ಭಾರತಕ್ಕೆ ಏಷ್ಯಾ ಕಪ್: ಆಟಗಾರರಿಗೆ ಬಿಸಿಸಿಐಯಿಂದ 21 ಕೋಟಿ ರೂ. ಬಹುಮಾನ

Date:

ಏಷ್ಯಾ ಕಪ್ ಟೂರ್ನಿಯಲ್ಲಿ ಭಾನುವಾರ ದುಬೈನ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತ ತಂಡವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಐದು ವಿಕೆಟ್‌ಗಳ ಜಯ ಸಾಧಿಸಿದೆ.

ಪಾಕಿಸ್ತಾನ ವಿರುದ್ಧ ಅಮೋಘ ಪ್ರದರ್ಶನ ನೀಡಿ ಚಾಂಪಿಯನ್ ಆಗಿ ಹೊರಹೊಮ್ಮಿದ ಭಾರತ ಕ್ರಿಕೆಟ್ ತಂಡಕ್ಕೆ ‘ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ” (ಬಿಸಿಸಿಐ) ₹21 ಕೋಟಿ ಬಹುಮಾನ ಘೋಷಿಸಿದೆ.

“ಇದೊಂದು ಅಸಾಧಾರಣ ಗೆಲುವಾಗಿದೆ… ಇದರ ಸಂಭ್ರಮಾಚರಣೆಯ ಭಾಗವಾಗಿ ಭಾರತ ತಂಡದ ಆಟಗಾರರು ಮತ್ತು ಸಹಾಯಕ ಸಿಬ್ಬಂದಿಗೆ ₹21 ಕೋಟಿ ನಗದು ಬಹುಮಾನ ಘೋಷಿಸಲಾಗಿದೆ” ಎಂದು ಬಿಸಿಸಿಐ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೋಚಕ ಪಂದ್ಯದಲ್ಲಿ ಭಾರತದ ಸ್ಪಿನ್ ಬೌಲರ್‌ಗಳು ಪಾಕಿಸ್ಥಾನದ ಮಧ್ಯಮ ಕ್ರಮಾಂಕವನ್ನು ಧ್ವಂಸಗೊಳಿಸಿದರು. ಪಾಕಿಸ್ಥಾನ 19.1 ಓವರ್‌ಗಳಲ್ಲಿ 146 ರನ್‌ಗಳಿಗೆ ಆಲ್‌ಔಟ್ ಆಯಿತು.

ಭಾರತವು ಸಾಧಾರಣ ಗುರಿಯನ್ನ 5 ವಿಕೆಟ್‌ಗಳು ಕಳೆದುಕೊಂಡು 19.4 ಓವರ್‌ಗಳಲ್ಲಿ ಸಾಧಿಸಿತು. ಈ ಗೆಲುವಿನೊಂದಿಗೆ ಭಾರತ 9ನೇ ಏಷ್ಯಾಕಪ್ ತನ್ನದಾಗಿಸಿಕೊಂಡಿತು.

ಮೋದಿ ಅಭಿನಂದನೆ

ಭಾರತ ತಂಡದ ಪಾಕಿಸ್ತಾವನ್ನ ಬಗ್ಗುಬಡಿಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್ (ಟ್ವಿಟರ್)ನಲ್ಲಿ ಟ್ವೀಟ್ ಮಾಡಿ ಭಾರತ ತಂಡವನ್ನ ವಿಶೇಷ ರೀತಿಯಲ್ಲಿ ಅಭಿನಂದಿಸಿದ್ದಾರೆ. ಈ ಗೆಲುವನ್ನು “ಆಟದ ಕ್ಷೇತ್ರದಲ್ಲಿ ಆಪರೇಷನ್ ಸಿಂದೂರ್” ಎಂದು ಕರೆದಿದ್ದಾರೆ. ಗೇಮ್​ ಫೀಲ್ಡ್​​ನಲ್ಲೂ ಆಫರೇಷನ್​ ಸಿಂಧೂರ್, ” ಫಲಿತಾಂಶ ಎರಡರಲ್ಲೂ ಒಂದೇ – ಭಾರತಕ್ಕೆ ಗೆಲುವು” ಎಂದು ಮೋದಿ ಭಾರತ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ಪಹಲ್ಗಾಮ್‌ ಸಂತ್ರಸ್ತರಿಗೆ ದೇಣಿಗೆ ನೀಡಿದ ಸೂರ್ಯಕುಮಾರ್

ಏಷ್ಯಾ ಕಪ್ ಟೂರ್ನಿಯ ಪಂದ್ಯ ಶುಲ್ಕವನ್ನು ಸಶಸ್ತ್ರ ಪಡೆಗಳು ಮತ್ತು ಪಹಲ್ಗಾಮ್ ದಾಳಿಯ ಸಂತ್ರಸ್ತರಿಗೆ ನೀಡಲು ನಿರ್ಧರಿಸಿರುವುದಾಗಿ ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ತಿಳಿಸಿದ್ದಾರೆ.

“ನಮ್ಮ ಸಶಸ್ತ್ರ ಪಡೆಗಳು ಮತ್ತು ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿಗೆ ಒಳಗಾದ ಕುಟುಂಬಗಳಿಗೆ ಬೆಂಬಲ ನೀಡುವ ಸಲುವಾಗಿ ಈ ಟೂರ್ನಿಯ ಪಂದ್ಯ ಶುಲ್ಕವನ್ನು ದೇಣಿಗೆಯಾಗಿ ನೀಡಲು ನಾನು ನಿರ್ಧರಿಸಿದ್ದೇನೆ. ನಿಮ್ಮೊಂದಿಗೆ ನಾನು ಸದಾ ನಿಲ್ಲುತ್ತೇನೆ. ಜೈ ಹಿಂದ್’ ಎಂದು ಸೂರ್ಯಕುಮಾರ್ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...