ಬೈಜೂಸ್‌ನಿಂದ 160 ಕೋಟಿ ಬಾಕಿ: ಕಂಪನಿ ಕಾನೂನುಗಳ ನ್ಯಾಯಮಂಡಳಿಯ ಮೊರೆಹೋದ ಬಿಸಿಸಿಐ

Date:

ಒಂದರ ನಂತರ ಒಂದಾಗಿ ಹಲವಾರು ಸಮಸ್ಯೆಗಳಲ್ಲಿ ಸಿಲುಕುತ್ತಾ ಬರುತ್ತಿರುವ ಬೈಜೂಸ್ ಈಗ ಮತ್ತೊಂದು ಸಮಸ್ಯೆಯಲ್ಲಿ ಸಿಲುಕಿಕೊಂಡಿದೆ.

ವಿದೇಶ ವಿನಿಮಯ ನಿರ್ವಹಣೆ ಕಾಯ್ದೆ ಉಲ್ಲಂಘನೆ ಆರೋಪದ ಮೇಲೆ ಬೈಜೂಸ್ ಸಂಸ್ಥೆಗೆ ಜಾರಿ ನಿರ್ದೇಶನಾಲಯ ಶೋಕಾಸ್ ನೋಟಿಸ್ ಜಾರಿ ಮಾಡಿದ ಕೆಲದಿನಗಳ ಬೆನ್ನಲ್ಲೇ 160 ಕೋಟಿ ಬಾಕಿ ಇರಿಸಿದ ಹಿನ್ನೆಲೆಯಲ್ಲಿ ಬೈಜೂಸ್‌ ವಿರುದ್ಧ ಬಿಸಿಸಿಐ, ರಾಷ್ಟ್ರೀಯ ಕಂಪನಿ ಕಾನೂನುಗಳ ನ್ಯಾಯಮಂಡಳಿ (ಎನ್ ಸಿಎಲ್ ಟಿ)ಯ ಮೊರೆ ಹೋಗಿದೆ.

ಒಪ್ಪಂದ ಕೊನೆಗೊಂಡ ಬಳಿಕ ಬೈಜೂಸ್ ಕಂಪನಿ ಪಾವತಿಸಬೇಕಾದ 160 ಕೋಟಿ ರೂಪಾಯಿ ಬಾಕಿಯನ್ನು ವಸೂಲಿ ಮಾಡಿಕೊಡುವಂತೆ ಕೋರಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಎನ್ ಸಿಎಲ್ ಟಿ ಕದ ತಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೈಜೂಸ್ ಅನ್ನು ನಿರ್ವಹಿಸುತ್ತಿರುವ ಥಿಂಕ್ & ಲರ್ನ್ ಪ್ರೈವೇಟ್ ಲಿಮಿಟೆಡ್ ವಿರುದ್ಧ ಕಳೆದ ಸೆಪ್ಟೆಂಬರ್‌ನಲ್ಲಿ ಬಿಸಿಸಿಐ ಎನ್‌ಸಿಎಲ್‌ಟಿಯ ಬೆಂಗಳೂರು ಪೀಠದ ಮುಂದೆ ಅರ್ಜಿ ಸಲ್ಲಿಸಿರುವುದಾಗಿ ವರದಿಯಾಗಿದೆ. ಈ ಪ್ರಕರಣವು ಭಾರತೀಯ ಕ್ರಿಕೆಟ್ ತಂಡದ ಜೆರ್ಸಿಗಳ ಪ್ರಾಯೋಜಕತ್ವದ ಹಕ್ಕುಗಳ ವಿವಾದಕ್ಕೆ ಸಂಬಂಧಿಸಿದೆ.

2022ರ ಮಾರ್ಚಿನಲ್ಲಿ ಕೊನೆಗೊಂಡ ಪ್ರಾಯೋಜಕತ್ವ ಗುತ್ತಿಗೆಗೆ ಸಂಬಂಧಿಸಿದಂತೆ ಈ ವ್ಯಾಜ್ಯ ನಡೆಯುತ್ತಿದೆ. ಕಳೆದ ಆರು ತಿಂಗಳಿನಿಂದ ಈ ಮೊತ್ತ ಬಾಕಿ ಇದ್ದು, ಇದನ್ನು ವಸೂಲಿ ಮಾಡಿ ಕೊಡುವಂತೆ ರಾಷ್ಟ್ರೀಯ ಕಂಪನಿ ಕಾನೂನುಗಳ ನ್ಯಾಯಮಂಡಳಿಗೆ ಸಲ್ಲಿಸಿದ ದೂರಿನಲ್ಲಿ ಬಿಸಿಸಿಐ ಕೋರಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬೈಜೂಸ್ ಕಂಪನಿಯ ವಕ್ತಾರರು, “ನಾವು ಬಿಸಿಸಿಐ ಜತೆ ಈ ವ್ಯಾಜ್ಯವನ್ನು ಇತ್ಯರ್ಥಪಡಿಸಲು ಮಾತುಕತೆ ನಡೆಸುತ್ತಿದ್ದೇವೆ. ಇದು ಸದ್ಯದಲ್ಲೇ ಇತ್ಯರ್ಥವಾಗಲಿದೆ” ಎಂದು ಹೇಳಿಕೆ ನೀಡಿದ್ದಾರೆ.

2022ರ ಮಾರ್ಚಿನಲ್ಲಿ ಕೊನೆಗೊಂಡ ಪ್ರಾಯೋಜಕತ್ವದ ಅವಧಿಯೊಳಗೆ ಬೈಜೂಸ್ ಎಲ್ಲ ಮೊತ್ತವನ್ನು ಪಾವತಿಸಿತ್ತು. ಹೊಸ ಪ್ರಾಯೋಜಕರನ್ನು ಹುಡುಕುವವರೆಗೆ ಈ ಒಪ್ಪಂದ ಮುಂದುವರಿಸುವಂತೆ ಬೈಜೂಸ್‌ನೊಂದಿಗೆ ಬಿಸಿಸಿಐ ಕೇಳಿಕೊಂಡಿತ್ತು. ಆರ್ಥಿಕ ಸ್ಥಿತಿಯ ಹಿನ್ನೆಲೆಯಲ್ಲಿ ಬೈಜೂಸ್‌ ಈ ಒಪ್ಪಂದದಿಂದ ಹೊರಬರಲು ಬಯಸಿತ್ತು. ಆದರೆ ಬಿಸಿಸಿಐ, ಒಂದಷ್ಟು ಸಮಯ ಮುಂದುವರಿಸುವಂತೆ ಮನವೊಲಿಸಿತ್ತು.

bcci

ಈ ಕಾರಣದಿಂದ ಬೈಜೂಸ್ 35 ದಶಲಕ್ಷ ಡಾಲ‌ರ್ ಮೊತ್ತಕ್ಕೆ 2023ರ ನವೆಂರ್‍‌ವರೆಗೆ ಬಿಸಿಸಿಐ ಜತೆಗಿನ ಜೆರ್ಸಿ ಪ್ರಾಯೋಜಕತ್ವ ಒಪ್ಪಂದವನ್ನು ಮಂದುವರಿಸಿತ್ತು. ಡಿಸೆಂಬ‌ರ್‍‌ನಿಂದ ಒಪ್ಪಂದ ಮುರಿದುಕೊಳ್ಳಲು ಬೈಜೂಸ್‌ ಕೇಳಿಕೊಂಡಾಗ, ಹೊಸ ಪ್ರಾಯೋಜಕರು ಹೊಸ ಹಣಕಾಸು ವರ್ಷದಿಂದ ಸಿಗುತ್ತಾರೆ. ಈ ಕಾರಣಕ್ಕೆ ಒಪ್ಪಂದವನ್ನು 2024ರ ಮಾರ್ಚ್ ವರೆಗೆ ಮುಂದುವರಿಸುವಂತೆ ಕೋರಿತ್ತು.

ಈ ಅವಧಿಗೆ ಪಾವತಿಸಬೇಕಾದ 160 ಕೋಟಿ ರೂಪಾಯಿಗೆ ಸಂಬಂಧಿಸಿದಂತೆ ಈ ವ್ಯಾಜ್ಯ ನಡೆಯುತ್ತಿದೆ. ಬೈಜೂಸ್‌ನ ಉದ್ಯೋಗಿಗಳಿಗೆ ವೇತನ ಪಾವತಿ ಬಾಕಿ ಇರುವ ಹಿನ್ನೆಲೆಯಲ್ಲಿ, ಬಿಸಿಸಿಐಗೆ ಇರಿಸಿಕೊಂಡಿರುವ ಬಾಕಿ ಹಣ ಪ್ರಥಮ ಆದ್ಯತೆಯಲ್ಲ ಎಂದು ಕಂಪನಿಯ ತಜ್ಞರು ಅಭಿಪ್ರಾಯಪಟ್ಟಿದ್ದರು.

‘ಎಜುಕೇಶನ್ ಟೆಕ್ ಸಂಸ್ಥೆ’ಯಾಗಿರುವ ಬೈಜೂಸ್ 2019ರಿಂದ ಭಾರತೀಯ ಕ್ರಿಕೆಟ್ ತಂಡದ ಪಾಲುದಾರರಾಗಿದ್ದು, ತಂಡದ ಆಟಗಾರರು ಧರಿಸುವ ಜೆರ್ಸಿಯ ಮುಂಭಾಗದಲ್ಲಿ ಬೈಜೂಸ್ ಲೋಗೋವನ್ನು ಕಾಣಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...