IND vs AUS | ಆಸೀಸ್‌ 445ಕ್ಕೆ ಆಲ್ಔಟ್; ಭಾರತಕ್ಕೆ ಆರಂಭಿಕ ಆಘಾತ, ನಿರಾಶೆ ಮೂಡಿಸಿದ ಕೊಹ್ಲಿ

Date:

ಬ್ರಿಸ್ಬೇನ್‌ನ ಗಾಬಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ವಿರುದ್ಧದ ಮೂರನೇ ಟೆಸ್ಟ್‌ನ ಮೂರನೇ ದಿನದಂದು ಆಸೀಸ್ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 445 ರನ್‌ಗಳನ್ನು ಪೇರಿಸಿ ಆಲೌಟ್ ಆಗಿದೆ.

ಬ್ಯಾಂಟಿಂಗಿಗೆ ಇಳಿದ ಭಾರತ, ಆರಂಭಿಕ ಆಘಾತ ಕಂಡು, ಸದ್ಯ 4 ವಿಕೆಟ್ ಕಳೆದುಕೊಂಡು ಕೇವಲ 48 ರನ್‌ಗಳನ್ನು ಪೇರಿಸುವಲ್ಲಿ ಪರದಾಡಿದೆ. ಮಳೆಯ ಕಾರಣ ಆಟಕ್ಕೆ ತಡೆ ಉಂಟಾಗಿದೆ. ಮೊದಲ ದಿನವು ಮಳೆಯಿಂದಾಗಿ ಆಟ ಸ್ಥಗಿತಗೊಂಡಿತ್ತು. ಎರಡನೇ ದಿನದಾಟದಲ್ಲಿ ಆಸ್ಟ್ರೇಲಿಯಾ ತಂಡವು ಭಾರತ ತಂಡದ ಬೆವರಿಳಿಸಿತ್ತು. ಆದರೆ ಬೂಮ್ರಾ ಭಾರತ ಪರವಾಗಿ ಏಕಾಂಗಿ ಹೋರಾಟ ನಡೆಸಿದ್ದರು.

ಇದನ್ನು ಓದಿದ್ದೀರಾ? IND vs AUS | ಬೂಮ್ರಾ ಅಬ್ಬರಕ್ಕೆ ಆಸ್ಟ್ರೇಲಿಯಾ ಬ್ಯಾಟರ್‌ಗಳು ತತ್ತರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನೊಂದೆಡೆ ಭಾರತದ ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ ಕ್ರಮವಾಗಿ 4, 1, 3 ರನ್‌ಗಳನ್ನು ಗಳಿಸಿ ತೀವ್ರ ನಿರಾಶೆ ಹುಟ್ಟು ಹಾಕಿದ್ದಾರೆ.

ಹಿಂದಿನ ದಿನ ಏಳು ವಿಕೆಟ್‌ಗೆ 405 ರನ್‌ಗಳನ್ನು ಗಳಿಸಿದ್ದ ಆಸೀಸ್ ಇಂದು ಬೆಳಗ್ಗೆ ಆಟ ಪುನರಾರಂಭಿಸಿ ಹೆಚ್ಚುವರಿ 40 ರನ್ ಗಳಿಸಿ ಒಟ್ಟು ರನ್‌ಗಳನ್ನು 445ಕ್ಕೆ ಏರಿಸಿತು. ಎರಡನೇ ದಿನದಲ್ಲಿ ಟ್ರಾವಿಸ್ ಹೆಡ್ ಮತ್ತು ಸ್ಟೀವ್ ಸ್ಮಿತ್ ಅವರ ಅವಳಿ ಶತಕ ಪಡೆದರೆ, ಅದರ ನಂತರ ಅಲೆಕ್ಸ್ ಕ್ಯಾರಿ 70 ರನ್ ಗಳಿಸಿ ಭಾರತದ ಬೌಲರ್‌ಗಳಿಗೆ ನೀರಿಳಿಸಿದರು.

ಆದರೆ ಭಾರತದ ಪರವಾಗಿ ಏಕಾಂಗಿಯಾಗಿ ಸೆಣಸಿದ ಬಲಗೈ ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ ಆರು ವಿಕೆಟ್‌ಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಆ ಮೂಲಕ ಆಸ್ಟ್ರೇಲಿಯಾದ ಎದುರಿನ ಪಂದ್ಯದಲ್ಲಿ ಒಟ್ಟು 50 ವಿಕೆಟ್‌ಗಳನ್ನು ಪಡೆದಿದ್ದಾರೆ. ಇನ್ನುಳಿದಂತೆ ಮೊಹಮ್ಮದ್ ಸಿರಾಜ್ ಎರಡು, ಆಕಾಶ್ ದೀಪ್ ಒಂದು ವಿಕೆಟ್ ಪಡೆದಿದ್ದಾರೆ. ಐದು ಪಂದ್ಯಗಳ ಸರಣಿ 1-1ರಲ್ಲಿ ಸಮಬಲಗೊಂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...