ಭಾರತೀಯ ಕುಸ್ತಿ ಫೆಡರೇಷನ್ ಚುನಾವಣೆ: ಬ್ರಿಜ್ ಭೂಷಣ್, ಆತನ ಪುತ್ರನ ಹೆಸರು ಕೈಬಿಟ್ಟ ಮಂಡಳಿ

Date:

ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಹಾಗೂ ಆತನ ಪುತ್ರ ಕರಣ್‌ ಹೆಸರನ್ನು ಆಗಸ್ಟ್ 12 ರಂದು ನಡೆಯುವ ಚುನಾವಣಾ ಕಣದಿಂದ ಕುಸ್ತಿ ಫೆಡರೇಷನ್ ಕೈಬಿಟ್ಟಿದೆ.

ಚುನಾವಣಾ ಅಧಿಕಾರಿ, ನಿವೃತ್ತ ನ್ಯಾಯಮೂರ್ತಿ ಮಹೇಶ್ ಮಿತ್ತಲ್ ಕುಮಾರ್ ಅವರು ಅರ್ಹ ಮತದಾರರ ಪಟ್ಟಿಯನ್ನು ಅಂತಿಮಗೊಳಿಸಿದ್ದು, ಬ್ರಿಜ್ ಭೂಷಣ್ ಶರಣ್ ಸಿಂಗ್ ಹಾಗೂ ಉತ್ತರ ಪ್ರದೇಶ ಕುಸ್ತಿ ಫೆಡರೇಷನ್ ಅಧ್ಯಕ್ಷರಾಗಿರುವ ಅವರ ಕಿರಿಯ ಪುತ್ರ ಕರಣ್ ಅವರ ಹೆಸರು ಅಂತಿಮ ಪಟ್ಟಿಯಲ್ಲಿಲ್ಲ.

ರಾಜ್ಯ ಸಂಘವನ್ನು ಪ್ರತಿನಿಧಿಸಬೇಕಿದ್ದ ಇವರಿಬ್ಬರ ಬದಲು ಪ್ರೇಮ್ ಕುಮಾರ್ ಮಿಶ್ರಾ ಮತ್ತು ಸಂಜಯ್ ಸಿಂಗ್ ಮತದಾನ ಮಾಡಲಿದ್ದಾರೆ. ಕಳಂಕಿತ ಅಧ್ಯಕ್ಷ ಹಾಗೂ ಅವರ ಪುತ್ರನನ್ನು ಚುನಾವಣಾ ಪ್ರಕ್ರಿಯೆಯಿಂದ ಕೈಬಿಡಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ ಬಿಹಾರ ಕುಸ್ತಿ ಫೆಡರೇಷನ್ ಅಧ್ಯಕ್ಷ ಹಾಗೂ ಬ್ರಿಜ್ ಭೂಷಣ್ ಅವರ ಅಳಿಯ ವಿಶಾಲ ಪ್ರತಾಪ್ ಸಿಂಗ್ ಹೆಸರು ಪಟ್ಟಿಯಲ್ಲಿದೆ. ರಾಜ್ಯದ ಪರವಾಗಿ ವಿನಯ್ ಕುಮಾರ್ ಸಿಂಗ್ ಜತೆ ವಿಶಾಲ್ ಮತದಾನ ಮಾಡುವ ಅರ್ಹತೆ ಪಡೆದಿದ್ದಾರೆ. ಬ್ರಿಜ್ ಭೂಷಣ್ ಅವರ ಹುದ್ದೆಗೆ ಈ ಇಬ್ಬರು ಉತ್ತರಾಧಿಕಾರಿಗಳಾಗಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಈ ಸುದ್ದಿ ಓದಿದ್ದೀರಾ? ಮಳೆಯಿಂದ ಡ್ರಾನಲ್ಲಿ ಅಂತ್ಯವಾದ ಎರಡನೇ ಟೆಸ್ಟ್; ಭಾರತಕ್ಕೆ ಸರಣಿ ಜಯ

2023 ರಿಂದ 2026ರ ಅವಧಿಯ ಪದಾಧಿಕಾರಿ ಹುದ್ದೆಗಳಿಗೆ ಸ್ಪರ್ಧಿಸಲು ಅರ್ಹತೆ ಪಡೆದವರ ಪಟ್ಟಿಯಲ್ಲಿ ರೈಲ್ವೆ ಕ್ರೀಡಾ ಉತ್ತೇಜನ ಮಂಡಳಿಯ ಕಾರ್ಯದರ್ಶಿ ಪ್ರೇಮ್ ಚಂದ ಲೊಚಾಬ್ ಅವರ ಹೆಸರು ಕೂಡ ಇದೆ. ಹರ್ಯಾಣ ಹಾಗೂ ರಾಜಸ್ಥಾನದ ಜಾಟ್ ಸಮುದಾಯದ ಮೇಲೆ ಉತ್ತಮ ನಿಯಂತ್ರಣ ಹೊಂದಿರುವ ಇವರು ಗುಜರಾತ್‌ನಿಂದ ಐ ಡಿ ನಾನಾವತಿ ಜತೆ ಜತೆ ಮತ ಚಲಾಯಿಸುವ ಅಧಿಕಾರ ಪಡೆದಿದ್ದಾರೆ. ನಾನಾವತಿ ಅವರು ಬ್ರಿಜ್ ಬೆಂಬಲಿಗರಾಗಿದ್ದು, ಗುಜರಾತ್ ರಾಜ್ಯ ಕುಸ್ತಿ ಫೆಡರೇಷನ್ ಅಧ್ಯಕ್ಷರಾಗಿದ್ದಾರೆ.

ಭಾರತೀಯ ಕುಸ್ತಿ ಫೆಡರೇಷನ್ 25 ರಾಜ್ಯ ಘಟಕಗಳಿಂದ ಒಟ್ಟು 50 ಸದಸ್ಯರನ್ನು ಹೊಂದಿದೆ. ಅಧ್ಯಕ್ಷರು ಸೇರಿದಂತೆ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನಾಮನಿರ್ದೇಶನ ಮಾಡಲು ಇದೇ ಆಗಸ್ಟ್ 1 ಕೊನೆಯ ದಿನಾಂಕವಾಗಿದೆ. ಮರುದಿನ ನಾಮಪತ್ರಗಳ ಪರಿಶೀಲನೆ ನಡೆಸಿ, ಆಗಸ್ಟ್ 7 ರಂದು ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು. ಅಗತ್ಯವಿದ್ದಲ್ಲಿ ಆಗಸ್ಟ್ 12 ರಂದು ಮತದಾನ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...