ಕ್ರಿಕೆಟ್ | ವಿಶ್ವಕಪ್‌ನಲ್ಲಿ ನೀರಸ ಪ್ರದರ್ಶನ: ಪಾಕ್ ತಂಡದ ನಾಯಕತ್ವ ತ್ಯಜಿಸಿದ ಬಾಬರ್ ಆಝಂ

Date:

2023ರ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಪಾಕಿಸ್ತಾನವು ತಂಡವು ನೀರಸ ಪ್ರದರ್ಶನ ನೀಡಿರುವ ಹಿನ್ನೆಲೆಯಲ್ಲಿ ಅದರ ಜವಾಬ್ದಾರಿಯನ್ನು ಹೊತ್ತು, ಪಾಕ್ ತಂಡದ ನಾಯಕತ್ವವನ್ನು ಬಾಬರ್ ಆಝಂ ತ್ಯಜಿಸಿದ್ದಾರೆ.

ಈ ಬಗ್ಗೆ ಬುಧವಾರ ಸಂಜೆ ಟ್ವೀಟ್ ಮಾಡಿರುವ ಬಾಬರ್ ಆಝಂ, ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲ ಮಾದರಿಗಳ ನಾಯಕತ್ವದಿಂದ ಕೆಳಗಿಳಿಯುತ್ತಿರುವುದಾಗಿ ಪ್ರಕಟಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟ್ವೀಟ್‌ನಲ್ಲಿ ‘ಈ ನಿರ್ಧಾರ ಕಠಿಣವಾಗಿದ್ದರೂ, ಇದು ಸರಿಯಾದ ಸಮಯ ಎಂದು ನಾನು ಭಾವಿಸುತ್ತೇನೆ. ಆಟಗಾರನಾಗಿ ಮುಂದುವರಿಯುತ್ತೇನೆ, ತಂಡ ಮುಂದಿನ ನೂತನ ನಾಯಕನಿಗೆ ಬೆಂಬಲ ನೀಡುತ್ತೇನೆ’ ಎಂದಿದ್ದಾರೆ.

ಬಾಬರ್ ಅವರ ನಾಯಕತ್ವದಲ್ಲಿ ತಂಡವು ಈ ಬಾರಿಯ ವಿಶ್ವಕಪ್‌ನಲ್ಲಿ ದಯನೀಯವಾಗಿ ವಿಫಲವಾಗಿದ್ದು, ಕ್ರೀಡಾ ವಲಯದಲ್ಲಿ ಭಾರೀ ಚರ್ಚೆಗೀಡಾಗಿತ್ತು. ವಿಶ್ವಕಪ್‌ನಲ್ಲಿ ಆಡಿದ್ದ 9 ಲೀಗ್‌ ಪಂದ್ಯಗಳಲ್ಲಿ ಐದರಲ್ಲಿ ಸೋತು, 4ರಲ್ಲಿ ಮಾತ್ರ ಜಯ ದಾಖಲಿಸಿತ್ತು. ಆ ಮೂಲಕ ಅಂಕಪಟ್ಟಿಯಲ್ಲಿ 5ನೇ ಸ್ಥಾನ ಪಡೆಯುವುದರೊಂದಿಗೆ ಸೆಮಿಫೈನಲ್‌ಗೇರಲು ವಿಫಲವಾಗಿತ್ತು.

ಲೀಗ್ ಪಂದ್ಯಗಳ ಪೈಕಿ ಅಫ್ಘಾನಿಸ್ತಾನದ ಎದುರು ಹೀನಾಯವಾಗಿ ಸೋತದ್ದು ಪಾಕ್ ಕ್ರೀಡಾಭಿಮಾನಿಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಅಫ್ಘಾನಿಸ್ತಾನವು ಪಾಕಿಸ್ತಾನದ ಎದುರಿನ ಗೆಲುವನ್ನು ವಿಶ್ವಕಪ್ ಗೆದ್ದಷ್ಟೇ ಸಂಭ್ರಮಿಸಿತ್ತು.

ಅಫ್ಘಾನಿಸ್ತಾನದ ಎದುರಿನ ಸೋಲಿನ ಬಳಿಕ, ಪಾಕ್ ಮಾಜಿ ಆಟಗಾರರ, ಆಡಳಿತ ಮಂಡಳಿಯ ಹಾಗೂ ಪಾಕ್ ಅಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿತ್ತಲ್ಲದೇ, ವಿಶ್ವಕಪ್​ನಲ್ಲಿ ತನ್ನ ಪಯಣ ಮುಗಿಸುವುದಕ್ಕೂ ಮುನ್ನವೇ ಬಾಬರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬ ಕೂಗು ಜೋರಾಗಿತ್ತು.

ವಿಶ್ವಕಪ್ ಅಭಿಯಾನವನ್ನು ಮುಗಿಸಿ ಸದ್ಯ ತವರಿಗೆ ಮರಳಿರುವ ಬಳಿಕ ಬಾಬರ್ ಆಝಂ, ಕ್ರಿಕೆಟ್​ನ ಎಲ್ಲ ಸ್ವರೂಪದ ನಾಯಕತ್ವದಿಂದ ಕೆಳಗಿಳಿಯುತ್ತೇ. ಸಹಕಾರ ನೀಡಿದವರಿಗೆ ಧನ್ಯವಾದ ಎಂದು ತಿಳಿಸಿದ್ದಲ್ಲದೇ, ನೂತನ ನಾಯಕನಿಗೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ. ತಂಡದ ಆರಂಭಿಕ ಬ್ಯಾಟರ್ ಆಗಿರುವ ಬಾಬರ್ ಆಝಂ, ಬ್ಯಾಟಿಂಗ್‌ನಲ್ಲೂ ಕೂಡ ವೈಫಲ್ಯ ಕಂಡಿದ್ದರು. ವಿಶ್ವಕಪ್‌ನಲ್ಲಿ ಆಡಿದ್ದ ಒಂಬತ್ತು ಪಂದ್ಯಗಳಲ್ಲಿ 82.90 ಸ್ಟ್ರೈಕ್ ರೇಟ್‌ನೊಂದಿಗೆ ಕೇವಲ 320 ರನ್ ಗಳಿಸಲಷ್ಟೆ ಶಕ್ತವಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...