಿ ಹಾಳಾಗಲು ಜಯ್ ಶಾ ಕಾರಣ: ಅರ್ಜುನ ರಣತುಂಗ ಸ್ಫೋಟಕ ಹೇಳಿಕೆ

Date:

ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಶ್ರೀಲಂಕಾ ಕ್ರಿಕೆಟ್ (ಎಸ್ಎಲ್‌ಸಿ) ಅನ್ನು ನಿಯಂತ್ರಿಸುತ್ತಿದ್ದಾರೆ ಮತ್ತು ಹಾಳುಗೆಡವುತ್ತಿದ್ದಾರೆ ಎಂದು ಶ್ರೀಲಂಕಾದ ವಿಶ್ವಕಪ್ ವಿಜೇತ ತಂಡದ ನಾಯಕ ಅರ್ಜುನ ರಣತುಂಗ ಆರೋಪಿಸಿದ್ದಾರೆ.

ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ, “ಜಯ್ ಶಾ ಶ್ರೀಲಂಕಾ ಕ್ರಿಕೆಟ್ ಮಂಡಳಿಯನ್ನು ನಿಯಂತ್ರಿಸುತ್ತಿದ್ದಾರೆ. ಅವರ ಒತ್ತಡದಿಂದಾಗಿ ಮಂಡಳಿ ಹಾಳಾಗುತ್ತಿದೆ. ಭಾರತದಲ್ಲಿನ ಒಬ್ಬ ವ್ಯಕ್ತಿ ಶ್ರೀಲಂಕಾ ಕ್ರಿಕೆಟ್ ಅನ್ನು ಹಾಳು ಮಾಡುತ್ತಿದ್ದಾನೆ. ಭಾರತದ ಗೃಹ ಸಚಿವರಾಗಿರುವ ಅವರ ತಂದೆಯ ಕಾರಣದಿಂದಾಗಿ ಅವರು ಪ್ರಭಾವಿಗಳಾಗಿದ್ದಾರೆ” ಎಂದು ಅರ್ಜುನ ರಣತುಂಗ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶ್ರೀಲಂಕಾ ಮಂಡಳಿಯ ಅಧಿಕಾರಿಗಳು ಜಯ್ ಶಾ ಅವರ ಪ್ರಭಾವಕ್ಕೆ ಒಳಗಾಗಿದ್ದು, ಮಂಡಳಿಯನ್ನು ಹಾಳು ಮಾಡಿ ನಿಯಂತ್ರಿಸಬಹುದು. ನಮ್ಮ ಮಂಡಳಿ ಏಕೆ ಹೀಗಾಯಿತು. ಇದಕ್ಕೆ ಕಾರಣರಾದ ಎಲ್ಲರನ್ನೂ ತನಿಖೆಯ ಮೂಲಕ ಬಹಿರಂಗಪಡಿಸಬೇಕಿದೆ. ವ್ಯಕ್ತಿಗತವಾಗಿ ದೇಶಕ್ಕೆ ದ್ರೋಹ ಮಾಡುವವರನ್ನು ಮಂಡಳಿಯ ಅಧ್ಯಕ್ಷರು ಸರಿಯಾದ ತನಿಖೆ ನಡೆಸುವ ಮೂಲಕ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಮಂಡಳಿಯನ್ನು ಸ್ವಚ್ಛಗೊಳಿಸಲು ಸೂಕ್ತ ಸಮಯ ಇದಾಗಿದೆ” ಎಂದು ರಣತುಂಗ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಯವಿಟ್ಟು ಬಿಟ್ಟುಬಿಡಿ, ನನಗೆ ನಾಲ್ಕು ಹೆಣ್ಣುಮಕ್ಕಳಿದ್ದಾರೆ ಎಂದು ಅಂಗಲಾಚಿದರೂ ಅತ್ಯಾಚಾರವೆಸಗಿದ ರಾಕ್ಷಸರು

ತನ್ನ ವ್ಯವಹಾರಗಳನ್ನು ಸ್ವಾಯತ್ತವಾಗಿ ನಿರ್ವಹಿಸಲು ವಿಫಲವಾದ ಕಾರಣ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಶ್ರೀಲಂಕಾ ಮಂಡಳಿಯನ್ನು(ಎಸ್‌ಎಲ್‌ಸಿ) ಅಮಾನತುಗೊಳಿಸಿದ ಕೆಲವು ದಿನಗಳ ನಂತರ ರಣತುಂಗ ಹೇಳಿಕೆ ನೀಡಿದ್ದಾರೆ.

ಅರ್ಜುನ ರಣತುಂಗ 1996ರಲ್ಲಿ ಶ್ರೀಲಂಕಾ ವಿಶ್ವಕಪ್‌ ಮುಡಿಗೇರಿಸಿಕೊಂಡಾಗ ನಾಯಕರಾಗಿದ್ದರು. ಅವರ ಸಾರಥ್ಯದಲ್ಲಿ ತಂಡವು ಹಲವು ವರ್ಷಗಳ ಕಾಲ ಅತ್ಯಂತ ಬಲಿಷ್ಠವಾಗಿತ್ತು.

ಅದಕ್ಕೂ ಮೊದಲು, ಶ್ರೀಲಂಕಾ ಸಂಸತ್ತು ‘ಭ್ರಷ್ಟ ಎಸ್ಎಲ್ಸಿ ಆಡಳಿತ ಮಂಡಳಿಯನ್ನು ವಜಾಗೊಳಿಸಲು ಕರೆ ನೀಡುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿತು. ಐಸಿಸಿ ಇದನ್ನು ರಾಜಕೀಯ ಹಸ್ತಕ್ಷೇಪ ಎಂದು ಪರಿಗಣಿಸಿ ಮಂಡಳಿಯನ್ನು ಅಮಾನತುಗೊಳಿಸಿದೆ.

ಶ್ರೀಲಂಕಾದಲ್ಲಿ ಕ್ರಿಕೆಟ್ ಹಾಗೂ ಅದರ ವ್ಯವಹಾರಗಳನ್ನು ಸ್ವಾಯತ್ತವಾಗಿ ನಿರ್ವಹಿಸುವ ಅವಶ್ಯಕತೆ ಮತ್ತು ಆಡಳಿತ, ನಿಯಂತ್ರಣ ಅಥವಾ ಆಡಳಿತದಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿರಬಾರದು ಎನ್ನುವ ಅಗತ್ಯವನ್ನು ಪೂರೈಸುವಲ್ಲಿ ಮಂಡಳಿ ವಿಫಲವಾಗಿದೆ ಎಂದು ಐಸಿಸಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಅಮಾನತುಗೊಳಿಸುವಿಕೆಯ ಷರತ್ತುಗಳನ್ನು ಐಸಿಸಿ ಮಂಡಳಿಯು ಸರಿಯಾದ ಸಮಯದಲ್ಲಿ ನಿರ್ಧರಿಸುತ್ತದೆ. ನವೆಂಬರ್‌ 21 ರಂದು ಐಸಿಸಿ ಮತ್ತೆ ಸಭೆ ಸೇರಲಿದೆ. ಸಭೆಯ ನಂತರ ಮುಂದಿನ ಕ್ರಮವು ಸ್ಪಷ್ಟವಾಗುವ ನಿರೀಕ್ಷೆಯಿದೆ. ಅಲ್ಲಿಯವರೆಗೆ ಐಸಿಸಿ ಸಂಘಟಿಸುವ ಯಾವುದೇ ಟೂರ್ನಿಯಲ್ಲಿ ಶ್ರೀಲಂಕಾ ಭಾಗವಹಿಸಲು ಅವಕಾಶ ಇಲ್ಲ‌.

2023ರ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಶ್ರೀಲಂಕಾ ತಂಡ 9 ಪಂದ್ಯಗಳ ಪೈಕಿ ಕೇವಲ 2ರಲ್ಲಿ ಮಾತ್ರ ಗೆಲುವು ಸಾಧಿಸಿದ್ದು, 4 ಅಂಕ ಪಡೆದುಕೊಂಡಿತ್ತು. ಬ್ಯಾಟಿಂಗ್‌ ಬೌಲಿಂಗ್‌ ಹಾಗೂ ಕಳಪೆ‌ ಫೀಲ್ಡಿಂಗ್‌ನಿಂದಾಗಿ ವಿಶ್ವಕಪ್‌ನಲ್ಲಿ ಸೋಲು ಅನುಭವಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...