ಐಪಿಎಲ್‌ನಲ್ಲಿ ಮೋಸದಾಟದ ಘಾಟು: ಫ್ರಾಂಚೈಸಿ ತಂಡಗಳು, ಆಟಗಾರರಿಗೆ ಬಿಸಿಸಿಐ ಖಡಕ್‌ ಎಚ್ಚರಿಕೆ

Date:

ಇಂಡಿಯನ್ ಪ್ರೀಮಿಯರ್ ಲೀಗ್​ 18ರ ಆವೃತ್ತಿಯ 31 ಪಂದ್ಯಗಳು ಪೂರ್ಣಗೊಂಡಿದ್ದು, ಈ ನಡುವೆ ಮ್ಯಾಚ್‌ ಫಿಕ್ಸಿಂಗ್ ಪ್ರಯತ್ನ ನಡೆಸಲಾಗಿದೆ ಎಂಬ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಈ ಬಗ್ಗೆ ಬಿಸಿಸಿಐನ ಭ್ರಷ್ಟಾಚಾರ ನಿಗ್ರಹ ಮತ್ತು ಭದ್ರತಾ ಘಟಕ (ಎಸಿಎಸ್‌ಯು) ಈಗಾಗಲೇ ಲೀಗ್‌ನ ಎಲ್ಲ 10 ತಂಡಗಳ ಮಾಲೀಕರು, ಆಟಗಾರರು, ಕೋಚ್‌ಗಳು, ಸಹಾಯಕ ಸಿಬ್ಬಂದಿ ಹಾಗೂ ವೀಕ್ಷಕ ವಿವರಣೆಕಾರರಿಗೆ ಎಚ್ಚರಿಕೆ ನೀಡಿದೆ. ಯಾರಾದರೂ ತಮ್ಮನ್ನು ಸಂಪರ್ಕಿಸಲು ಪ್ರಯತ್ನಿಸಿದರೆ ತಕ್ಷಣ ವರದಿ ಮಾಡಬೇಕೆಂದು ಸೂಚಿಸಲಾಗಿದೆ.

ಎಸಿಯುಸಿ ಪ್ರಕಾರ, ಪ್ರಸ್ತುತ ಟೂರ್ನಿಯಲ್ಲಿ ಭ್ರಷ್ಟಾಚಾರದ ಕರಿನೆರಳು ಆವರಿಸಿದೆ. ಇದಕ್ಕಾಗಿ ಆಟಗಾರರು, ತರಬೇತುದಾರರು, ಸಹಾಯಕ ಸಿಬ್ಬಂದಿ, ತಂಡದ ಮಾಲೀಕರು ಮತ್ತು ವೀಕ್ಷಕರ ಕುಟುಂಬಗಳ ಸದಸ್ಯರ ಜೊತೆ ಅಭಿಮಾನಿಗಳಂತೆ ನಟಿಸಿ ದುಬಾರಿ ಉಡುಗೊರೆಗಳನ್ನು ನೀಡುವ ಮೂಲಕ ಅವರನ್ನು ಓಲೈಸುವ ಪ್ರಯತ್ನಗಳು ನಡೆಯುತ್ತಿವೆ. ಈ ಮೂಲಕ ಫಿಕ್ಸಿಂಗ್​ ನಡೆಸಲು ಯತ್ನಿಸಲಾಗಿದೆ ಎಂದು ತಿಳಿದು ಬಂದಿದೆ.

ಮಾಧ್ಯಮವೊಂದರ ವರದಿಯ ಪ್ರಕಾರ, ಹೈದರಾಬಾದ್ ಮೂಲದ ಉದ್ಯಮಿಯೊಬ್ಬ ಪಂದ್ಯಾವಳಿಯಲ್ಲಿ ಭಾಗವಹಿಸುವವರೊಂದಿಗೆ ಐಪಿಎಲ್‌ನ ಎಲ್ಲರೊಂದಿಗೂ ಸ್ನೇಹ ಬೆಳೆಸಲು ಪ್ರಯತ್ನಿಸುತ್ತಿದ್ದಾನೆ. ಆದಾಗ್ಯೂ, ಅವರು ಯಾರೆಂಬುದನ್ನು ಬಹಿರಂಗಪಡಿಸಲಾಗಿಲ್ಲ. ಆದರೆ ಈ ಉದ್ಯಮಿ ಬುಕ್ಕಿಗಳೊಂದಿಗೆ ನೇರ ಸಂಪರ್ಕ ಹೊಂದಿದ್ದು ಭ್ರಷ್ಟಾಚಾರ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಉದ್ಯಮಿಯು ಈ ಹಿಂದೆಯೂ ಇಂತಹ ಭ್ರಷ್ಟಾಚಾರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು. ಹೀಗಾಗಿಯೇ ಇದೀಗ ಐಪಿಎಲ್‌ನೊಂದಿಗೆ ಸಂಬಂಧ ಹೊಂದಿರುವ ಪ್ರತಿಯೊಬ್ಬರಿಗೂ ಎಸಿಎಸ್‌ಯು ಎಚ್ಚರಿಕೆ ನೀಡಿದೆ. ಈ ಉದ್ಯಮಿ ಯಾವುದೇ ರೀತಿಯಲ್ಲಿ ಸಂಪರ್ಕಿಸಲು ಪ್ರಯತ್ನಿಸಿದರೆ ತಕ್ಷಣ ವರದಿ ಮಾಡುವಂತೆ ಎಂದು ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? IPL 2025: ಬ್ಯಾಟರ್‌ಗಳು ಅಳತೆ ಮೀರಿದ ಬ್ಯಾಟ್ ಬಳಸುತ್ತಿದ್ದಾರೆಯೇ? ಅಂಪೈರ್‌ಗಳು ಪರಿಶೀಲಿಸುವುದೇಕೆ?

ಈ ವ್ಯಕ್ತಿ ತನ್ನನ್ನು ತಾನು ಅಭಿಮಾನಿ ಎಂದು ಹೇಳಿಕೊಂಡು ಆಟಗಾರರು, ತರಬೇತುದಾರರು, ಸಹಾಯಕ ಸಿಬ್ಬಂದಿ ಮತ್ತು ಫ್ರಾಂಚೈಸ್ ಮಾಲೀಕರಿಗೆ ಹತ್ತಿರವಾಗಲು ಪ್ರಯತ್ನಿಸುತ್ತಿದ್ದಾನೆ. ಆತ ತಂಡಗಳು ಉಳಿದುಕೊಳ್ಳುವ ಹೋಟೆಲ್ ಮತ್ತು ಪಂದ್ಯಗಳ ವೇಳೆಯೂ ಕಾಣಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಅಲ್ಲದೆ ಈ ವೇಳೆ ಆಟಗಾರರನ್ನು ಅಥವಾ ಆಟಗಾರರಿಗೆ ಆಪ್ತರಾಗಿರುವವರನ್ನು ತನ್ನ ಖಾಸಗಿ ಔತನಕೂಟಗಳಿಗೆ ಆಹ್ವಾನಿಸುತ್ತಿದ್ದಾನೆ. ತಂಡದ ಸದಸ್ಯರಿಗೆ ಮಾತ್ರವಲ್ಲದೆ ಅವರ ಕುಟುಂಬಗಳಿಗೂ ಉಡುಗೊರೆಗಳನ್ನು ನೀಡಿ ಅವರೊಂದಿಗೆ ಆಪ್ತತೆ ಬೆಳೆಸಿಕೊಳ್ಳಲು ಮುಂದಾಗುತ್ತಿದ್ದಾರೆ ಎಂದು ಹೇಳಲಾಗಿದೆ.

ಈತ ಅಭಿಮಾನಿಯಂತೆ ನಟಿಸುತ್ತಾ, ಅವರು ಆಟಗಾರರು, ತರಬೇತುದಾರರು ಮತ್ತು ವೀಕ್ಷಕ ವಿವರಣೆಗಾರರ ​​ಕುಟುಂಬ ಸದಸ್ಯರನ್ನು ಆಭರಣ ಅಂಗಡಿಗಳು ಮತ್ತು ದುಬಾರಿ ಹೋಟೆಲ್‌ಗಳಿಗೆ ಕರೆದೊಯ್ಯಲು ಮುಂದಾಗುತ್ತಿದ್ದಾನೆ. ಇಷ್ಟು ಮಾತ್ರವಲ್ಲದೆ, ಅವರು ಸಾಮಾಜಿಕ ಮಾಧ್ಯಮಗಳ ಮೂಲಕ ವಿದೇಶದಲ್ಲಿ ವಾಸಿಸುವ ಐಪಿಎಲ್​ಗೆ ಸಂಬಂಧಪಟ್ಟಿರುವ ಸಂಬಂಧಿಕರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದಾರೆ. ಹೀಗಾಗಿಯೇ ಸಿಸಿಐನ ಭ್ರಷ್ಟಾಚಾರ ನಿಗ್ರಹ ಮತ್ತು ಭದ್ರತಾ ಘಟಕ ಲೀಗ್‌ನ ಎಲ್ಲ 10 ತಂಡಗಳಿಗೆ ಎಚ್ಚರಿಕೆ ನೀಡಿದೆ.

2013 ರಲ್ಲಿ ಐಪಿಎಲ್​ನಲ್ಲಿ ಸ್ಪಾಟ್ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ಪ್ರಕರಣಗಳು ನಡೆದಿದ್ದವು. ಈ ಸಂಬಂಧ ಕ್ರಿಕೆಟಿಗರಾದ ಶ್ರೀಶಾಂತ್ , ಅಜಿತ್ ಚಾಂಡಿಲಾ ಮತ್ತು ಅಂಕಿತ್ ಚವಾಣ್ ಅವರನ್ನು ಸ್ಪಾಟ್ ಫಿಕ್ಸಿಂಗ್ ಆರೋಪದ ಮೇಲೆ ಬಂಧಿಸಲಾಗಿತ್ತು. ಅಲ್ಲದೆ ಫಿಕ್ಸಿಂಗ್ ಸಾಬೀತಾದ ಹಿನ್ನಲೆಯಲ್ಲಿ 2016 ಮತ್ತು 2017 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳನ್ನು 2 ವರ್ಷಗಳ ಕಾಲ ನಿಷೇಧಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...