ಟೀಂ ಇಂಡಿಯಾಗೆ ಬಿಸಿಸಿಐನಿಂದ 125 ಕೋಟಿ ರೂ. ಬಹುಮಾನ: ವಿರಾಟ್, ರೋಹಿತ್, ದ್ರಾವಿಡ್‌ಗೆ ಎಷ್ಟು?

Date:

ವೆಸ್ಟ್‌ ಇಂಡೀಸ್‌ನಲ್ಲಿ 2024ನೇ ಸಾಲಿನ ಟಿ20 ವಿಶ್ವಕಪ್‌ ಟ್ರೋಫಿ ಎತ್ತಿ ಹಿಡಿದ ರೋಹಿತ್ ಶರ್ಮಾ ಸಾರಥ್ಯದ ಭಾರತ ತಂಡಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) 125 ಕೋಟಿ ರೂ. ಬಹುಮಾನ ಘೋಷಿಸಿದೆ.

15 ಮಂದಿ ಆಟಗಾರರು ಸೇರಿ ಒಟ್ಟು 42 ಮಂದಿಯ ತಂಡ ಟಿ20 ವಿಶ್ವಕಪ್‌ ಸಲುವಾಗಿ ಅಮೆರಿಕ ಹಾಗೂ ವೆಸ್ಟ್‌ ಇಂಡೀಸ್‌ಗೆ ಪ್ರಯಾಣ ಬೆಳೆಸಿತ್ತು. ಆಟಗಾರರ ಹೊರತಾಗಿ ಕೋಚ್‌, ಸಹಾಯಕ ಸಿಬ್ಬಂದಿ ಮುಂತಾದವರು ಇದ್ದರು. ಬಿಸಿಸಿಐ ಘೋಷಿಸಿರುವ 125 ಕೋಟಿ ರೂ. ಬಹುಮಾನವು 42 ಮಂದಿಗೂ ಹಂಚಿಕೆಯಾಗುತ್ತದೆ.

ಇದರಲ್ಲಿ ಟೀಂ ಇಂಡಿಯಾದ 15 ಮಂದಿಗೆ ತಲಾ ಐದೈದು ಕೋಟಿ ರೂ. ನಿಡಲಾಗಿದೆ. ಒಂದೂ ಪಂದ್ಯವನ್ನು ಆಡದವರು ಕೂಡ ಬಹುಮಾನದ ಹಣ ಪಡೆಯಲಿದ್ದಾರೆ.ಭಾರತ ತಂಡದ ಕೋಚ್‌ ರಾಹುಲ್ ದ್ರಾವಿಡ್ ಕೂಡ 5 ಕೋಟಿ ರೂ. ಪಡೆಯಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

15 ಆಟಗಾರರಲ್ಲದೆ ಮೀಸಲು ಆಟಗಾರರಾದ ಶುಭ್‌ಮನ್‌ ಗಿಲ್, ಆವೇಶ್ ಖಾನ್ ಹಾಗೂ ಖಲೀಲ್‌ ಅಹಮದ್‌ ಅವರಿಗೆ ಬಹುಮಾನದ ಮೊತ್ತದಲ್ಲಿ 1 ಕೋಟಿ ರೂ. ನೀಡಲಾಗುತ್ತದೆ.

ಈ ಸುದ್ದಿ ಓದಿದ್ದೀರಾ? ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು: ಅಭಿಷೇಕ್ ಶರ್ಮಾ ದಾಖಲೆ ಶತಕ

ಕೋಚ್‌ ರಾಹುಲ್‌ ದ್ರಾವಿಡ್‌ ಅವರ ಸಹಾಯಕ ಸಿಬ್ಬಂದಿಯಾದ ಬ್ಯಾಟಿಂಗ್‌ ಕೋಚ್‌ ವಿಕ್ರಮ್‌ ರಾಥೋರ್, ಕ್ಷೇತ್ರ ರಕ್ಷಣೆ ಕೋಚ್ ಟಿ ದಿಲೀಪ್, ಬೌಲಿಂಗ್ ಕೋಚ್‌ ಪಾರಸ್‌ ಮಾಂಬ್ರೆ ತಲಾ 2.5 ಕೋಟಿ ರೂ. ಪಡೆಯಲಿದ್ದಾರೆ. ಅಜಿತ್‌ ಅಗರ್ಕರ್‌ ಒಳಗೊಂಡು ಆಯ್ಕೆ ಸಮಿತಿಯ ಸದಸ್ಯರಿಗೆ ತಲಾ ಒಂದು ಕೋಟಿ ರೂ. ನೀಡಲಾಗುತ್ತದೆ.

ಬೆಂಬಲಿತ ಸಹಾಯಕ ಸಿಬ್ಬಂದಿಯಾದ ಮೂವರು ಫಿಜಿಯೋಥೆರಪಿಗಳು, ಮೂವರು ಥ್ರೋಡೌನ್‌ ಪರಿಣಿತರು, ಇಬ್ಬರು ಮಾಲೀಶುಗಾರರು ಹಾಗೂ ಸದೃಢತೆ, ನಿಯಂತ್ರಿಸುವ ಕೋಚ್‌ ತಲಾ 2 ಕೋಟಿ ರೂ. ಪಡೆಯಲಿದ್ದಾರೆ.

“ಆಟಗಾರರು ಹಾಗೂ ಬೆಂಬಲಿತ ಸಿಬ್ಬಂದಿ ಸೇರಿ ಪ್ರತಿಯೊಬ್ಬರಿಗೂ ಇನ್‌ವಾಯ್ಸ್ ನೀಡಿ ಬಹುಮಾನದ ಹಣ ಪಡೆಯುವಂತೆ ಸೂಚಿಸಲಾಗಿದೆ” ಎಂದು ಬಿಸಿಸಿಐ ಅಧಿಕಾರಿಗಳು ತಿಳಿಸಿದ್ದಾರೆ.

ವಿಶ್ವಕಪ್‌ ಗೆದ್ದ ಟೀಂ ಇಂಡಿಯಾಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಕೂಡ 11 ಕೋಟಿ ಬಹುಮಾನ ಘೋಷಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...