ಟಿ20 ವಿಶ್ವಕಪ್ | ಆಸೀಸ್ ವಿರುದ್ಧ ಸೇಡು ತೀರಿಸಿಕೊಳ್ಳುವ ತವಕದಲ್ಲಿ ಭಾರತ; ವಿದೇಶಿ ನೆಲದಲ್ಲಿ ಮಳೆಯ ಮುನ್ಸೂಚನೆ

Date:

ಕಳೆದ ವರ್ಷ ತವರಿನಲ್ಲಿ ನಡೆದ ಏಕದಿನ ವಿಶ್ವಕಪ್​ ಹಾಗೂ ಟೆಸ್ಟ್​ ಚಾಂಪಿಯನ್​ಶಿಪ್​ನಲ್ಲಿ ಭಾರತಕ್ಕೆ ಆಸ್ಟ್ರೇಲಿಯಾ ಪೆಟ್ಟು ನೀಡಿ ಟ್ರೋಫಿಯನ್ನು ತನ್ನದಾಗಿಸಿಕೊಂಡಿತ್ತು. ಈ ಹಿಂದಿನ ಎರಡು ಐಸಿಸಿ ಟೂರ್ನಿಗಳ ಫೈನಲ್​ಗಳಲ್ಲಿ ಟೀಂ ಇಂಡಿಯಾಕ್ಕೆ ಮಾರಕವಾಗಿರುವ ಆಸೀಸ್​ ವಿರುದ್ಧ ಸೇಡು ತೀರಿಸಿಕೊಳ್ಳಲು ರೋಹಿತ್​ ಪಡೆಗಿಂದು ಸುವರ್ಣಾವಕಾಶ ಲಭಿಸಿದೆ. ಟಿ20 ವಿಶ್ವಕಪ್ ಟೂರ್ನಿಯ ಸೂಪರ್​ 8 ಹಂತದಲ್ಲಿ ಎರಡೂ ತಂಡಗಳಿಗೆ ಕೊನೆಯ ಪಂದ್ಯವಾಗಿದ್ದು, ಭಾರತ ಗೆದ್ದರೆ ಸೆಮಿಫೈನಲ್​ಗೆ ತಲುಪಲಿದೆ. ಇನ್ನೊಂದೆಡೆ, ಆಸ್ಟ್ರೇಲಿಯಾ ಗೆದ್ದರೂ ಕೂಡ ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶಗಳ ನಡುವಿನ ಹಣಾಹಣಿಯ ಫಲಿತಾಂಶದ ಮೇಲೆ ಸೆಮಿಫೈನಲ್​ ಹಾದಿ ನಿರ್ಧಾರವಾಗಲಿದೆ.

ಡರೆನ್ ಸಮಿ ರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಇಂದು ನಡೆಯಲಿರುವ ಟಿ20 ವಿಶ್ವಕಪ್​ ಟೂರ್ನಿಯ ಮಹತ್ವದ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಎದುರಾಗಲಿವೆ. ಭಾರತ ಈಗಾಗಲೇ ಟೂರ್ನಿಯಲ್ಲಿ ಗೆಲುವಿನ ಓಟ ಮುಂದುವರೆಸಿದ್ದರೆ, ಆಸ್ಟ್ರೇಲಿಯಾ ಈ ಹಿಂದಿನ ಪಂದ್ಯದಲ್ಲಿ ಅಫ್ಘಾನಿಸ್ತಾನದ ವಿರುದ್ಧ ಸೋತು, ಟೂರ್ನಿಯಿಂದ ಹೊರಬೀಳುವ ಭೀತಿಯಲ್ಲಿದೆ. ಒಂದು ವೇಳೆ ಮಳೆ ಬಂದು ಪಂದ್ಯಕ್ಕೆ ಅಡಚಣೆ ಉಂಟಾದರೆ ಕಾಂಗರೂ ಪಡೆಯು ಸಂಕಷ್ಟಕ್ಕೆ ಸಿಲುಕಲಿದೆ. ಮಳೆ ಬಾರದಿದ್ದರೆ, ಬಾಂಗ್ಲಾದೇಶ ವಿರುದ್ಧ ಗೆಲುವು ಸಾಧಿಸಿ ಸೆಮಿಫೈನಲ್‌ ಹಂತಕ್ಕೇರುವ ಅವಕಾಶ ಅಫ್ಘಾನಿಸ್ತಾನಕ್ಕೆ ಸಿಗಲಿದೆ.

ಈ ಸುದ್ದಿ ಓದಿದ್ದೀರಾ? ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ಕರ್ನಾಟಕದ ಆಟಗಾರ ಡೇವಿಡ್ ಜಾನ್ಸನ್ ನಿಧನ: ಆತ್ಮಹತ್ಯೆ ಶಂಕೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೋಹಿತ್​ ಪಡೆ ಆಸ್ಟ್ರೇಲಿಯಾವನ್ನು ಭಾರಿ ಅಂತರದಿಂದ ಸೋಲಿಸಿದರೆ, ಟೂರ್ನಿಯಿಂದ ಹೊರಗಟ್ಟಬಹುದು. ಇಂದಿನ ಪಂದ್ಯದಲ್ಲಿ ಭಾರತ ಸೋತರೆ, ರನ್​ರೇಟ್​ ಲೆಕ್ಕಾಚಾರ ಕೂಡ ಮುನ್ನೆಲೆಗೆ ಬರಲಿದೆ. +2.425 ರನ್​ ರೇಟ್ ಹೊಂದಿರುವ ರೋಹಿತ್​ ಪಡೆಯು ಸೆಮಿಫೈನಲ್‌ ಪ್ರವೇಶಿಸಲು ಹೆಚ್ಚಿನ ಅವಕಾಶ ಹೊಂದಿದೆ.

ಸೂಪರ್​-8 ಗ್ರೂಪ್​ 1ರಲ್ಲಿ ಭಾರತ ಎರಡೂ ಪಂದ್ಯಗಳಲ್ಲಿ ಜಯಗಳಿಸಿ, 4 ಅಂಕಗಳೊಂದಿಗೆ (+2.425) ಅಗ್ರಸ್ಥಾನದಲ್ಲಿದೆ. ಇನ್ನೊಂದೆಡೆ, ಆಸೀಸ್​ ತಲಾ ಒಂದು ಗೆಲುವು ಹಾಗೂ ಸೋಲಿನೊಂದಿಗೆ ಎರಡು ಅಂಕಗಳೊಂದಿಗೆ (+0.223) 2ನೇ ಸ್ಥಾನದಲ್ಲಿದೆ. ಮತ್ತೊಂದೆಡೆ, ಎರಡರಲ್ಲಿ ಒಂದು ಪಂದ್ಯ ಗೆದ್ದಿರುವ ಅಫ್ಘಾನಿಸ್ತಾನ ಮೂರನೇ ಸ್ಥಾನ ಪಡೆದಿದೆ. ಆದರೆ, ಅವರ ರನ್​ರೇಟ್​ -0.650 ಇದ್ದು, ಬಾಂಗ್ಲಾದೇಶ (-2.489) ಎರಡೂ ಪಂದ್ಯಗಳನ್ನು ಸೋತು ಟೂರ್ನಿಯಿಂದ ಹೊರಬೀಳುವ ಸ್ಥಿತಿಯಲ್ಲಿದೆ.

ಒಂದು ವೇಳೆ ಇಂದು ಆಸೀಸ್ ಗೆದ್ದು, ಅತ್ತ ಅಫ್ಘಾನಿಸ್ತಾನ ಕೂಡ ಗೆಲುವು ಕಂಡರೆ, ಭಾರತ ಸೇರಿದಂತೆ ಈ ಮೂರು ತಂಡಗಳಲ್ಲಿ ರನ್‌ ಸರಾಸರಿಯಲ್ಲಿ ಅಗ್ರಸ್ಥಾನದಲ್ಲಿದ್ದವರು ಸೆಮಿಫೈನಲ್ ತಲುಪಲಿದ್ದಾರೆ. ಆಸ್ಟ್ರೇಲಿಯಾವನ್ನು ಭಾರತ ತಂಡ ಮಣಿಸಿದರೆ, ಅಫ್ಘಾನಿಸ್ತಾನಕ್ಕೆ ಹೆಚ್ಚಿನ ಅವಕಾಶ ಲಭಿಸುತ್ತದೆ.

ಇನ್ನೊಂದು ಸಾಧ್ಯತೆಯಲ್ಲಿ ಆಸ್ಟ್ರೇಲಿಯಾ ತಂಡ ಟೀಂ ಇಂಡಿಯಾ ತಂಡವನ್ನು ಕನಿಷ್ಠ 41 ರನ್‌ಗಳ ಅಂತರದಲ್ಲಿ ಮಣಿಸಿ, ಅತ್ತ ಅಫ್ಘಾನಿಸ್ತಾನ ತಂಡ ಬಾಂಗ್ಲಾದೇಶ ಎದುರು 81 ರನ್‌ಗಳ ಅಂತರದ ಬೃಹತ್‌ ಗೆಲುವು ದಾಖಲಿಸಿದರೆ ಆಗ ಆಸ್ಟ್ರೇಲಿಯಾ ಮತ್ತು ಅಫ್ಘಾನ್‌ ತಂಡಗಳು ಸೆಮಿಫೈನಲ್‌ಗೆ ಮುನ್ನಡೆದು ಟೀಮ್ ಇಂಡಿಯಾ ಸ್ಪರ್ಧೆಯಿಂದ ಹೊರಬೀಳುತ್ತದೆ. ಈ ಸಾಧ್ಯತೆ ತೀರಾ ಕಡಿಮೆ.

ಬಾಂಗ್ಲಾ ವಿರುದ್ಧ ಹೆಚ್ಚಿನ ಅಂತರದಲ್ಲಿ ಗೆಲುವು ಸಾಧಿಸಿ ಮುಂದಿನ ಹಂತಕ್ಕೆ ತಲುಪಬಹುದು. ಅಫ್ಘನ್ನರು ಸೋತರೆ ಕಾಂಗರೂ ಪಡೆಗೆ ಸೆಮಿಫೈನಲ್‌ಗೆ ಏರುವ ಅವಕಾಶ ಸಿಗಲಿದೆ.

ಮಳೆ ಭೀತಿ:

ಸ್ಥಳೀಯ ಹವಾಮಾನ ವರದಿಗಳ ಪ್ರಕಾರ, ಇಂದಿನ ಪ್ರಮುಖ ಪಂದ್ಯದ ವೇಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚಯಿದೆ. ಆದರೆ ಮಳೆಯ ಸಾಧ್ಯತೆಯು ಕೇವಲ ಶೇ.15 ರಷ್ಟು ಇದೆ. ಆಟದ ಸಮಯದಲ್ಲಿ ಗುಡುಗು ಸಹಿತ ಶೇ. 5ರಷ್ಟು ಲಘು ಮಳೆಯಾಗುವ ಸಾಧ್ಯತೆಗಳಿವೆ.

ಪಂದ್ಯದ ಆರಂಭ:

ಭಾರತೀಯ ಕಾಲಮಾನ 8 ಗಂಟೆಗೆ

ಸ್ಥಳ: ಡರೆನ್ ಸಮಿ ರಾಷ್ಟ್ರೀಯ ಕ್ರಿಕೆಟ್ ಮೈದಾನ, ಗ್ರಾಸ್ ಐಲೆಟ್, ಸೇಂಟ್ ಲೂಸಿಯಾ

ಭಾರತದ ಸಂಭಾವ್ಯ 11 ಬಳಗ:

ರೋಹಿತ್ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್(ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ಜಸ್‌ಪ್ರೀತ್‌ ಬುಮ್ರಾ.

ಆಸ್ಟ್ರೇಲಿಯಾ ಸಂಭಾವ್ಯ ತಂಡ:

ಟ್ರಾವಿಸ್ ಹೆಡ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯ್ನಿಸ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್, ಮಿಚೆಲ್ ಸ್ಟಾರ್ಕ್

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...