ಐಪಿಎಲ್ 2023 | ಆರ್‌ಸಿಬಿ vs ಸಿಎಸ್‌ಕೆ; ಗೆಲುವಿನಂಚಿನಲ್ಲಿ ಎಡವಿದ ಬೆಂಗಳೂರು!

Date:

ಐಪಿಎಲ್ 16ನೇ ಆವೃತ್ತಿಯ ‘ದಕ್ಷಿಣ ಡರ್ಬಿ’ಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆಲುವಿನ ನಗೆ ಬೀರಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಧೋನಿ ಸಾರಥ್ಯದ ಸಿಎಸ್‌ಕೆ 8 ರನ್‌ಗಳ ಸ್ಮರಣೀಯ ಜಯ ಸಾಧಿಸಿದೆ.

ಒಂದು ಹಂತದಲ್ಲಿ ಆರ್‌ಸಿಬಿ ನಿರಾಯಾಸವಾಗಿ ಪಂದ್ಯ ಗೆಲ್ಲುವ ಭರವಸೆ ಮೂಡಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚೆನೈ ಮುಂದಿಟ್ಟಿದ್ದ 227 ರನ್‌ಗಳ ಗುರಿ ಬೆನ್ನಟ್ಟುವ ವೇಳೆ 12 ಓವರ್‌ಗಳ ಮುಕ್ತಾಯಕ್ಕೆ ಆರ್‌ಸಿಬಿ, ಕೇವಲ 2 ವಿಕೆಟ್ ನಷ್ಟದಲ್ಲಿ 141 ರನ್ ಗಳಿಸಿತ್ತು.

ಉಳಿದ 8 ಓವರ್‌ಗಳಲ್ಲಿ ಗೆಲುವಿಗೆ 86 ರನ್‌ಗಳ ಅಗತ್ಯವಿತ್ತು. ನಾಯಕ ಫಾಫ್ ಡುಪ್ಲೆಸಿಸ್ ಮತ್ತು ಗ್ಲೆನ್ ಮ್ಯಾಕ್ಸ್ ವೆಲ್ ಸ್ಫೋಟಕ ಅರ್ಧಶತಕ ಸಿಡಿಸಿ ಕ್ರೀಸ್ ನಲ್ಲಿದ್ದರು.

ಹೀಗಾಗಿ ಆತಿಥೇಯ ಆರ್‌ಸಿಬಿ ಸುಲಭ ಗೆಲುವು ಸಾಧಿಸಲಿದೆ ಎಂದು ಅಭಿಮಾನಿಗಳು ನಿರೀಕ್ಷೆಯಲ್ಲಿದ್ದರು.

ಆದರೆ 13ನೇ ಓವರ್‌ನಲ್ಲಿ ಮ್ಯಾಕ್ಸಿ ಮತ್ತು 14ನೇ ಓವರ್‌ನಲ್ಲಿ ಡುಪ್ಲೆಸಿಸ್ ವಿಕೆಟ್ ಪತನವಾಗುತ್ತಲೇ ಪಂದ್ಯ ರೋಚಕ ತಿರುವು ಪಡೆಯಿತು.

ಆ ಬಳಿಕ ಆರ್‌ಸಿಬಿ ನಿರಂತರವಾಗಿ ವಿಕೆಟ್ ಕಳೆದುಕೊಳ್ಳುತ್ತಲೇ ಸಾಗಿತು. ಅಂತಿಮ ಓವರ್‌ನಲ್ಲಿ ಗೆಲುವಿಗೆ 19 ರನ್‌ಗಳ ಅಗತ್ಯವಿತ್ತು. ಆದರೆ 10 ರನ್‌ಗಳಿಸಲಷ್ಟೇ ಆರ್‌ಸಿಬಿ ಶಕ್ತವಾಯಿತು. 8 ರನ್‌ಗಳಿಂದ ಗೆಲುವಿನಿಂದ ದೂರವೇ ಉಳಿಯಿತು.

ಆರ್‌ಸಿಬಿ ಬ್ಯಾಟರ್ ಗಳಿಂದ ದಂಡಿಸಿಕೊಂಡರೂ ಸಹ ನಿರ್ಣಾಯಕ ಹಂತದಲ್ಲಿ ವಿಕೆಟ್ ಪಡೆಯುವ ಮೂಲಕ ಚೆನ್ನೈ ಬೌಲರ್‌ಗಳು ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದರು.

ಈ ಗೆಲುವಿನೊಂದಿಗೆ ಅಂಕ ಪಟ್ಟಿಯಲ್ಲಿ ಚೆನ್ನೈ ಮೂರನೇ ಸ್ಥಾನಕ್ಕೇರಿದರೆ, ಆರ್‌ಸಿಬಿ 7ನೇ ಸ್ಥಾನಕ್ಕೆ ಜಾರಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...