ಐಪಿಎಲ್‌ 2023 | ಪ್ರತಿ ಡಾಟ್‌ ಬಾಲ್‌ಗೆ 500 ಗಿಡ ನೆಡಲು ಬಿಸಿಸಿಐ ನಿರ್ಧಾರ

Date:

ಪ್ರತಿನಿತ್ಯ ಐಪಿಎಲ್‌ ಪಂದ್ಯಗಳನ್ನು ಟಿವಿ ಮತ್ತು ಆನ್‌ಲೈನ್‌ನಲ್ಲಿ ವೀಕ್ಷಿಸುತ್ತಿರುವ ಅಭಿಮಾನಿಗಳಿಗೆ ಮಂಗಳವಾರದ ಕ್ವಾಲಿಫೈಯರ್ ಪಂದ್ಯದಲ್ಲಿನ ʻಹೊಸ ಗ್ರಾಫಿಕ್ಸ್‌ʼ ಒಂದು ಕುತೂಹಲ ಮೂಡಿಸಿತ್ತು.  

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟನ್ಸ್ ನಡುವಿನ ಪಂದ್ಯದ ವೇಳೆ, ಪ್ರತಿ ಓವರ್‌ನ ಅಂಕಿ ಅಂಶಗಳಲ್ಲಿ ಡಾಟ್ ಬಾಲ್‌ಗಳಾದಾಗ (ಒಂದು ಎಸೆತದಲ್ಲಿ ಯಾವುದೇ ರನ್‌ ಬಾರದೇ ಇದ್ದಾಗ) ‘ಡಾಟ್’ ಚಿಹ್ನೆಯ ಬದಲು ʻಮರದ ಚಿಹ್ನೆʼಗಳನ್ನು ತೋರಿಸಲಾಗುತ್ತಿತ್ತು. ಈ ವಿಶೇಷ ಗ್ರಾಫಿಕ್ಸ್‌ ಎಲ್ಲರ ಗಮನ ಸೆಳೆದಿತ್ತು. ಈ ʻಹಸಿರು ಮರದ ಚಿತ್ರʼ ನೀಡಲು ಮುಖ್ಯ ಕಾರಣ ಬಿಸಿಸಿಐ ಕೈಗೊಂಡಿರುವ ಹೊಸ ಅಭಿಯಾನ.

ಪ್ರತಿ ಡಾಟ್‌ ಬಾಲ್‌ಗೆ 500 ಗಿಡ !

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಐಪಿಎಲ್‌ 16ನೇ ಆವೃತ್ತಿಯಲ್ಲಿನ ಪ್ಲೇ ಆಫ್ ಪಂದ್ಯಗಳಲ್ಲಿನ (ಕ್ವಾಲಿಫೈಯರ್‌-1, ಎಲಿಮಿನೇಟರ್‌, ಕ್ವಾಲಿಫೈಯರ್‌-2 ಹಾಗೂ ಫೈನಲ್‌) ಪ್ರತಿ ಡಾಟ್ ಬಾಲ್‌ಗೆ ತಲಾ 500 ಗಿಡಗಳನ್ನು ನೆಡುವುದಾಗಿ ಬಿಸಿಸಿಐ ಘೋಷಿಸಿದೆ. ಹೀಗಾಗಿ ಡಾಟ್ ಬಾಲ್ ಸ್ಥಾನದಲ್ಲಿ ಹಸಿರು ಮರದ ಚಿತ್ರವನ್ನು ಬಳಸಲಾಗುತ್ತಿದೆ.

ಬಿಸಿಸಿಐನ ಹೊಸ ಅಭಿಯಾನಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಈ ಕ್ರಮದಿಂದಾಗಿ ಭಾರತವು ಮತ್ತಷ್ಟು ಹಸಿರುಮಯವಾಗಲಿದೆ ಎಂದು ಹಲವರು ಪ್ರತಿಕ್ರಿಯಿಸಿದ್ದಾರೆ. ಹಾಗೆಯೇ ಟ್ರೋಲ್‌ ಗೂ ಕಾರಣವಾಗಿದೆ. ಇನ್ನು ಕೆಲವರು ಕೆ.ಎಲ್. ರಾಹುಲ್‌ ಇರುತ್ತಿದ್ದರೆ ಬಿಸಿಸಿಐ, ಹೊಸ ಅಮೆಝಾನ್‌ ಕಾಡು ನಿರ್ಮಿಸಬೇಕಾಗಿ ಬರುತ್ತಿತ್ತು ಎಂದು ಟ್ರೋಲ್‌ ಮಾಡಿದ್ದಾರೆ. ಒಟ್ಟಿನಲ್ಲಿ ಸೋಷಿಯಲ್‌ ಮೀಡಿಯಾದಲ್ಲಿ ಐಪಿಎಲ್‌ ಕ್ರೇಜ್‌ ಮುಂದುವರೆದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...