ಬುಮ್ರಾ ಅದ್ಭುತ ಯಾರ್ಕರ್‌ಗೆ ಓಲಿ ಪೋಪ್ ಕ್ಲೀನ್‌ಬೌಲ್ಡ್: ‘ಪ್ರಶಸ್ತಿಗೆ ಅರ್ಹವಾದ ಎಸೆತ’ ಎಂದ ನೆಟ್ಟಿಗರು!

Date:

ವಿಶಾಖಪಟ್ಟಣದ ಡಾ. ವೈ ಎಸ್ ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಎರಡನೇ ದಿನ ಟೀಮ್ ಇಂಡಿಯಾದ ವೇಗಿ ಜಸ್ಪ್ರೀತ್ ಬುಮ್ರಾ ಎಸೆದ ಅದ್ಭುತ ಯಾರ್ಕರ್ ಎಸೆತವೊಂದಕ್ಕೆ ಓಲಿ ಪೋಪ್ ಕ್ಲೀನ್‌ಬೌಲ್ಡ್ ಆಗಿರುವ ವಿಡಿಯೋ ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ.

ಮೊದಲ ಇನ್ನಿಂಗ್ಸ್‌ನಲ್ಲಿ 396 ರನ್‌ಗಳಿಸಿ ಟೀಮ್ ಇಂಡಿಯಾ ಆಲೌಟಾದ ಬಳಿಕ ಇಂಗ್ಲೆಂಡ್ ಬ್ಯಾಟಿಂಗ್ ಆರಂಭಿಸಿದೆ. ಬುಮ್ರಾ ಹಾಗೂ ಸ್ಪಿನ್ನರ್ ಕುಲ್‌ದೀಪ್ ಯಾದವ್ ಮಾರಕ ದಾಳಿಗೆ ರನ್ ಗಳಿಸಲು ಪರದಾಡಿದ ಆಂಗ್ಲನ್ನರು, 239 ರನ್ ಗಳಿಸುವಷ್ಟರಲ್ಲಿ 9 ವಿಕೆಟ್ ಕಳೆದುಕೊಂಡಿದೆ.

ಪ್ರಶಸ್ತಿಗೆ ಅರ್ಹವಾದ ಎಸೆತ ಎಂದ ನೆಟ್ಟಿಗರು
ಮೊದಲ ಟೆಸ್ಟ್ ಪಂದ್ಯದಲ್ಲಿ ಮಿಂಚಿದ್ದ ಓಲಿ ಪೋಪ್, ಜಸ್ಪ್ರೀತ್ ಬುಮ್ರಾ ಎಸೆದ ಅದ್ಭುತ ಯಾರ್ಕರ್ ಎಸೆತದಲ್ಲಿ ಕ್ಲೀನ್‌ಬೌಲ್ಡ್ ಆಗಿರುವ ವಿಡಿಯೋಗೆ ನೆಟ್ಟಿಗರು ಭಾರೀ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

@mufaddal_vohra ಎಂಬ ಎಕ್ಸ್ ಬಳಕೆದಾರರೊಬ್ಬರು ಬಿಸಿಸಿಐ ಹಂಚಿಕೊಂಡಿರುವ ವಿಡಿಯೋವನ್ನು ತಮ್ಮ ವಾಲ್‌ನಲ್ಲಿ ಹಂಚಿಕೊಂಡು, “ಬುಮ್ರಾ ಈ ಮಾರಕ ಯಾರ್ಕರ್‌ಗಾಗಿ ಪ್ರತ್ಯೇಕ ಪ್ರಶಸ್ತಿಗೆ ಅರ್ಹರು” ಎಂದು ತಿಳಿಸಿದ್ದಾರೆ.

14 ಮೀಟರ್ ಹಿಂದೆ ಓಡಿ ಹಿಡಿದ ಅದ್ಭುತ ಕ್ಯಾಚ್ ಹಿಡಿದ ಶ್ರೇಯಸ್ ಅಯ್ಯರ್
ಅಕ್ಸರ್ ಪಟೇಲ್ ಅವರು ಇಂಗ್ಲೆಂಡ್ ಆರಂಭಿಕ ಆಟಗಾರ ಜಾಕ್ ಕ್ರಾಲಿಯನ್ನು ತಮ್ಮ ಸ್ಪಿನ್ ಬೌಲಿಂಗ್‌ನ ಬಲೆಗೆ ಬೀಳಿಸಿದರು. ಅಕ್ಷರ್ ಪಟೇಲ್ ಅವರ ಈ ವಿಕೆಟ್‌ನಲ್ಲಿ ಶ್ರೇಯಸ್ ಅಯ್ಯರ್ ಪ್ರಮುಖ ಪಾತ್ರ ಇದೆ. ಸುಮಾರು 14 ಮೀಟರ್ ಹಿಂದಕ್ಕೆ ಓಡಿ ಬಂದ ಅಯ್ಯರ್ ಡೈವ್ ಮಾಡಿ ಕ್ಯಾಚ್‌ನ್ನು ಹಿಡಿದರು.

ಸಂಘಟಿತ ದಾಳಿ ನಡೆಸಿದ ಟೀಮ್ ಇಂಡಿಯಾ
ಇಂಗ್ಲೆಂಡ್ ಉತ್ತಮ ಆರಂಭವಾಗಿತ್ತು. ಬೆನ್ ಡಕೆಟ್ ಹಾಗೂ ಜಾಕ್ ಕ್ರಾಲಿ 59 ರನ್‌ಗಳ ಉತ್ತಮ ಜೊತೆಯಾಟ ನೀಡುತ್ತಾ ಮುಂದುವರಿಯುತ್ತಿದ್ದಾಗ ಬೆನ್ ಡಕೆಟ್(21 ರನ್) ಅವರನ್ನು ಔಟ್ ಮಾಡುವ ಕುಲ್‌ದೀಪ್ ಯಾದವ್ ಈ ಜೋಡಿಯನ್ನು ಬೇರ್ಪಡಿಸುವಲ್ಲಿ ಯಶಸ್ವಿಯಾದರು. ಆ ಬಳಿಕ ಶ್ರೇಯಸ್ ಅಯ್ಯರ್ ಹಿಡಿದ ಅದ್ಭುತ ಕ್ಯಾಚ್‌ಗೆ ಅರ್ಧಶತಕ ದಾಖಲಿಸಿ ಮುಂದುವರಿಯುತ್ತಿದ್ದ ಜಾಕ್ ಕ್ರಾಲಿ(76 ರನ್) ಬಲಿಯಾದರು. ಬಳಿಕ ಓಲಿ ಪೋಪ್(23 ರನ್) ಬುಮ್ರಾ ಮಾರಕ ಯಾರ್ಕರ್‌ಗೆ ಬಲಿಯಾದರು. ಜೋ ರೂಟ್(5 ರನ್) ಮತ್ತೆ ವಿಫಲರಾದರು. ಉಳಿದಂತೆ ಅರ್ಧ ಶತಕದತ್ತ ಮುಂದುವರಿಯುತ್ತಿದ್ದ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ (47) ಅವರನ್ನು ಬುಮ್ರಾ ಕ್ಲೀನ್ ಬೌಲ್ಡ್ ಮಾಡಿದರು. ಜಾನಿ ಬೈರ್‌ಸ್ಟೋವ್ (25 ರನ್), ಬೆನ್ ಫೋಕ್ಸ್ (6 ರನ್), ರೆಹಾನ್ ಅಹ್ಮದ್ 6 ರನ್ ಗಳಿಸಿ ಔಟಾದರು.

ಬುಮ್ರಾ 5 ವಿಕೆಟ್ ಪಡೆದರೆ, ಕುಲ್‌ದೀಪ್ 3 ವಿಕೆಟ್ ಪಡೆದಿದ್ದಾರೆ. ಅಕ್ಸರ್ ಪಟೇಲ್ ಒಂದು ವಿಕೆಟ್ ತನ್ನದಾಗಿಸಿಕೊಂಡಿದ್ದಾರೆ.

ಬುಮ್ರಾ 150 ವಿಕೆಟ್ ಸಾಧನೆ
ಬುಮ್ರಾ ಈವರೆಗೆ ಐದು ವಿಕೆಟ್‌ಗಳನ್ನು ಪಡೆಯುವ ಮೂಲಕ ಟೆಸ್ಟ್‌ ಕ್ರಿಕೆಟ್‌ನಲ್ಲಿ 150 ವಿಕೆಟ್‌ ಪಡೆದ ಸಾಧನೆ ಮಾಡಿದ್ದಾರೆ. ಅದರೊಂದಿಗೆ 10ನೇ ಬಾರಿಗೆ ಐದು ವಿಕೆಟ್‌ ಗೊಂಚಲು ಪಡೆದುಕೊಂಡ ಸಾಧನೆ ಮಾಡಿದ್ದಾರೆ.

ಟೀಮ್ ಇಂಡಿಯಾ ಪರ ‘ಯಶಸ್ವಿ ಜೈಸ್ವಾಲ್‌’
ಭಾರತ ಹಾಗೂ ಇಂಗ್ಲೆಂಡ್‌ ನಡುವಣ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಆತಿಥೇಯ ತಂಡ 396 ರನ್‌ಗಳಿಗೆ ಆಲೌಟ್ ಆಗಿದೆ. ಟೀಮ್ ಇಂಡಿಯಾದ ಪರ ಯಶಸ್ವಿ ಜೈಸ್ವಾಲ್‌ ಭರ್ಜರಿ ಬ್ಯಾಟಿಂಗ್ ಮಾಡಿ ತಂಡಕ್ಕೆ ಆಧಾರವಾದರು. ಪರಿಣಾಮ ಟೀಮ್ ಇಂಡಿಯಾ ಉತ್ತಮ ಮೊತ್ತ ಕಲೆ ಹಾಕುವಲ್ಲಿ ನೆರವಾದರು.

ಎರಡನೇ ದಿನದಾಟವನ್ನು 6 ವಿಕೆಟ್‌ಗೆ 336 ರನ್‌ಗಳಿಂದ ಆಟ ಮುಂದುವರಿಸಿದ ಟೀಮ್ ಇಂಡಿಯಾ 396 ರನ್‌ಗಳಿಗೆ ಆಲೌಟ್ ಆಯಿತು. ಮೊದಲ ದಿನ ಬ್ಯಾಟಿಂಗ್ ಕಾಯ್ದುಕೊಂಡಿದ್ದ ಯಶಸ್ವಿ ಜೈಸ್ವಾಲ್ ಹಾಗೂ ಅಶ್ವಿನ್ ಜೋಡಿ ಏಳನೇ ವಿಕೆಟ್‌ಗೆ 34 ರನ್ ಜೊತೆಯಾಟದ ಕಾಣಿಕೆ ನೀಡಿದರು.

ಯಶಸ್ವಿ ಜೈಸ್ವಾಲ್ ಮನಮೋಹಕ ಬ್ಯಾಟಿಂಗ್ ಎರಡನೇ ದಿನದ ಮೊದಲಾವಧಿಯಲ್ಲೂ ಮುಂದುವರೆಸಿದರು.ಯಶಸ್ವಿ ಜೈಸ್ವಾಲ್‌ ಸುಮಾರು 423 ನಿಮಿಷ ಬ್ಯಾಟಿಂಗ್ ಮಾಡಿ 290 ಎಸೆತಗಳನ್ನು ಎದುರಿಸಿ 209 ರನ್ ಸಿಡಿಸಿದರು. ಇದರಲ್ಲಿ 19 ಬೌಂಡರಿ, 7 ಸಿಕ್ಸರ್ ಸೇರಿವೆ. ಇವರು ಅನುಭವಿ ಜೇಮ್ಸ್‌ ಆಂಡರ್ಸನ್‌ ಎಸೆತದಲ್ಲಿ ಔಟ್ ಆದರು.

ಟೀಮ್ ಇಂಡಿಯಾ ಎರಡನೇ ದಿನದಾಟದಲ್ಲಿ 60 ರನ್‌ ಸೇರಿಸುವಷ್ಟರಲ್ಲಿ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡಿತು. ಇಂಗ್ಲೆಂಡ್ ತಂಡದ ವೇಗಿ ಜೇಮ್ಸ್‌ ಆಂಡರ್ಸನ್‌ 25 ಓವರ್ ಬೌಲಿಂಗ್ ಮಾಡಿ 47 ರನ್ ನೀಡಿ ಮೂರು ವಿಕೆಟ್ ಕಬಳಿಸಿದರು. ಇನ್ನು ಪದಾರ್ಪಣೆ ಪಂದ್ಯವನ್ನು ಆಡುತ್ತಿರುವ ಶೋಯಿಬ್ ಬಶೀರ್‌ ಹಾಗೂ ರೇಹನ್ ಅಹ್ಮದ್ ತಲಾ ಮೂರು ವಿಕೆಟ್ ಕಬಳಿಸಿ ಮಿಂಚಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...