ವಿಂಬಲ್ಡನ್ ಛಾಂಪಿಯನ್ ಕಾರ್ಲೋಸ್ ಅಲ್ಕರಾಜ್ – ವಿಶ್ವ ಟೆನಿಸ್ ಯುಗದ ಅದ್ಭುತ ಪ್ರತಿಭೆ

Date:

ವಿಶ್ವ ಟೆನಿಸ್ ಯುಗದಲ್ಲಿ ಮತ್ತೊಂದು ಹೊಸದೊಂದು ಪ್ರತಿಭೆ ಪ್ರಜ್ವಲಿಸುತ್ತಿದೆ. 21 ವರ್ಷದ ಯುವ ಟೆನಿಸ್ ಆಟಗಾರ ಕಾರ್ಲೋಸ್ ಅಲ್ಕರಾಜ್ ಟೆನಿಸ್ ಕ್ರೀಡೆಯಲ್ಲಿ ಹಲವು ದಾಖಲೆಗಳನ್ನು ಬರೆದಿದ್ದಾರೆ. ಲಂಡನ್‌ನ ಸೆಂಟರ್ ಕೋರ್ಟ್‌ನಲ್ಲಿ ಭಾನುವಾರ (ಜುಲೈ 14) ನಡೆದ ವಿಂಬಲ್ಡನ್ ಪುರುಷರ ಸಿಂಗಲ್ಸ್ ಫೈನಲ್ ಪಂದ್ಯದಲ್ಲಿ 7 ಬಾರಿ ಚಾಂಪಿಯನ್ ಆಗಿದ್ದ ನೋವಾಕ್ ಜೊಕೊವಿಚ್‌ ವಿರುದ್ಧ ಸ್ಪೇನ್‌ನ ಕಾರ್ಲೋಸ್ ಅಲ್ಕರಾಜ್, 6-2, 6-2, 7-6 ನೇರ ಸೆಟ್‌ಗಳಿಂದ ಪರಾಭವಗೊಳಿಸುವ ಮೂಲಕ ಸತತ ಎರಡನೇ ವಿಂಬಲ್ಡನ್ ಗ್ರ್ಯಾನ್‌ಸ್ಲಾಮ್ ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡರು.

ಇದು ಕಾರ್ಲೋಸ್ ಅಲ್ಕರಾಜ್ ಅವರ ನಾಲ್ಕನೇ ಗ್ರ್ಯಾನ್ ಸ್ಲಾಮ್ ಪ್ರಶಸ್ತಿ. 2023ರಲ್ಲಿ ಮೊದಲ ಬಾರಿಗೆ, ಕಾರ್ಲೋಸ್ ಅಲ್ಕರಾಜ್ ನೊವಾಕ್ ಜೊಕೊವಿಚ್‌ ಅವರನ್ನು ಸೋಲಿಸುವ ಮೂಲಕ ತಮ್ಮ ಮೊದಲ ವಿಂಬಲ್ಡನ್ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದರು.

ವಿಂಬಲ್ಡನ್ ಫೈನಲ್‌ನಲ್ಲಿ ನೊವಾಕ್ ಜೊಕೊವಿಚ್ ಅವರನ್ನು ಸೋಲಿಸುವ ಮೂಲಕ 2024ರ ವಿಂಬಲ್ಡನ್ ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಸ್ಪೇನ್‌ನ ಕಾರ್ಲೋಸ್ ಅಲ್ಕರಾಜ್ ಹಲವು ದಾಖಲೆಗಳನ್ನು ಮುರಿದಿದ್ದಾರೆ. ಈ ಗೆಲುವಿನೊಂದಿಗೆ ಕಾರ್ಲೋಸ್ ಅಲ್ಕರಾಜ್ ಮತ್ತೊಮ್ಮೆ ವಿಶ್ವದ ನಂಬರ್ ಒನ್ ಆಟಗಾರ ಎನಿಸಿಕೊಂಡಿದ್ದಾರೆ. ಈ ವರ್ಷ ಅಲ್ಕರಾಜ್ ಅವರು ಅಲೆಕ್ಸಾಂಡರ್ ಜ್ವೆರೆವ್ ಅವರನ್ನು ಸೋಲಿಸುವ ಮೂಲಕ ಫ್ರೆಂಚ್ ಓಪನ್ ಪ್ರಶಸ್ತಿಯನ್ನು ಗೆದ್ದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಜೊಕೊವಿಚ್ ಮಣಿಸಿದ ಸ್ಪೇನ್‌ನ ಕಾರ್ಲೋಸ್ ಅಲ್ಕರಾಜ್‌ಗೆ ವಿಂಬಲ್ಡನ್ ಕಿರೀಟ

ಈ ಪ್ರಶಸ್ತಿ ಗೆದ್ದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಕಾರ್ಲೋಸ್ ಅಲ್ಕರಾಜ್ ಪಾತ್ರರಾಗಿದ್ದಾರೆ. ಈ ಮೂಲಕ 21 ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನಲ್ಲೇ ಅತಿ ಹೆಚ್ಚು ಗ್ರ್ಯಾನ್ ಸ್ಲ್ಯಾಮ್‌ಗಳನ್ನು ಗೆದ್ದ ಓಪನ್ ಎರಾ ದಾಖಲೆಯನ್ನು ಸರಿಗಟ್ಟಿದ್ದಾರೆ. ಟೆನಿಸ್ ಇತಿಹಾಸದಲ್ಲಿ ಈ ಪ್ರಶಸ್ತಿ ಗೆದ್ದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಕಾರ್ಲೋಸ್ ಅಲ್ಕರಾಜ್ ಪಾತ್ರರಾಗಿದ್ದಾರೆ.

ರಾಫೆಲ್ ನಡಾಲ್ ನಂತರ, ಕಾರ್ಲೋಸ್ ಅಲ್ಕರಾಜ್ ಒಂದಕ್ಕಿಂತ ಹೆಚ್ಚು ಬಾರಿ ಸಿಂಗಲ್ಸ್ ಪ್ರಶಸ್ತಿಯನ್ನು ಗೆದ್ದ ಸ್ಪೇನ್‌ನ ಎರಡನೇ ಆಟಗಾರರಾಗಿದ್ದಾರೆ.

1968ರಲ್ಲಿ ಟೆನಿಸ್‌ನಲ್ಲಿ ಓಪನ್ ಯುಗ ಆರಂಭವಾದ ಮೇಲೆ 21 ವರ್ಷ ವಯಸ್ಸಿನೊಳಗೇ ಅತಿ ಹೆಚ್ಚು (ತಲಾ ನಾಲ್ಕು) ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿಗಳನ್ನು ಗೆದ್ದು ದಾಖಲೆ ಸ್ಥಾಪಿಸಿದ ಮೂವರು ಮಹಾನ್ ಆಟಗಾರರ ಸಾಲಿಗೆ ಈಗ ಅಲ್ಕರಾಜ್ ಸೇರ್ಪಡೆಯಾದರು. ಉಳಿದ ಮೂವರು ಜರ್ಮನಿಯ ಬೋರಿಸ್‌ ಬೆಕರ್‌, ಸ್ವೀಡನ್‌ನ ಬ್ಯೋನ್‌ ಬೋರ್ಗ್ ಮತ್ತು ಮ್ಯಾಟ್ಸ್‌ ವಿಲಾಂಡರ್‌.

ಟೆನಿಸ್ ಕುಟುಂಬದಲ್ಲಿ ಬೆಳೆದ ಹುಡುಗ

2003ರ ಮೇ 5ರಂದು ಸ್ಪೇನ್‌ನ ವಿಲ್ಲೇನಾದ ಎಲ್‌ ಪಾಮರ್‌ನಲ್ಲಿ ಮಾಜಿ ವೃತ್ತಿಪರ ಟೆನಿಸಿಗ ಗೊಂಝಾಲೆಸ್ ಹಾಗೂ ಗೃಹಿಣಿ ವರ್ಜೇನಿಯಾ ಗಾರ್ಫಿಯಾ ಎಸ್ಕಾಂಡನ್‌ ದಂಪತಿಗಳ ನಾಲ್ವರು ಮಕ್ಕಳಲ್ಲಿ ಎರಡನೆಯವನಾಗಿ ಜನಿಸಿದವರು ಕಾರ್ಲೋಸ್ ಅಲ್ಕರಾಜ್. ತಂದೆ ಟೆನಿಸ್ ಆಟಗಾರರಾದ ಕಾರಣ ಅಲ್ಕರಾಜ್‌ಗೆ ನಾಲ್ಕನೇ ವಯಸ್ಸಿಗೆ ಟೆನಿಸ್ ನಂಟು ಬೆಸೆದುಕೊಂಡಿತು. ತಂದೆ ಕಾರ್ಲೋಸ್ ಅಲ್ಕರಾಜ್ ಗೊಂಝಾಲೆಸ್ ಮಾಜಿ ವೃತ್ತಿಪರ ಟೆನಿಸಿಗ. 1990ರಲ್ಲಿ ಸ್ಪೇನ್‌ನ 40 ಪ್ರಮುಖ ಆಟಗಾರರಲ್ಲಿ ಅವರೂ ಒಬ್ಬರಾಗಿದ್ದರು. ತಂದೆಯೇ ಜೂನಿಯರ್‌ ಅಲ್ಕರಾಜ್ ಅವರ ಮೊದಲ ಮಾರ್ಗದರ್ಶಕ.

ವಿಶ್ವದ ಮಾಜಿ ಆಟಗಾರನ ಬಳಿ ತರಬೇತಿ

ಮನೆಯಲ್ಲಿ ಟೆನಿಸ್ ವಾತಾವರಣ ಇದ್ದ ಕಾರಣ 15ನೇ ವಯಸ್ಸಿನಲ್ಲಿ ಕಾರ್ಲೋಸ್ ಅಲ್ಕರಾಜ್ ವಿಶ್ವದ ಮಾಜಿ ನಂಬರ್‌ ಒನ್‌ ಟೆನಿಸ್ ಆಟಗಾರ ಫೆರೆರೊ ಅವರ ‘ಇಕ್ವೆಲೈಟ್ ಜೆಸಿ ಫೆರೆರೊ ಸ್ಪೋರ್ಟ್ಸ್ ಅಕಾಡೆಮಿ’ಗೆ ಸೇರ್ಪಡೆಯಾದರು. ಒಂದು ಕಾಲದಲ್ಲಿ ಸ್ಪೇನ್‌ನ ಸ್ಟಾರ್‌ ಆಗಿದ್ದ ಫೆರೆರೊ, ಕಾರ್ಲೋಸ್ ಟೆನಿಸ್ ಪ್ರತಿಭೆಯನ್ನು ಅನಾವರಣಗೊಳಿಸಲು ಯಶಸ್ವಿಯಾದರು. ಪರಿಣಾಮ, 21ರ ಹರೆಯದಲ್ಲೇ ನಾಲ್ಕನೇ ಗ್ರ್ಯಾನ್ ಸ್ಲಾಮ್ ಪ್ರಶಸ್ತಿಯನ್ನು ಗೆದ್ದಿದ್ದಾರೆ.

ಕಾರ್ಲೋಸ್ ಅಲ್ಕರಾಜ್‌ಗೆ ಬಾಲ್ಯದಲ್ಲಿದ್ದ ಬಹು ದೊಡ್ಡ ಕನಸೆಂದರೆ ಫ್ರೆಂಚ್ ಓಪನ್ ಮತ್ತು ವಿಂಬಲ್ಡನ್ ಗೆಲ್ಲುವುದು. ರೋಜರ್‌ ಪೆಡರರ್ ಇವರ ಟೆನಿಸ್ ಬದುಕಿನ ಸ್ಪೂರ್ತಿ. 2019ರ ವಿಂಬಲ್ಡನ್ ಕ್ವಾರ್ಟರ್ ಫೈನಲ್ ವೇಳೆ ಫೆಡರರ್ ಆಟ ವೀಕ್ಷಿಸುವ ಅವಕಾಶ ಇವರಿಗೆ ಲಭಿಸಿತ್ತು. ಆಗ ಜುವಾನ್ ಕಾರ್ಲೋಸ್ ಫೆರೆರೊ ಸ್ಪೇನ್ ತಂಡದ ಕೋಚ್ ಆಗಿದ್ದರು. ಆಗ ಅಲ್ಕರಾಜ್ ಅವರನ್ನು ಗಮನಿಸಿದ ಫೆಡರರ್, ಈತನಿಗೆ ಉತ್ತಮ ಕೋಚಿಂಗ್ ನೀಡಿ ಎಂದು ಹೇಳಿದ್ದರಂತೆ. ಇವೆಲ್ಲ ಪ್ರೇರಣೆಯೊಂದಿಗೆ ನಾಲ್ಕು ಗ್ರ್ಯಾನ್ ಸ್ಲಾಮ್ ಗೆಲ್ಲುವುದರೊಂದಿಗೆ ವಿಶ್ವದ ನಂಬರ್‌ ಒನ್‌ ಟೆನಿಸ್‌ ಆಟಗಾರನಾಗಿ ಹೊರಹೊಮ್ಮಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...