ಆನ್‌ಲೈನ್‌ ಜೂಜಾಟ ಕಂಪನಿ ಡ್ರೀಮ್11ನೊಂದಿಗೆ ಸಂಬಂಧ ಕೊನೆಗೊಳಿಸಿದ ಬಿಸಿಸಿಐ

Date:

ಕೇಂದ್ರ ಸರ್ಕಾರವು ಹಣ ಹೂಡಿಕೆ ಮಾಡಿ ಆಡುವ ಆನ್‌ಲೈನ್ ಗೇಮಿಂಗ್‌ಗಳನ್ನು ನಿಷೇಧಿಸಿರುವ 2025ರ ಆನ್‌ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಕಾಯ್ದೆಯನ್ನು ಎರಡೂ ಸದನಗಳಲ್ಲಿ ಅಂಗೀಕರಿಸಿದ ಬೆನ್ನಲ್ಲೇ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತನ್ನ ಪ್ರಮುಖ ಪ್ರಾಯೋಜಕರಾದ ಡ್ರೀಮ್11ನೊಂದಿಗಿನ ಸಂಬಂಧವನ್ನು ಕೊನೆಗೊಳಿಸಿದೆ.

ಈ ಕುರಿತು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಮಾತನಾಡಿದ್ದು, “ಪ್ರಸ್ತುತ ಪರಿಸ್ಥಿತಿಯನ್ನು ಗಮನಿಸಿದರೆ ಮತ್ತು ಕಾಯ್ದೆಯನ್ನು ಗಣನೆಗೆ ತೆಗೆದುಕೊಂಡರೆ, ಡ್ರೀಮ್11ನೊಂದಿಗಿನ ಸಂಬಂಧವನ್ನು ಮುಂದುವರಿಸುವುದು ಬಿಸಿಸಿಐಗೆ ಕಷ್ಟಕರವಾಗಿದೆ. ಆದ್ದರಿಂದ, ಡ್ರೀಮ್11ನೊಂದಿಗಿನ ಒಪ್ಪಂದವನ್ನು ಮುಕ್ತಾಯಗೊಳಿಸಲಾಗಿದ್ದು, ಮುಂದಿನ ಕ್ರಮವಾಗಿ ಹೊಸ ಪ್ರಾಯೋಜಕರನ್ನು ಹುಡುಕಲಾಗುವುದು” ಎಂದು ತಿಳಿಸಿದ್ದಾರೆ.

ಡ್ರೀಮ್11 ತನ್ನ ಮಾಹಿತಿಯನ್ನು ಬಿಸಿಸಿಐಗೆ ನೀಡಿದ್ದು, ಇನ್ನು ಮುಂದೆ ಭಾರತೀಯ ಕ್ರಿಕೆಟ್ ತಂಡಕ್ಕೆ ಪ್ರಾಯೋಜಕತ್ವ ವಹಿಸುವುದಿಲ್ಲ ಎಂದು ಮೂಲಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ, ಸೆಪ್ಟೆಂಬರ್ 9 ರಿಂದ ಆರಂಭವಾಗಲಿರುವ ಏಷ್ಯಾಕಪ್‌ಗೆ ಬಿಸಿಸಿಐಗೆ ಹೊಸ ಪ್ರಾಯೋಜಕರ ಅಗತ್ಯವಿದೆ. 2007ರಲ್ಲಿ ಸ್ಥಾಪನೆಯಾದ ಡ್ರೀಮ್11 ಸಂಸ್ಥೆಯು 2023ರ ಜುಲೈನಲ್ಲಿ ಭಾರತೀಯ ಕ್ರಿಕೆಟ್ ತಂಡದ ಪ್ರಾಯೋಜಕತ್ವವನ್ನು 2023-2026ರ ಅವಧಿಗೆ 358 ಕೋಟಿ ರೂಪಾಯಿಗಳಿಗೆ ಪಡೆದುಕೊಂಡಿತ್ತು. ಆದರೆ, ಒಪ್ಪಂದದ ಅವಧಿ 2026ರ ಜುಲೈವರೆಗೆ ಇದ್ದರೂ, ಕಾನೂನಿನ ನಿಷೇಧದಿಂದಾಗಿ ಸಂಸ್ಥೆಯು ಒಂದು ವರ್ಷಕ್ಕೂ ಮುನ್ನವೇ ಪ್ರಾಯೋಜಕತ್ವವನ್ನು ತೊರೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಲೆಮಾರಿ ಸಮುದಾಯಗಳಿಗೆ ಅನ್ಯಾಯ – ಜಾತಿಗಣತಿಯ ಮೇಲೂ ಕರಿನೆರಳು: ರಾಹುಲ್‌ ಗಾಂಧಿ ಗಮನಿಸುವರೇ?

ಕಾನೂನಿನ ನಿಯಮಗಳಿಗೆ ಒಳಪಟ್ಟಿರುವುದರಿಂದ, ಡ್ರೀಮ್11 ಸಂಸ್ಥೆಯು ಒಪ್ಪಂದದ ಅವಧಿಗೂ ಮುನ್ನ ಪ್ರಾಯೋಜಕತ್ವವನ್ನು ಕೈಬಿಟ್ಟರೂ ಬಿಸಿಸಿಐಗೆ ಯಾವುದೇ ದಂಡವನ್ನು ಪಾವತಿಸಬೇಕಾಗಿಲ್ಲ. ಒಪ್ಪಂದದಲ್ಲಿ ಸಂಸ್ಥೆಯ ಮುಖ್ಯ ವ್ಯವಹಾರವು ಸರ್ಕಾರಿ ನಿಷೇಧಕ್ಕೆ ಒಳಗಾದರೆ ದಂಡದಿಂದ ರಕ್ಷಣೆ ನೀಡುವ ಷರತ್ತು ಇದ್ದ ಕಾರಣ, ಡ್ರೀಮ್11ಗೆ ಯಾವುದೇ ಹೆಚ್ಚುವರಿ ಪಾವತಿಯ ಜವಾಬ್ದಾರಿಯಿಲ್ಲ. ಡ್ರೀಮ್11 ಮತ್ತು ಮೈ11ಸರ್ಕಲ್ ಸಂಸ್ಥೆಗಳು ಭಾರತೀಯ ಕ್ರಿಕೆಟ್ ತಂಡ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್‌ಗೆ ಸುಮಾರು 1,000 ಕೋಟಿ ರೂಪಾಯಿಗಳ ಪ್ರಾಯೋಜಕತ್ವವನ್ನು ಒದಗಿಸುತ್ತಿದ್ದವು. ಇದರ ಜೊತೆಗೆ, ಡ್ರೀಮ್11 ಇಂಡಿಯನ್ ಸೂಪರ್ ಲೀಗ್‌ನ ಅಧಿಕೃತ ಫ್ಯಾಂಟಸಿ ಪಾಲುದಾರರಾಗಿಯೂ ಇತ್ತು.

ಕಾಯ್ದೆಯ ಅಂಗೀಕಾರದ ನಂತರ ಡ್ರೀಮ್11 ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, “ನಾವು ಯಾವಾಗಲೂ ಕಾನೂನನ್ನು ಪಾಲಿಸುವ ಸಂಸ್ಥೆಯಾಗಿದ್ದು, ಕಾನೂನಿನ ಚೌಕಟ್ಟಿನಲ್ಲಿ ವ್ಯವಹಾರ ನಡೆಸಿದ್ದೇವೆ. ಪ್ರಗತಿಪರ ಕಾನೂನು ಸೂಕ್ತ ಮಾರ್ಗವಾಗಿರಬಹುದೆಂದು ನಾವು ಭಾವಿಸಿದ್ದರೂ, 2025ರ ಆನ್‌ಲೈನ್ ಗೇಮಿಂಗ್ ಕಾಯ್ದೆಯನ್ನು ಸಂಪೂರ್ಣವಾಗಿ ಗೌರವಿಸಿ ಪಾಲಿಸುತ್ತೇವೆ” ಎಂದು ತಿಳಿಸಿದೆ.

2008ರಲ್ಲಿ ಆರಂಭವಾದ ಡ್ರೀಮ್11, ಕೇವಲ ಭಾರತೀಯ ಕ್ರಿಕೆಟ್ ತಂಡವಷ್ಟೇ ಅಲ್ಲದೆ ಐಎಸ್ಎಲ್ (ಇಂಡಿಯನ್ ಸೂಪರ್ ಲೀಗ್)ಗೂ ಅಧಿಕೃತ ಫ್ಯಾಂಟಸಿ ಪಾಲುದಾರರಾಗಿಯೂ ಕಾರ್ಯನಿರ್ವಹಿಸುತ್ತಿತ್ತು. ಇದೀಗ ಬಿಸಿಸಿಐ ಪ್ರಾಯೋಜಕತ್ವವನ್ನು ತೊರೆದ ಪರಿಣಾಮ ಸೆಪ್ಟೆಂಬರ್ 9ರಿಂದ ಆರಂಭವಾಗಲಿರುವ ಏಷ್ಯಾಕಪ್‌ಗೂ ಹೊಸ ಪ್ರಾಯೋಜಕರ ಅಗತ್ಯವಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...