ಏಷ್ಯಾ ಕಪ್ | ಒಮಾನ್ ವಿರುದ್ಧ ಭಾರತಕ್ಕೆ ಪ್ರಯಾಸದ ಗೆಲುವು

Date:

ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಮ್ ನಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ಟೂರ್ನಿಯ ಒಮಾನ್ ವಿರುದ್ಧದ ಪಂದ್ಯದಲ್ಲಿ ಶುಕ್ರವಾರ ಭಾರತ ತಂಡವು 21 ರನ್‌ಗಳ ಜಯ ಪ್ರಯಾಸದ ಗೆಲುವು ಸಾಧಿಸಿತು.

ವಿಶ್ವದ ನಂಬರ್ ಒನ್ ಟಿ20 ತಂಡವಾಗಿರುವ ಭಾರತದ ವಿರುದ್ಧ ದಿಟ್ಟ ಆಟ ಪ್ರದರ್ಶಿಸಿದ ಕ್ರಿಕೆಟ್ ಶಿಶುಗಳಾದ ಒಮಾನ್ ತಂಡ ಪಂದ್ಯ ಸೋತರೂ ಎಲ್ಲರ ಮನಸ್ಸು ಗೆದ್ದಿತು. ಏಕಪಕ್ಷೀಯ ಗೆಲುವಿನ ನಿರೀಕ್ಷೆಯಲ್ಲಿದ್ದ ಭಾರತ ತಂಡಕ್ಕೆ ‘ಅನನುಭವಿ’ ಒಮಾನ್ ಸುಲಭವಾಗಿ ಮಣಿಯಲಿಲ್ಲ.

ಶುಕ್ರವಾರ ನಡೆದ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ‘ಎ’ ಗುಂಪಿನ ಕೊನೆಯ ಪಂದ್ಯದಲ್ಲಿ ಸೂರ್ಯಕುಮಾ‌ರ್ ಯಾದವ್ ಪಡೆ ಕೊನೆಗೆ 21 ರನ್‌ಗಳ ಪ್ರಯಾಸದ ಜಯ ಗಳಿಸಿತು. ಈ ಗೆಲುವಿನ ಮೂಲಕ ಭಾರತ ತಂಡ ಎ ಬಣದಿಂದ ಅಜೇಯವಾಗಿ ಸೂಪರ್ 4ರ ಹಂತವನ್ನು ಪ್ರವೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಬುಧಾಬಿಯ ಶೇಕ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆದ ಏಷ್ಯಾ ಕಪ್ ಎ ಬಣದ ಕೊನೆಯ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 188 ರನ್ ಗಳಿಸಿತು. ಇದಕ್ಕುತ್ತರವಾಗಿ ಒಮಾನ್ ತಂಡ 20 ಓವರ್ ಗಳು ಮುಗಿದಾಗ 4 ವಿಕೆಟ್ ನಷ್ಟಕ್ಕೆ 167 ರನ್ ಗಳಿಸಲಷ್ಟೇ ಶಕ್ತವಾಯಿತು. ಆದರೆ ಒಂದೊಂದು ವಿಕೆಟ್‌ಗೂ ಭಾರತದ ಬೌಲಿಂಗ್ ಪಡೆಯನ್ನು ಪರದಾಡುವಂತೆ ಮಾಡಿದ ಒಮಾನ್ ಬ್ಯಾಟಿಂಗ್ ಪಡೆ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ಆಮಿರ್ ಕಲೀಂ ಮತ್ತು ಹಮೀದ್ ಮಿರ್ಝಾ ಜೋಡಿಯು ಭಾರತದ ಪಾಲಿಗೆ ಅಕ್ಷರಶಃ ಸೋಲಿನ ರುಚಿ ತೋರಿಸಲು ಹೊರಟ ಹಾಗಿತ್ತು. ಇವರಿಬ್ಬರು 2ನೇ ವಿಕೆಟ್ ಗೆ 93 ರನ್ ಗಳ ಜೊತೆಯಾಟವಾಡಿದರು. ಕೊನೆಯ 3 ಓವರ್ ಗಳಲ್ಲಿ ಒಮಾನ್ ಗೆ ಬೇಕಿದ್ದುದ್ದು 48 ರನ್ ಗಳು . ಈ ಹಂತದಲ್ಲಿ ಆಮೀಕ್ ಕಲೀಂ ಅವರು ಹರ್ಷಿತ್ ರಾಣಾ ಅವರ ಬೌಲಿಂಗ್ ನಲ್ಲಿ ನಿರಂತರ 2 ಬೌಂಡರಿ ಹೊಡೆದು ಒಮಾನ್ ಪಾಳಯದಲ್ಲಿ ಹರ್ಷ ತುಂಬಿದ್ದರು. ಆದರೆ 4ನೇ ಎಸೆತದಲ್ಲಿ ಕಲೀಂ ಅವರು ಹೊಡೆದ ಚೆಂಡನ್ನು ಲೆಗ್ ಲಾಂಗ್ ನಲ್ಲಿದ್ದ ಹಾರ್ದಿಕ್ ಪಾಂಡ್ಯ ಅವರು ಉತ್ತಮ ಫೀಲ್ಡೀಂಗ್ ಮೂಲಕ ಕ್ಯಾಚ್ ಹಿಡಿದರು. ಅಲ್ಲಿಗೆ ಒಮಾನ್‌ ಗೆಲುವಿನ ನಿರೀಕ್ಷೆಗೆ ಬಲ ಬರಲೇ ಇಲ್ಲ.

ಭಾರತ ತಂಡವು ಈ ಮೊದಲೇ ಸೂಪರ್ ಫೋರ್ ಹಂತಕ್ಕೆ ಸ್ಥಾನ ಕಾಯ್ದಿರಿಸಿತ್ತು. ಹೀಗಾಗಿ ಸೂರ್ಯಕುಮಾ‌ರ್ ಅವರು ಬ್ಯಾಟಿಂಗ್‌ಗೆ ಇಳಿಯದೆ ಉಳಿದ ಆಟಗಾರರಿಗೆ ‘ಅಭ್ಯಾಸ’ಕ್ಕೆ ಅವಕಾಶ ಮಾಡಿಕೊಟ್ಟರು. ವೇಗಿ ಜಸ್‌ಪ್ರೀತ್ ಬೂಮ್ರಾ ಮತ್ತು ಸ್ಪಿನ್ನರ್ ವರುಣ್ ಚಕ್ರವರ್ತಿ ಅವರಿಗೆ ವಿಶ್ರಾಂತಿ ನೀಡಿ ಅರ್ಷದೀಪ್ ಸಿಂಗ್‌ ಮತ್ತು ಹರ್ಷಿತ್ ರಾಣಾಗೆ ಅವಕಾಶ ನೀಡಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...