ಏಷ್ಯಾ ಕಪ್ 2025: ಭಾರತ-ಪಾಕಿಸ್ತಾನ ಪುನಃ ಮುಖಾಮುಖಿ

Date:

2025ರ ಏಷ್ಯಾ ಕಪ್ ಟಿ20 ಟೂರ್ನಮೆಂಟ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ರೋಚಕ ಸೆಣಸಾಟಕ್ಕೆ ಕ್ರೀಡಾಪ್ರಿಯರು ಕಾತರದಿಂದ ಕಾಯುತ್ತಿದ್ದಾರೆ. ಸೆಪ್ಟೆಂಬರ್ 14ರಂದು ಗುಂಪು ಹಂತದಲ್ಲಿ ನಡೆದ ಭಾರತ-ಪಾಕಿಸ್ತಾನ ಪಂದ್ಯ ಕುತೂಹಲ ಮಾತ್ರವಲ್ಲದೆ, ವಿವಾದಕ್ಕೂ ಕಾರಣವಾಗಿತ್ತು. ಈಗ ಸೂಪರ್ ಫೋರ್‌ನಲ್ಲಿ ಈ ಎರಡೂ ತಂಡಗಳು ಮತ್ತೊಮ್ಮೆ ಸೆಪ್ಟೆಂಬರ್ 21ರಂದು ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ.

ಗುಂಪು ಹಂತದ ಪಂದ್ಯದ ಟಾಸ್ ಸಮಯದಲ್ಲಿ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರು ಪಾಕಿಸ್ತಾನದ ನಾಯಕನೊಂದಿಗೆ ಕೈಕುಲುಕದಿರುವುದು ಮತ್ತು ಪಂದ್ಯದ ಬಳಿಕ ಭಾರತ ತಂಡವು ಪಾಕಿಸ್ತಾನ ಆಟಗಾರರೊಂದಿಗೆ ಕೈಕುಲುಕಲು ನಿರಾಕರಿಸಿದ್ದು ಭಾರೀ ಚರ್ಚೆಗೆ ಕಾರಣವಾಯಿತು. ಈ ಘಟನೆಯಿಂದ ಕೋಪಗೊಂಡ ಪಾಕಿಸ್ತಾನ ತಂಡವು ಟೂರ್ನಮೆಂಟ್ ಬಹಿಷ್ಕರಿಸುವ ಬೆದರಿಕೆಯನ್ನೂ ಹಾಕಿತ್ತು. ಇದರಿಂದ ಯುಎಇ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೆ ವಿಳಂಬವಾಯಿತು. ಆದರೆ, ಈಗ ವಿವಾದ ಕಡಿಮೆಯಾಗುವ ಮುನ್ನವೇ ಎರಡೂ ತಂಡಗಳು ಸೂಪರ್ ಫೋರ್‌ನಲ್ಲಿ ಮತ್ತೆ ಎದುರಾಗುತ್ತಿವೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರಸ್ತೆ ಗುಂಡಿ ಮುಚ್ಚುವುದು ಸಚಿವ ಡಿ.ಕೆ. ಶಿವಕುಮಾರ್ ಕೆಲಸವೇ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರೂಪ್ ಎನಲ್ಲಿ ಭಾರತ ತಂಡ ಉತ್ತಮ ಪ್ರದರ್ಶನ ನೀಡಿದ್ದು, ಆಡಿದ ಎರಡು ಪಂದ್ಯಗಳನ್ನು ಗೆದ್ದು ಅಗ್ರಸ್ಥಾನದಲ್ಲಿದೆ. ಒಮಾನ್ ವಿರುದ್ಧದ ಕೊನೆಯ ಲೀಗ್ ಪಂದ್ಯವನ್ನು ಭಾರತ ಇನ್ನೂ ಆಡಬೇಕಿದೆ. ಆದರೆ, ಒಮಾನ್ ತಂಡ ತನ್ನ ಎರಡೂ ಆರಂಭಿಕ ಪಂದ್ಯಗಳಲ್ಲಿ ಸೋತು ಸೂಪರ್ ಫೋರ್ ಹಂತದಿಂದ ಹೊರಬಿದ್ದಿದೆ. ಮತ್ತೊಂದೆಡೆ, ಪಾಕಿಸ್ತಾನ ತಂಡ ಗುಂಪು ಹಂತದಲ್ಲಿ ಮೂರು ಪಂದ್ಯಗಳನ್ನು ಆಡಿದ್ದು, ಎರಡು ಗೆಲುವು ಮತ್ತು ಒಂದು ಸೋಲಿನೊಂದಿಗೆ ನಾಲ್ಕು ಅಂಕಗಳನ್ನು ಗಳಿಸಿ ಎರಡನೇ ಸ್ಥಾನದಲ್ಲಿದೆ.

ಗುಂಪು ಹಂತದಲ್ಲಿ ದುಬೈನಲ್ಲಿ ನಡೆದ ಭಾರತ-ಪಾಕಿಸ್ತಾನ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಪ್ರದರ್ಶನ ನೀಡಿತ್ತು. ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ 20 ಓವರ್‌ಗಳಲ್ಲಿ 9 ವಿಕೆಟ್‌ಗೆ ಕೇವಲ 127 ರನ್‌ ಗಳಿಸಿತು. ಇದಕ್ಕೆ ಉತ್ತರವಾಗಿ, ಭಾರತ ತಂಡ 15.5 ಓವರ್‌ಗಳಲ್ಲಿ ಕೇವಲ 3 ವಿಕೆಟ್‌ ಕಳೆದುಕೊಂಡು ಗುರಿಯನ್ನು ಸುಲಭವಾಗಿ ತಲುಪಿತು.

ಸೂಪರ್ ಫೋರ್‌ನ ಈ ಪಂದ್ಯ ಎರಡೂ ತಂಡಗಳಿಗೆ ಮಹತ್ವದ್ದಾಗಿದೆ. ಭಾರತ ತಂಡ ತನ್ನ ಆಕರ್ಷಕ ಫಾರ್ಮ್‌ನೊಂದಿಗೆ ಮತ್ತೊಮ್ಮೆ ಪಾಕಿಸ್ತಾನವನ್ನು ಮಣಿಸುವ ವಿಶ್ವಾಸದಲ್ಲಿದೆ. ಆದರೆ, ಗುಂಪು ಹಂತದ ಸೋಲಿನಿಂದ ಕಂಗೆಟ್ಟಿರುವ ಪಾಕಿಸ್ತಾನ ತಂಡ ಈ ಬಾರಿ ತಿರುಗೇಟು ನೀಡಲು ಸಜ್ಜಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...