ಬೆಂಗಳೂರು ದುರಂತ | ಕ್ರಿಕೆಟ್‌ ಸಂಸ್ಥೆಯ ಉನ್ನತ ಅಧಿಕಾರಿಗಳ ರಾಜೀನಾಮೆ

Date:

ಜೂನ್‌ 4ರಂದು ನಡೆದ ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತ ಘಟನೆಯ ‘ನೈತಿಕ ಹೊಣೆ’ ಹೊತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ನ (ಕೆಎಸ್‌ಸಿಎ) ಕಾರ್ಯದರ್ಶಿ ಎ ಶಂಕರ್ ಮತ್ತು ಖಜಾಂಚಿ ಇ.ಎಸ್ ಜೈರಾಮ್ ರಾಜೀನಾಮೆ ನೀಡಿದ್ದಾರೆ.

“ಕಳೆದ ಎರಡು ದಿನಗಳಲ್ಲಿ ನಡೆದ ಅನಿರೀಕ್ಷಿತ ಮತ್ತು ದುರದೃಷ್ಟಕರ ಘಟನೆಗಳಿಂದಾಗಿ ಬಹಳಷ್ಟು ನೊಂದಿದ್ದೇವೆ. ನಮ್ಮ ಅಧಿಕಾರ ಮತ್ತು ಪಾತ್ರವು ತುಂಬಾ ಸೀಮಿತವಾಗಿದ್ದರೂ, ನೈತಿಕ ಜವಾಬ್ದಾರಿಯ ಕಾರಣದಿಂದಾಗಿ, ಕೆಎಸ್‌ಸಿಎ ಕಾರ್ಯದರ್ಶಿ ಮತ್ತು ಖಜಾಂಚಿ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದೇವೆ. ಅಸೋಸಿಯೇಷನ್‌ನ ಅಧ್ಯಕ್ಷರಿಗೆ ರಾಜೀನಾಮೆ ಸಲ್ಲಿಸಿದ್ದೇವೆ” ಎಂದು ಎ ಶಂಕರ್ ಮತ್ತು ಇ.ಎಸ್ ಜೈರಾಮ್ ಹೇಳಿದ್ದಾರೆ.

ಬುಧವಾರ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ದುರಂತ ಘಟನೆ ಬೆನ್ನಲ್ಲೇ, ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ ದಯಾನಂದ್ ಸೇರಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಆರ್‌ಸಿಬಿ ಫ್ರಾಂಸೈಸಿಯ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್ ಅವರನ್ನು ವಜಾಗೊಳಿಸಲಾಗಿದೆ. ಗುಪ್ತಚರ ಇಲಾಖೆಯ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಬೆಂಗಳೂರು ದುರಂತ | ಭೀಕರ ಘಟನೆಗೆ ಏನೆಲ್ಲ ಕಾರಣಗಳು– ಸಂಪೂರ್ಣ ವರದಿ

ದುರ್ಘಟನೆಯ ಬಳಿಕ ಕೆಎಸ್‌ಸಿಎ ಮತ್ತು ಆರ್‌ಸಿಬಿ ಮೃತ್ರಪಟ್ಟವರ ಸಂತ್ರಸ್ತ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದೆ. “ಬುಧವಾರ, ಬೆಂಗಳೂರಿನಲ್ಲಿ ನಡೆದ ದುರದೃಷ್ಟಕರ ಘಟನೆಯು ಆರ್‌ಸಿಬಿ ಕುಟುಂಬಕ್ಕೆ ತುಂಬಾ ದುಃಖ ಮತ್ತು ನೋವನ್ನುಂಟು ಮಾಡಿದೆ” ಎಂದು ಆರ್‌ಸಿಬಿ ಹೇಳಿಕೊಂಡಿದೆ.

ಸದ್ಯ, ದುರಂತ ಘಟನೆಯ ಕುರಿತು ಮ್ಯಾಜಿಸ್ಟೀರಿಯಲ್ (ಜಿಲ್ಲಾಧಿಕಾರಿ ನೇತೃತ್ವದಲ್ಲಿ) ತನಿಖೆ ನಡೆಯುತ್ತಿದೆ. 15 ದಿನಗಳ ಒಳಗಾಗಿ ತನಿಖಾ ವರದಿ ಸಲ್ಲಿಸುವಂತೆ ಸರ್ಕಾರ ಸೂಚಿಸಿದೆ. ಆರ್‌ಸಿಬಿ ವಿರುದ್ಧ ಈವರೆಗೆ ಮೂರು ಪ್ರಕರಣಗಳು ದಾಖಲಾಗಿವೆ. ಅಲ್ಲದೆ, ಆರ್‌ಸಿಬಿಯ ಸ್ಟಾರ್‌ ಕ್ರಿಕೆಟಿಗ ವಿರಾಟ್‌ ಕೊಹ್ಲಿ ವಿರುದ್ಧವೂ ದೂರು ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...