ಟಿ20 ವಿಶ್ವಕಪ್‌ | ಭಾರತಕ್ಕೆ ಬರುವುದಿಲ್ಲ ಎಂದು ಘೋಷಿಸಿದ ಬಾಂಗ್ಲಾದೇಶ

Date:

ಮುಂಬರುವ ಪುರುಷರ ಟಿ20 ವಿಶ್ವಕಪ್ ಟೂರ್ನಿಯ ಆರಂಭಕ್ಕೆ ಇನ್ನು ಐದು ವಾರಗಳಷ್ಟೇ ಬಾಕಿ ಇರುವಾಗ, ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ಮಹತ್ವದ ತೀರ್ಮಾನವೊಂದನ್ನು ಪ್ರಕಟಿಸಿದೆ. ಭದ್ರತೆಯ ಕಾರಣ ನೀಡಿ ಮುಂದಿನ ತಿಂಗಳು ನಡೆಯಲಿರುವ ವಿಶ್ವಕಪ್‌ಗಾಗಿ ಭಾರತಕ್ಕೆ ಪ್ರಯಾಣಿಸುವುದಿಲ್ಲ ಎಂದು ಘೋಷಿಸಿರುವ ಮಂಡಳಿ, ತನ್ನ ಪಂದ್ಯಗಳನ್ನು ಭಾರತದಿಂದ ಹೊರಗಿನ ತಟಸ್ಥ ಸ್ಥಳಗಳಿಗೆ ಸ್ಥಳಾಂತರಿಸುವಂತೆ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ)ಗೆ ಅಧಿಕೃತವಾಗಿ ಮನವಿ ಮಾಡಿದೆ.

​2026ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆವೃತ್ತಿಯಿಂದ ಬಾಂಗ್ಲಾದೇಶದ ವೇಗಿ ಮುಸ್ತಾಫಿಜರ್ ರೆಹಮಾನ್ ಅವರನ್ನು ಕೈಬಿಡಬೇಕು ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕೋಲ್ಕತ್ತ ನೈಟ್ ರೈಡರ್ಸ್ (ಕೆಕೆಆರ್) ತಂಡಕ್ಕೆ ಸೂಚನೆ ನೀಡಿದ ಮರುದಿನವೇ ಬಿಸಿಬಿ ಈ ನಿರ್ಧಾರವನ್ನು ಪ್ರಕಟಿಸಿರುವುದು ರಾಜತಾಂತ್ರಿಕ ಹಾಗೂ ಕ್ರೀಡಾ ವಲಯದಲ್ಲಿ ಸಂಚಲನ ಮೂಡಿಸಿದೆ.

​ಭಾರತ ಮತ್ತು ಬಾಂಗ್ಲಾದೇಶದ ನಡುವೆ ಇತ್ತೀಚೆಗೆ ಉಂಟಾಗಿರುವ ರಾಜಕೀಯ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ವಿಶ್ವಕಪ್‌ನಲ್ಲಿ ಬಾಂಗ್ಲಾದೇಶದ ಭಾಗವಹಿಸುವಿಕೆಯ ಬಗ್ಗೆ ಚರ್ಚಿಸಲು ಭಾನುವಾರ (ಜ.4, 2026) ಸಂಜೆ ಬಿಸಿಬಿ ನಿರ್ದೇಶಕರ ಮಂಡಳಿಯ ತುರ್ತು ಸಭೆ ಕರೆಯಲಾಗಿತ್ತು. ಈ ಸಭೆಯ ನಂತರ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಬಿಸಿಬಿ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಸ್ತುತ ಪರಿಸ್ಥಿತಿಯ ಸಮಗ್ರ ಮೌಲ್ಯಮಾಪನ ಮತ್ತು ಭಾರತದಲ್ಲಿ ಬಾಂಗ್ಲಾದೇಶ ತಂಡದ ಸುರಕ್ಷತೆಯ ಬಗ್ಗೆ ಹೆಚ್ಚುತ್ತಿರುವ ಕಳವಳಗಳನ್ನು ಗಮನದಲ್ಲಿಟ್ಟುಕೊಂಡು, ಹಾಗೂ ಬಾಂಗ್ಲಾದೇಶ ಸರ್ಕಾರದ ಸಲಹೆಯ ಮೇರೆಗೆ, ಪ್ರಸ್ತುತ ಪರಿಸ್ಥಿತಿಯಲ್ಲಿ ರಾಷ್ಟ್ರೀಯ ತಂಡವು ಭಾರತಕ್ಕೆ ಪ್ರಯಾಣಿಸುವುದಿಲ್ಲ ಎಂದು ನಿರ್ದೇಶಕರ ಮಂಡಳಿ ನಿರ್ಧರಿಸಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನು ಓದಿದ್ದೀರಾ? ಐಸಿಸಿ ಟೆಸ್ಟ್ ಶ್ರೇಯಾಂಕ: ಅಗ್ರಸ್ಥಾನ ಕಾಯ್ದುಕೊಂಡ ಬುಮ್ರಾ; ಪಂತ್‌ಗೆ 9ನೇ ಸ್ಥಾನ

​‘ಈ ನಿರ್ಧಾರದ ಹಿನ್ನೆಲೆಯಲ್ಲಿ, ಬಾಂಗ್ಲಾದೇಶದ ಎಲ್ಲ ಪಂದ್ಯಗಳನ್ನು ಭಾರತದ ಹೊರಗಿನ ಸ್ಥಳಕ್ಕೆ ಸ್ಥಳಾಂತರಿಸುವಂತೆ ಟೂರ್ನಿಯ ಆಯೋಜಕ ಸಂಸ್ಥೆಯಾಗಿರುವ ಐಸಿಸಿಗೆ ಅಧಿಕೃತವಾಗಿ ಕೋರಲಾಗಿದೆ. ಆಟಗಾರರು, ತಂಡದ ಅಧಿಕಾರಿಗಳು, ಮಂಡಳಿಯ ಸದಸ್ಯರು ಮತ್ತು ಇತರ ಪಾಲುದಾರರ ಹಿತದೃಷ್ಟಿಯಿಂದ ಹಾಗೂ ತಂಡವು ಸುರಕ್ಷಿತ ವಾತಾವರಣದಲ್ಲಿ ಟೂರ್ನಿಯಲ್ಲಿ ಪಾಲ್ಗೊಳ್ಳಲು ಈ ಕ್ರಮ ಅಗತ್ಯ’ ಎಂದು ಬಿಸಿಬಿ ಪ್ರತಿಪಾದಿಸಿದೆ. ಬಾಂಗ್ಲಾದೇಶದ ಕ್ರೀಡಾ ಸಚಿವಾಲಯದ ಸಲಹೆಯ ಮೇರೆಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

​ಐಸಿಸಿ ಅಂಗಳದಲ್ಲಿ ಚೆಂಡು

ಪುರುಷರ ಟಿ20 ವಿಶ್ವಕಪ್ ಟೂರ್ನಿಯು ಫೆಬ್ರವರಿ 7ರಿಂದ ಮಾರ್ಚ್ 8ರವರೆಗೆ ಭಾರತ ಮತ್ತು ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ನಡೆಯಲಿದೆ. ಒಟ್ಟು 55 ಪಂದ್ಯಗಳ ಪೈಕಿ ಶ್ರೀಲಂಕಾ 20 ಪಂದ್ಯಗಳಿಗೆ ಆತಿಥ್ಯ ವಹಿಸಲಿದ್ದು, ಪಾಕಿಸ್ತಾನದ ಎಲ್ಲ ಪಂದ್ಯಗಳು ಹಾಗೂ 2028ರವರೆಗಿನ ಐಸಿಸಿ ಟೂರ್ನಿಗಳಲ್ಲಿನ ಭಾರತ–ಪಾಕಿಸ್ತಾನ ಪಂದ್ಯಗಳು ತಟಸ್ಥ ಸ್ಥಳಗಳಲ್ಲಿ ನಡೆಯಲಿವೆ.

​ನಿಗದಿತ ವೇಳಾಪಟ್ಟಿಯಂತೆ ಬಾಂಗ್ಲಾದೇಶವು ಕೋಲ್ಕತ್ತದಲ್ಲಿ ಮೂರು ಲೀಗ್ ಪಂದ್ಯಗಳನ್ನು ಮತ್ತು ಮುಂಬೈನಲ್ಲಿ ತನ್ನ ಅಂತಿಮ ಲೀಗ್ ಪಂದ್ಯವನ್ನು ಆಡಬೇಕಿತ್ತು. ಆದರೆ ಬಿಸಿಬಿಯ ಈ ಹಠಾತ್ ನಿರ್ಧಾರದಿಂದಾಗಿ ವೇಳಾಪಟ್ಟಿ ಬದಲಾವಣೆಯ ಬಗ್ಗೆ ಐಸಿಸಿ ಮುಂದಿನ ಕೆಲ ದಿನಗಳಲ್ಲಿ ನಿರ್ಧಾರ ಪ್ರಕಟಿಸುವ ನಿರೀಕ್ಷೆಯಿದೆ.

​ಶನಿವಾರವಷ್ಟೇ (ಜ.3) ಬಿಸಿಸಿಐ, ಯಾವುದೇ ನಿರ್ದಿಷ್ಟ ಕಾರಣ ನೀಡದೆ, ಐಪಿಎಲ್ 2026ರಿಂದ ಮುಸ್ತಾಫಿಜರ್ ರೆಹಮಾನ್ ಅವರನ್ನು ಹಿಂಪಡೆಯುವಂತೆ ಕೆಕೆಆರ್‌ಗೆ ಸೂಚಿಸಿತ್ತು. ಕಳೆದ ತಿಂಗಳು ನಡೆದ ಹರಾಜಿನಲ್ಲಿ ₹9.20 ಕೋಟಿಗೆ ಮುಸ್ತಾಫಿಜರ್ ಅವರನ್ನು ಕೆಕೆಆರ್ ಖರೀದಿಸಿತ್ತು. ಈ ಬೆಳವಣಿಗೆಯ ಬೆನ್ನಲ್ಲೇ ಬಿಸಿಬಿ ಕಠಿಣ ನಿಲುವು ತಳೆದಿರುವುದು ಉಭಯ ದೇಶಗಳ ಕ್ರಿಕೆಟ್ ಸಂಬಂಧ ಹದಗೆಟ್ಟಿರುವುದನ್ನು ಸೂಚಿಸುತ್ತದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...