ಟೆಸ್ಟ್ | ಜಸ್ಪ್ರೀತ್ ಬುಮ್ರಾ ಮಾರಕ ದಾಳಿಗೆ ತತ್ತರಿಸಿದ ಆಂಗ್ಲನ್ನರು: 2ನೇ ದಿನ ಟೀಮ್ ಇಂಡಿಯಾ ಮೇಲುಗೈ

Date:

ವಿಶಾಖಪಟ್ಟಣದ ಡಾ. ವೈ ಎಸ್ ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಅವರ ದ್ವಿಶತಕ ಹಾಗೂ ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾ ಮಾರಕ ದಾಳಿಯ ನೆರವಿನಿಂದ ಟೀಮ್ ಇಂಡಿಯಾ ಎರಡನೇ ದಿನ ಮೇಲುಗೈ ಸಾಧಿಸಿದೆ.

ಮೊದಲ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾದ ಆರಂಭಿಕ ಎಡಗೈ ಬ್ಯಾಟರ್ ಯಶಸ್ವಿ ಜೈಸ್ವಾಲ್‌ ಅವರ ಆಕರ್ಷಕ ದ್ವಿಶತಕ(209 ರನ್) ನೆರವಿನಿಂದ 396 ರನ್‌ ಗಳಿಸಿ ಟೀಮ್ ಇಂಡಿಯಾ ಆಲೌಟಾಗಿತ್ತು. ಆ ಬಳಿಕ ಕ್ರೀಸ್‌ಗಿಳಿದ ಇಂಗ್ಲೆಂಡ್ ಬ್ಯಾಟಿಂಗ್ ಪಡೆಯು, ಜಸ್ಪ್ರೀತ್ ಬುಮ್ರಾ ಹಾಗೂ ಸ್ಪಿನ್ನರ್ ಕುಲ್‌ದೀಪ್ ಯಾದವ್ ಮಾರಕ ದಾಳಿಗೆ ರನ್ ಗಳಿಸಲು ಪರದಾಡಿದರು. 253 ರನ್ ಗಳಿಸುವಷ್ಟರಲ್ಲಿ ಪ್ರವಾಸಿಗರು ಆಲೌಟ್ ಆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂಗ್ಲೆಂಡ್ 253ಕ್ಕೆ ಆಲೌಟ್ ಆದ್ದರಿಂದ ಟೀಮ್ ಇಂಡಿಯಾ 143 ರನ್‌ಗಳ ಮುನ್ನಡೆ ಪಡೆದುಕೊಂಡಿತು. ಬಳಿಕ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಟೀಮ್ ಇಂಡಿಯಾ ದಿನದಾಟದ ಮುಕ್ತಾಯದ ವೇಳೆ ಯಾವುದೇ ವಿಕೆಟ್ ಕಳೆದುಕೊಳ್ಳದೆ 28 ರನ್ ದಾಖಲಿಸಿತು. ಆ ಮೂಲಕ ಒಟ್ಟು 171 ರನ್‌ಗಳ ಮುನ್ನಡೆ ಪಡೆದುಕೊಂಡಿದೆ. 13 ರನ್‌ಗಳಿಸಿರುವ ನಾಯಕ ರೋಹಿತ್ ಶರ್ಮಾ ಹಾಗೂ 15 ರನ್ ಗಳಿಸಿರುವ ಎಡಗೈ ಬ್ಯಾಟರ್ ಯಶಸ್ವಿ ಜೈಸ್ವಾಲ್ ಮೂರನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.

ಬುಮ್ರಾ ದಾಳಿಗೆ ಪೆವಿಲಿಯನ್ ಪರೇಡ್ ನಡೆಸಿದ ಸ್ಟೋಕ್ಸ್ ಪಡೆ
ಮೊದಲ ಇನ್ನಿಂಗ್ಸ್‌ ಆರಂಭಿಸಿದ್ದ ಪ್ರವಾಸಿಗರು ಉತ್ತಮ ಮೊತ್ತ ಕಲೆ ಹಾಕುವ ಯೋಜನೆ ಹಾಕಿಕೊಂಡಿದ್ದರು. ಅದರ ಪ್ರಕಾರವೇ ಉತ್ತಮ ಆರಂಭ ಕೂಡ ನೀಡಿದ್ದರು. ಆದರೆ ಇದಕ್ಕೆ ಮೊದಲು ಕಡಿವಾಣ ಹಾಕಿದ್ದು ಟೀಮ್ ಇಂಡಿಯಾದ ಎಡಗೈ ಸ್ಪಿನ್ ಮಾಂತ್ರಿಕ ಕುಲ್‌ದೀಪ್ ಯಾದವ್.

ಬೆನ್ ಡಕೆಟ್ ಹಾಗೂ ಜಾಕ್ ಕ್ರಾಲಿ 59 ರನ್‌ಗಳ ಉತ್ತಮ ಜೊತೆಯಾಟ ನೀಡುತ್ತಾ ಮುಂದುವರಿಯುತ್ತಿದ್ದಾಗ ಬೆನ್ ಡಕೆಟ್(21 ರನ್) ಅವರನ್ನು ಔಟ್ ಮಾಡುವ ಕುಲ್‌ದೀಪ್ ಯಾದವ್ ಈ ಜೋಡಿಯನ್ನು ಬೇರ್ಪಡಿಸುವಲ್ಲಿ ಯಶಸ್ವಿಯಾದರು.

ಆ ಬಳಿಕ ಶ್ರೇಯಸ್ ಅಯ್ಯರ್ ಹಿಡಿದ ಅದ್ಭುತ ಕ್ಯಾಚ್‌ಗೆ ಅರ್ಧಶತಕ ದಾಖಲಿಸಿ ಮುಂದುವರಿಯುತ್ತಿದ್ದ ಜಾಕ್ ಕ್ರಾಲಿ(76 ರನ್) ಬಲಿಯಾದರು. ಬಳಿಕ ಓಲಿ ಪೋಪ್(23 ರನ್) ಬುಮ್ರಾ ಮಾರಕ ಯಾರ್ಕರ್‌ಗೆ ಬಲಿಯಾದರು. ಜೋ ರೂಟ್(5 ರನ್) ಮತ್ತೆ ವಿಫಲರಾದರೆ, ಅರ್ಧ ಶತಕದತ್ತ ಮುಂದುವರಿಯುತ್ತಿದ್ದ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ (47) ಅವರನ್ನು ಬುಮ್ರಾ ಕ್ಲೀನ್ ಬೌಲ್ಡ್ ಮಾಡಿದರು.

ಈ ವೇಳೆ ಬೆನ್ ಸ್ಟೋಕ್ಸ್‌ ನೀಡಿದ ಪ್ರತಿಕ್ರಿಯೆಯೇ ಬುಮ್ರಾ ಬೌಲಿಂಗ್ ಅನ್ನು ಹೊಗಳಿದಂತಿತ್ತು. ತನ್ನ ಬ್ಯಾಟನ್ನು ಕೆಳಕ್ಕೆ ಹಾಕಿ, ಯಾವ ರೀತಿಯ ಬೌಲಿಂಗ್ ಇದು ಎಂದು ಪ್ರಶ್ನಿಸಿದರು.

ಇದನ್ನು ಓದಿದ್ದೀರಾ? ಬುಮ್ರಾ ಅದ್ಭುತ ಯಾರ್ಕರ್‌ಗೆ ಓಲಿ ಪೋಪ್ ಕ್ಲೀನ್‌ಬೌಲ್ಡ್: ‘ಪ್ರಶಸ್ತಿಗೆ ಅರ್ಹವಾದ ಎಸೆತ’ ಎಂದ ನೆಟ್ಟಿಗರು!

ಆ ಬಳಿಕ ಜಾನಿ ಬೈರ್‌ಸ್ಟೋವ್ (25 ರನ್), ಬೆನ್ ಫೋಕ್ಸ್ (6 ರನ್), ರೆಹಾನ್ ಅಹ್ಮದ್ 6 ರನ್, ಟಾಮ್ ಹಾರ್ಟ್‌ಲೀ 21, ಜೇಮ್ಸ್‌ ಆಂಡರ್‌ಸನ್ 6 ಗಳಿಸಿ ಔಟಾದರು. ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆಗೈದಿರುವ ಶೋಯೇಬ್ ಬಶೀರ್ 8 ರನ್ ಗಳಿಸಿ, ಔಟಾಗದೆ ಉಳಿದರು.

ಬುಮ್ರಾಗೆ 5 ವಿಕೆಟ್ ಗೊಂಚಲಿನ ಜೊತೆಗೆ 150 ವಿಕೆಟ್‌ ಸಾಧನೆ
ಬುಮ್ರಾ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 45 ರನ್‌ ನೀಡಿ ಪ್ರಮುಖ ಆರು ವಿಕೆಟ್‌ಗಳನ್ನು ಪಡೆದಿದ್ದಾರೆ. ಆ ಮೂಲಕ ಟೆಸ್ಟ್‌ ಕ್ರಿಕೆಟ್‌ನಲ್ಲಿ 10ನೇ ಬಾರಿಗೆ ಐದು ವಿಕೆಟ್‌ ಗೊಂಚಲು ಪಡೆದುಕೊಂಡ ಸಾಧನೆ ಮಾಡಿದ್ದಾರೆ. ಇದರ ಜೊತೆಗೆ ಟೆಸ್ಟ್‌ ಕ್ರಿಕೆಟ್‌ನಲ್ಲಿ 150 ವಿಕೆಟ್‌ ಪಡೆದ ಸಾಧನೆ ಮಾಡಿದ ಮೈಲಿಗಲ್ಲನ್ನು ತಲುಪಿದ್ದಾರೆ.

ಮೊದಲ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾದ ಪರ ಬೌಲಿಂಗ್‌ನಲ್ಲಿ ಬುಮ್ರಾ 45 ರನ್‌ ನೀಡಿ ಆರು ವಿಕೆಟ್ ಪಡೆದರೆ, ಕುಲ್‌ದೀಪ್ ಯಾದವ್ 71 ರನ್ ನೀಡಿ ಮೂರು ವಿಕೆಟ್ ಪಡೆದಿದ್ದಾರೆ. ಅಕ್ಸರ್ ಪಟೇಲ್ ಒಂದು ವಿಕೆಟ್ ತನ್ನದಾಗಿಸಿಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...