ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್​ ಫೈನಲ್‌ | ರಬಾಡ ಮಾರಕ ದಾಳಿ; 212 ರನ್‌ಗಳಿಗೆ ಆಸೀಸ್‌ ಆಲೌಟ್

Date:

ಮೂರನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್​ನ ಫೈನಲ್‌ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡುತ್ತಿರುವ ಆಸ್ಟ್ರೇಲಿಯಾ ಮೊದಲ ಇನಿಂಗ್ಸ್‌ನಲ್ಲಿ ದಕ್ಷಿಣ ಆಫ್ರಿಕಾ ಬೌಲರ್‌ಗಳ ದಾಳಿಗೆ ಕಂಗಾಲಾಗಿ 212 ರನ್‌ ಗಳಿಗೆ ಆಲೌಟ್‌ ಆಗಿದೆ. ಮಿಂಚಿನ ಬೌಲಿಂಗ್‌ ಮಾಡಿದ ಕಗ್ಗಿಸೊ ರಬಾಡ 5 ವಿಕೆಟ್‌ ಕಬಳಿಸಿ ಯಶಸ್ವಿ ಬೌಲರ್‌ ಎನಿಸಿದರು.

ಇಂಗ್ಲೆಂಡ್​ನ ಲಾರ್ಡ್ಸ್‌ ಮೈದಾನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ನಾಯಕ ಟೆಂಬಾ ಬವುಮಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಉತ್ತಮ ಆರಂಭವನ್ನು ಪಡೆಯಲಿಲ್ಲ. ಒಂದೇ ಓವರ್‌ನಲ್ಲಿ ಎರಡು ವಿಕೆಟ್‌ಗಳನ್ನು ಪಡೆಯುವ ಮೂಲಕ ರಬಾಡ ಕಾಂಗರೂಗಳ ಬ್ಯಾಟಿಂಗ್ ಬೆನ್ನೆಲುಬು ಮುರಿದರು.

ಇನಿಂಗ್ಸ್‌ನ ಏಳನೇ ಓವರ್‌ನ ಮೂರನೇ ಎಸೆತದಲ್ಲಿ ಬೆಡಿಂಗ್‌ಹ್ಯಾಮ್‌ಗೆ ಉಸ್ಮಾನ್ ಖವಾಜಾ ಕ್ಯಾಚ್ ನೀಡಿದರೆ, ಅದೇ ಓವರ್​ನ ಕೊನೆಯ ಎಸೆತದಲ್ಲಿ ಕ್ಯಾಮರೂನ್ ಗ್ರೀನ್, ಮಾರ್ಕ್ರಾಮ್‌ಗೆ ಕ್ಯಾಚ್ ನೀಡಿ ಔಟಾದರು. ಆರಂಭಿಕ ಆಟಗಾರ ಖವಾಜ ಖಾತೆ ತೆರೆಯಲು ಸಾಧ್ಯವಾಗದೆ ವಿಕೆಟ್ ಒಪ್ಪಿಸಿದರೆ. ಗ್ರೀನ್ ಇನಿಂಗ್ಸ್ ಕೇವಲ ನಾಲ್ಕು ರನ್​ಗಳಿಗೆ ಅಂತ್ಯವಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ವಿರಾಟ್‌ ಕೊಹ್ಲಿ, ರೋಹಿತ್‌ ಶರ್ಮಾ ದಾಖಲೆ ಅಳಿಸಿದ ಜೋಸ್‌ ಬಟ್ಲರ್

ಸತತ 2 ಚೆಂಡುಗಳಲ್ಲಿ ವಿಕೆಟ್ ಪತನದ ನಂತರ ಮತ್ತಷ್ಟು ತಾಳ್ಮೆಯ ಆಟಕ್ಕೆ ಮುಂದಾದ ಮಾರ್ನಸ್ ಲಬುಶೇನ್ ಮತ್ತು ಸ್ಟೀವ್ ಸ್ಮಿತ್ ಮೂರನೇ ವಿಕೆಟ್‌ಗೆ 30 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು. ಇವರಿಬ್ಬರು ಬೃಹತ್ ಜೊತೆಯಾಟ ನೀಡುತ್ತಾರೆ ಎನ್ನುತ್ತಿರುವಾಗಲೇ ದಾಳಿಗಿಳಿದ ಯಾನ್ಸನ್, ಲಬುಶೇನ್ ಅವರ ವಿಕೆಟ್ ಉರುಳಿಸಿದರು. ಲಬುಶೇನ್ 17 ರನ್ ಗಳಿಸಿ ಔಟಾದರೆ, ತಂಡದ ಬ್ಯಾಟಿಂಗ್ ಜೀವಾಳವಾಗಿದ್ದ ಟ್ರಾವಿಸ್ ಹೆಡ್ 11 ರನ್ ಬಾರಿಸಿ ಯಾನ್ಸನ್​ಗೆ ವಿಕೆಟ್ ಒಪ್ಪಿಸಿದರು.

ತಾಳ್ಮೆಯಿಂದ ಬ್ಯಾಟಿಂಗ್‌ ಮಾಡಿ ಅರ್ಧ ಶತಕ ಗಳಿಸಿದ್ದ ಅನುಭವಿ ಸ್ಟೀವ್ ಸ್ಮಿತ್ 66 ರನ್‌ ಗಳಿಸಿದ್ದಾಗ ಮಾರ್ಕ್ರಮ್ ಬೌಲಿಂಗ್‌ನಲ್ಲಿ ಔಟಾದರು. ಅವರ ಆಟದಲ್ಲಿ 10 ಆಕರ್ಷಕ ಬೌಂಡರಿಗಳಿದ್ದವು. ಅಲೆಕ್ಸ್‌ ಕ್ಯಾರಿ 23 ರನ್‌ ಗಳಿಸಿ ಕೇಶವ್‌ ಮಹಾರಾಜ್‌ಗೆ ವಿಕೆಟ್‌ ಒಪ್ಪಿಸಿದರು

ದಕ್ಷಿಣ ಆಫ್ರಿಕಾ ಪರ ಕಗಿಸೊ ರಬಾಡ 51/5 ಮತ್ತು ಜಾನ್ಸನ್ 49/3 ವಿಕೆಟ್ ಕಿತ್ತು ಯಶಸ್ವಿ ಬೌಲರ್‌ಗಳೆನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...