ಏಷ್ಯಾ ಕಪ್‌ 2023 | ಪಾಕಿಸ್ತಾನಕ್ಕೆ ಹಿನ್ನಡೆ, ಭಾರತದ ಬೆಂಬಲಕ್ಕೆ ನಿಂತ ಶ್ರೀಲಂಕಾ, ಬಾಂಗ್ಲಾದೇಶ

Date:

  • ಆಗಸ್ಟ್‌- ಸೆಪ್ಟೆಂಬರ್‌ನಲ್ಲಿ ನಿಗದಿಯಾಗಿರುವ ಏಷ್ಯಾ ಕಪ್‌
  • ಟೂರ್ನಿ ಸ್ಥಳಾಂತರಕ್ಕೆ ಶ್ರೀಲಂಕಾ, ಬಾಂಗ್ಲಾದೇಶ ಬೆಂಬಲ

ಪಾಕಿಸ್ತಾನದ ಆತಿಥ್ಯದಲ್ಲಿ ಆಗಸ್ಟ್‌- ಸೆಪ್ಟೆಂಬರ್‌ನಲ್ಲಿ ನಿಗದಿಯಾಗಿರುವ ಏಷ್ಯಾ ಕಪ್‌ ಟೂರ್ನಿಯನ್ನು ಸ್ಥಳಾಂತರಿಸುವ ಬಿಸಿಸಿಐ ಪ್ರಸ್ತಾಪಕ್ಕೆ  ಶ್ರೀಲಂಕಾ ಮತ್ತು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಬೆಂಬಲ ಸೂಚಿಸಿದೆ. ಇದರಿಂದಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ (ಪಿಸಿಬಿ) ತೀವ್ರ ಹಿನ್ನಡೆಯಾಗಿದೆ.

ಈ ವರ್ಷದ ಏಷ್ಯಾಕಪ್ ಅನ್ನು ಪಾಕಿಸ್ತಾನದಿಂದ ಸ್ಥಳಾಂತರಿಸಿದರೆ, ಆತಿಥ್ಯ ವಹಿಸಲು ಶ್ರೀಲಂಕಾ ಕ್ರಿಕೆಟ್ (ಎಸ್‌ಎಲ್‌ಸಿ) ಮತ್ತು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ಉತ್ಸುಕವಾಗಿವೆ ಎಂದು ಜಿಯೋ ಸ್ಪೋರ್ಟ್ಸ್‌ ವರದಿ ಮಾಡಿದೆ.

ನಿಗದಿತ ಟೂರ್ನಿಯನ್ನು ತಮ್ಮ ರಾಷ್ಟ್ರದಿಂದ ಸ್ಥಳಾಂತರಿಸಿದರೆ 2023ರ ಏಷ್ಯಾಕಪ್‌ನಲ್ಲಿ ಪಾಕಿಸ್ತಾನ ಆಡುವುದಿಲ್ಲ ಎಂದು ಪಿಸಿಬಿ ಮುಖ್ಯಸ್ಥ ನಜಮ್ ಸೇಥಿ ಎಚ್ಚರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮತ್ತೊಂದೆಡೆ, ಪಾಕಿಸ್ತಾನದಲಿ ಏಷ್ಯ ಕಪ್‌ ಟೂರ್ನಿ ನಡೆದರೆ ಭಾರತ ಪಾಲ್ಗೊಳ್ಳುವುದಿಲ್ಲ ಎಂದು ಈ ಹಿಂದೆಯೇ  ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸ್ಪಷ್ಟಪಡಿಸಿತ್ತು. ಅಲ್ಲದೆ ಟೂರ್ನಿಯನ್ನು ತಟಸ್ಥ ಸ್ಥಳದಲ್ಲಿ ಆಯೋಜಿಸಬೇಕು ಎಂದು ಒತ್ತಾಯಿಸಿದೆ.

ಈ ಸುದ್ದಿ ಓದಿದ್ದೀರಾ?: ಏಷ್ಯಾ ಕಪ್ ಟೂರ್ನಿಗೆ ಅರ್ಹತೆ ಪಡೆದು ಇತಿಹಾಸ ಬರೆದ ನೇಪಾಳ

ಟೂರ್ನಿಯನ್ನು ಪಾಕಿಸ್ತಾನದಿಂದ ಸ್ಥಳಾಂತರಿಸಬೇಕು ಎಂಬ ಬಿಸಿಸಿಐ ಬೇಡಿಕೆಯನ್ನು ಸಂಪೂರ್ಣವಾಗಿ ಒಪ್ಪದ ಪಿಸಿಬಿ ಹೊಸ ಪ್ರಸ್ತಾಪವೊಂದನ್ನು ಜಯ್‌ ಶಾ ಅಧ್ಯಕ್ಷರಾಗಿರುವ ಏಷ್ಯಾ ಕ್ರಿಕೆಟ್‌ ಕೌನ್ಸಿಲ್‌ (ಎಸಿಸಿ) ಮುಂದಿಟ್ಟಿತ್ತು. ಇದರ ಪ್ರಕಾರ ನಿಗದಿಯಂತೆ ಟೂರ್ನಿ ಪಾಕಿಸ್ತಾನದಲ್ಲೇ ನಡೆಯಲಿದೆ. ಆದರೆ, ಭಾರತ-ಪಾಕಿಸ್ತಾನ ತಂಡಗಳ ನಡುವಿನ ಮಹತ್ವದ ಪಂದ್ಯ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ (ಯುಎಇ) ಆಡಿಸುವ ಪ್ರಸ್ತಾಪವನ್ನು ಪಿಸಿಬಿ ಮುಂದಿಟ್ಟಿತ್ತು. ಈ ಕುರಿತ ಅಂತಿಮ ನಿರ್ಧಾರವನ್ನು ಎಸಿಸಿ ಇನ್ನೂ ಪ್ರಕಟಿಸಿಲ್ಲ.

ವರ್ಷಾಂತ್ಯದಲ್ಲಿ ಭಾರತದಲ್ಲೇ ಏಕದಿನ ವಿಶ್ವಕಪ್‌ ಟೂರ್ನಿ ನಡೆಯಲಿದ್ದು, ಏಷ್ಯಾ ಕಪ್‌ ಟೂರ್ನಿಯು ಪಾಕಿಸ್ತಾನದ ಕೈ ತಪ್ಪಿದರೆ, ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಪಾಕಿಸ್ತಾನ ಭಾಗವಹಿಸುವುದು ಬಹುತೇಕ ಅನುಮಾನವಾಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...