BREAKING NEWS | ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಗೆದ್ದ ಭಾರತ

Date:

ತವರು ನೆಲದಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಗೆಲುವಿನ ನಗೆ ಬೀರಿದೆ.

ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ಅಹಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಪಂದ್ಯ ನಡೆಯುತ್ತಿದ್ದು, 140 ರನ್‌ಗಳ ಅಂತರದಿಂದ ವೆಸ್ಟ್ ಇಂಡೀಸ್ ತಂಡವನ್ನು ಭಾರತ ಮಣಿಸಿದೆ.

ಆತಿಥೇಯ ಟೀಂ ಇಂಡಿಯಾ ಮೊದಲ ಟೆಸ್ಟ್‌ನಲ್ಲೇ ಗೆಲುವಿನ ಮೂಲಕ ವೆಸ್ಟ್ ಇಂಡೀಸ್ ವಿರುದ್ಧ ಬಿಗಿ ಹಿಡಿತ ಸಾಧಿಸಿದೆ. ರವೀಂದ್ರ ಜಡೇಜಾ ಅವರ ಆಲ್ರೌಂಡ್ ಪ್ರದರ್ಶನ (ಅಜೇಯ 104 ರನ್ ಮತ್ತು 4 ವಿಕೆಟ್) ಹಾಗೂ ಮೊಹಮ್ಮದ್ ಸಿರಾಜ್ ಅವರ ಮಾರಕ ಬೌಲಿಂಗ್ ದಾಳಿಯ ನೆರವಿನಿಂದ ಭಾರತದ ಗೆಲುವು ಸುಲಭವಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪಂದ್ಯದಲ್ಲಿ ಟಾಸ್​ ಗೆದ್ದು ಮೊದಲು ಬ್ಯಾಟಿಂಗ್​ ಮಾಡಿದ ಕೆರೆಬಿಯನ್​ ಪಡೆ ಸಿರಾಜ್ ಮತ್ತು ಬುಮ್ರಾ ಬೌಲಿಂಗ್‌ ದಾಳಿಗೆ ಸಿಲುಕಿ ಮೊದಲ ಇನ್ನಿಂಗ್ಸ್​ನಲ್ಲಿ ಕೇವಲ 162 ರನ್‌ಗಳಿಗೆ ಆಲೌಟ್ ಅಯ್ತು. ವೇಗಿ ಸಿರಾಜ್ 14 ಓವರ್‌ಗಳಲ್ಲಿ 40 ರನ್​ ನೀಡಿ ನಾಲ್ಕು ವಿಕೆಟ್‌ಗಳನ್ನು ಪಡೆದರೆ, ಬುಮ್ರಾ 42 ರನ್​ ಬಿಟ್ಟುಕೊಟ್ಟು ಮೂರು ವಿಕೆಟ್‌ಗಳನ್ನು ಕಬಳಿಸಿದರು. ಕುಲ್ದೀಪ್ ಎರಡು ವಿಕೆಟ್‌, ವಾಷಿಂಗ್ಟನ್​ ಸುಂದರ್ ಒಂದು ವಿಕೆಟ್ ಪಡೆದುಕೊಂಡರು.

ಮೊದಲ ದಿನವೇ ವೆಸ್ಟ್​ ಇಂಡೀಸ್​ಗೆ ಆಲೌಟ್​ ಮಾಡಿ ಬ್ಯಾಟಿಂಗ್​ಗೆ ಬಂದ ಭಾರತ ದಿನದಾಟದ ಅಂತ್ಯಕ್ಕೆ 2 ವಿಕೆಟ್​ ನಷ್ಟಕ್ಕೆ 121 ರನ್​ಗಳನ್ನು ಕಲೆಹಾಕಿತು. ನಂತರ ಎರಡನೇ ದಿನದಂದು ಭಾರತದ ಪರ ಕೆಎಲ್​ ರಾಹುಲ್​ (100), ಧ್ರುವ್​ ಜುರೇಲ್​ (125), ರವೀಂದ್ರ ಜಡೇಜಾ (104*) ಶತಕ ಸಿಡಿಸಿದರೇ, ನಾಯಕ ಗಿಲ್​ ಅರ್ಧಶತಕ ಸಿಡಿಸಿದರು. ಇದರಿಂದಾಗಿ ಭಾರತ 5 ವಿಕೆಟ್​ ನಷ್ಟಕ್ಕೆ 448 ರನ್​ ಗಳಿಸಿ 286 ರನ್​ಗಳ ಮುನ್ನಡೆಯೊಂದಿಗೆ ಎರಡನೇ ದಿನದಾಟ ಕೊನೆಗೊಳಿಸಿತು. ಮೂರನೇ ದಿನವಾದ ಇಂದು ಭಾರತ ಬ್ಯಾಟಿಂಗ್​ ಮಾಡದೇ ಡಿಕ್ಲೇರ್​ ಘೋಷಣೆ ಮಾಡಿತು.

WhatsApp Image 2025 10 04 at 1.57.35 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...