ಬಿಸಿಸಿಐ ಕಠಿಣ ನಿಯಮ: ಅಡುಗೆಯವರಿಲ್ಲದೆ ಸಂಕಷ್ಟಕ್ಕೊಳಗಾದ ವಿರಾಟ್‌ ಕೊಹ್ಲಿ!

Date:

ಆಟಗಾರರು ತಮ್ಮದೇ ಆದ ವೈಯಕ್ತಿಕ ಅಡುಗೆಯವರು, ಸ್ಟೈಲಿಸ್ಟ್‌ಗಳು ಮತ್ತು ಸಿಬ್ಬಂದಿಯನ್ನು ವಿದೇಶ ಪ್ರವಾಸಗಳಿಗೆ ಕರೆತರುವಂತಿಲ್ಲ ಎಂದು ಬಿಸಿಸಿಐ ಕಟ್ಟಪ್ಪಣೆ ಹೊರಡಿಸಿದೆ. ಬಿಸಿಸಿಐನ ಈ ಖಡಕ್‌ ಸೂಚನೆಗಳು ವಿರಾಟ್‌ ಕೊಹ್ಲಿ ಅವರಿಗೆ ಹೊಸ ಫಜೀತಿ ತಂದಿದೆ.

ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿ ಮುಗಿದ ನಂತರ ಭಾರತೀಯ ಕ್ರಿಕೆಟ್‌ನಲ್ಲಿ ಬಹಳಷ್ಟು ಬದಲಾವಣೆಗಳಾಗಿವೆ. ಕೆಲವು ಚಟುವಟಿಕೆಗಳನ್ನು ನಿರ್ಬಂಧಿಸುವ 10 ಅಂಶಗಳ ಆದೇಶವನ್ನು ಬಿಸಿಸಿಐ ಹೊರಡಿಸಿದೆ.
ಚಾಂಪಿಯನ್ಸ್‌ ಟ್ರೋಫಿಯಲ್ಲಿ ಆಡಲು ದುಬೈಯಲ್ಲಿರುವ ಕೊಹ್ಲಿ ತಮ್ಮ ಬಾಣಸಿಗರನ್ನು ಕರೆದೊಯ್ಯಲಾಗದೆ ತನ್ನಿಷ್ಟದ ಆಹಾರವನ್ನು ಪಡೆಯಲಾಗದೇ ಸಂಕಷ್ಟಕ್ಕೆ ಸಿಲುಕಿದ್ದಾರೆ.

ತನಗೆ ಬೇಕಾಗಿರುವ ಆಹಾರದ ಬಗ್ಗೆ ಸ್ಥಳೀಯ ತಂಡದ ವ್ಯವಸ್ಥಾಪಕರೊಂದಿಗೆ ಮಾತನಾಡಿದ್ದಾರೆ. ಈಗ ಕೊಹ್ಲಿಗಾಗಿ ಸ್ಥಳೀಯ ಹೋಟೆಲಿನಲ್ಲಿ ಆಹಾರ ಸಿದ್ಧಪಡಿಸಿ ಮೈದಾನಕ್ಕೆ ಕಳುಹಿಸಿಕೊಡಲಾಗಿದೆ. ಉಳಿದ ಟೀಂ ಇಂಡಿಯಾ ಆಟಗಾರರು ಅಭ್ಯಾಸ ಮುಗಿಸಿ ಕಿಟ್‌ ಪ್ಯಾಕ್‌ ಮಾಡುತ್ತಿದ್ದರೆ ಕೊಹ್ಲಿ ಆಹಾರ ಸೇವಿಸುತ್ತಿದ್ದರು ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಟಗಾರರು ಇನ್ನು ಮುಂದೆ ಬಿಸಿಸಿಐ ಅನುಮೋದಿಸದ ಹೊರತು ಪ್ರವಾಸಗಳಲ್ಲಿ ಬಾಣಸಿಗರು, ಭದ್ರತಾ ಸಿಬ್ಬಂದಿ ಅಥವಾ ಸಹಾಯಕರಂತಹ ವೈಯಕ್ತಿಕ ಸಿಬ್ಬಂದಿಯನ್ನು ಕರೆತರಲು ಸಾಧ್ಯವಿಲ್ಲ. ಎಲ್ಲರೂ ನಿಗದಿಪಡಿಸಿದ ಹೊಸ ನಿಯಮಗಳಿಗೆ ಹೊಂದಿಕೊಳ್ಳಬೇಕಾಗುತ್ತದೆ ಎಂದು ಬಿಸಿಸಿಐ ಸ್ಪಷ್ಟವಾಗಿ ಸೂಚಿಸಿದೆ.

ಈ ಸುದ್ದಿ ಓದಿದ್ದೀರಾ? ಡಬ್ಲ್ಯೂಪಿಎಲ್‌ 2025 | ರಿಚಾ ಘೋಷ್ ಅಬ್ಬರ: ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆರ್‌ಸಿಬಿ ಶುಭಾರಂಭ

ಕೋಚ್‌ ಗೌತಮ್‌ ಗಂಭೀರ್‌ ಅವರು ವೈಯಕ್ತಿಕ ಸಹಾಯಕರೊಂದಿಗೆ ಟೂರ್ನಿಗೆ ಆಗಮಿಸಿದ್ದರೂ ಸಹಾಯಕರು ಬೇರೆ ಹೋಟೆಲಿನಲ್ಲಿ ತಂಗುವಂತೆ ಸೂಚಿಸಲಾಗಿದೆ.

ಈ ಹಿಂದೆ, ಮಂಡಳಿಯು ತನ್ನ ಆದೇಶದಲ್ಲಿ, 45 ದಿನಗಳನ್ನು ಮೀರಿದ ವಿದೇಶಿ ಪ್ರವಾಸಗಳ ಸಮಯದಲ್ಲಿ ಕುಟುಂಬಗಳು ಆಟಗಾರರೊಂದಿಗೆ ಇರಲು ಎರಡು ವಾರಗಳ ಅವಧಿಯನ್ನು ಮಾತ್ರ ಅನುಮೋದಿಸಿತು, ಜೊತೆಗೆ ವೈಯಕ್ತಿಕ ಸಿಬ್ಬಂದಿ ಮತ್ತು ವಾಣಿಜ್ಯ ಚಿತ್ರೀಕರಣದ ಮೇಲೆ ನಿರ್ಬಂಧ ವಿಧಿಸಿತು. ಚಾಂಪಿಯನ್ಸ್ ಟ್ರೋಫಿಯಂತಹ ಕಡಿಮೆ ಅವಧಿಗಳಿಗೆ, ಕುಟುಂಬ ಸದಸ್ಯರ ಸಹಭಾಗಿತ್ವವನ್ನು ಮೂಲತಃ ಅನುಮತಿಸಲಾಗುತ್ತಿರಲಿಲ್ಲ.

ಆದರೆ, ಕಾರ್ಯಕ್ರಮದ ಸ್ವರೂಪವನ್ನು ಪರಿಗಣಿಸಿ, ಮಂಡಳಿಯು ಪ್ರತಿ ಆಟಗಾರನಿಗೆ ಒಂದು ಪಂದ್ಯಕ್ಕೆ ಕುಟುಂಬ ಸದಸ್ಯರ ಸಹಭಾಗಿತ್ವವನ್ನು ಹೊಂದಲು ಅವಕಾಶ ನೀಡಿದೆ. ಅಂತೆಯೇ ಆಟಗಾರರು ಯಾವ ಪಂದ್ಯಕ್ಕೆ ಮಂಡಳಿಯ ಅನುಮೋದನೆಯನ್ನು ಪಡೆಯಲು ನಿರ್ಧರಿಸಿದ್ದಾರೆ ಎಂಬುದನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...