ಚೆನ್ನೈ ಗೆಲ್ಲಿಸಿದ ಧೋನಿ, ಧೋನಿ ಗೆಲ್ಲಿಸಿದ ಆಟಗಾರರು: ರೋಚಕ ಫೈನಲ್

Date:

ಕೊನೆಯ ಓವರ್‌ನ ಎರಡು ಬಾಲ್‌ಗೆ ಒಂದು ಸಿಕ್ಸರ್‌ ಒಂದು ಫೋರ್‌ ಬಾರಿಸಿ ತಂಡಕ್ಕೆ ಜಯ ತಂದಿಟ್ಟ ಜಡೇಜಾ

ಸೋಮವಾರ ತಡರಾತ್ರಿ ಮುಕ್ತಾಯವಾದ ಐಪಿಎಲ್‌ ಫೈನಲ್‌ನಲ್ಲಿ ಚೆನ್ನೈ ತಂಡವು 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿತು. ಆ ಮೂಲಕ ಮಹೇಂದ್ರ ಸಿಂಗ್‌ ಧೋನಿ ನಾಯಕತ್ವದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವು ಟೂರ್ನಿಯ ಪ್ರಶಸ್ತಿ ಮುಡಿಗೇರಿಸಿಕೊಂಡಿತು.

ಆ ಮೂಲಕ ಸತತ ಎರಡನೇ ಪ್ರಶಸ್ತಿ ಗೆಲ್ಲುವ ಗುಜರಾತ್‌ ಟೈಟನ್ಸ್‌ ತಂಡದ ಕನಸನ್ನು ನುಚ್ಚು ನೂರು ಮಾಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುಜರಾತ್‌ ಟೈಟನ್ಸ್‌ ತಂಡ ನೀಡಿದ 215 ರನ್‌ ಗಳ ಬೆನ್ನು ಹತ್ತಿದ ಚೆನ್ನೈ ತಂಡ, ಮೊದಲ ಓವರ್‌ನ ಮೂರು ಬಾಲ್‌ ಆಡಿ ಮಳೆಯ ಕಾರಣದಿಂದಾಗಿ ಆಟ ನಿಲ್ಲಿಸಿತು. ಆ ನಂತರ, ತಡರಾತ್ರಿ ಮಳೆ ನಿಂತಾಗ ಮತ್ತೆ ಶುರುವಾದ ಆಟಕ್ಕೆ ಡಕ್ವರ್ಥ್‌ ಲೂಯಿಸ್‌ ನಿಯಮದಂತೆ 15 ಓವರ್‌ ಗಳಲ್ಲಿ 171 ರನ್‌ಗಳ ಗುರಿ ನೀಡಲಾಯಿತು. 171 ರನ್‌ಗಳ ಗುರಿ ಬೆನ್ನಟ್ಟಿದ ಚೆನ್ನೈ ತಂಡಕ್ಕೆ ಕೊನೆಯ ಎರಡು ಎಸೆತಗಳಲ್ಲಿ 10 ರನ್‌ ಗಳಿಸುವ ಸವಾಲು ಎದುರಾಯಿತು.

15ನೇ ಓವರ್‌ನ ಕೊನೆಯ ಎರಡು ಎಸೆತಗಳಲ್ಲಿ ಒಂದು ಸಿಕ್ಸರ್ ಹಾಗೂ ಒಂದು ಬೌಂಡರಿ ಬಾರಿಸಿದ ಜಡೇಜಾ ಚೆನ್ನೈಗೆ ರೋಚಕ ಜಯ ತಂದುಕೊಟ್ಟರು. ಕೊನೆಗೂ ಕೋಟ್ಯಂತರ ಅಭಿಮಾನಿಗಳ ನಿರೀಕ್ಷೆ ನಿಜವಾಗಿಸಿದ ಧೋನಿ, ಚೆನ್ನೈಗಾಗಿ ಗೆಲುವು ತಂದುಕೊಟ್ಟರೆ, ರೋಚಕ ಪಂದ್ಯದಲ್ಲಿ ಕೆಚ್ಚೆದೆಯ ಪ್ರದರ್ಶನ ನೀಡಿದ ತಂಡದ ಆಟಗಾರರು ಧೋನಿಗಾಗಿ ಆಡಿ ಗೆಲುವು ತಂದುಕೊಟ್ಟರು. ಆ ಮೂಲಕ ಗುಜರಾತ್ ಟೈಟಾನ್ಸ್ ತಂಡವನ್ನು 5 ವಿಕೆಟ್‌ ಳಿಂದ ಮಣಿಸಿದ ಚೆನ್ನೈ ಸೂಪರ್ ಕಿಂಗ್ಸ್ 5ನೇ ಬಾರಿಗೆ ಐಪಿಎಲ್ ಪ್ರಶಸ್ತಿ ಗೆದ್ದುಕೊಂಡಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಸಾಯಿ ಸುದರ್ಶನ್ ಹಾಗೂ ಸಾಹ ಅವರ ಅದ್ಭುತ 96 ರನ್‌ಗಳ ನೆರವಿನಿಂದಾಗಿ 4 ವಿಕೆಟ್ ಕಳೆದುಕೊಂಡು 214 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಚೆನ್ನೈ ತಂಡ ವರುಣನ ಅಡೆತಡೆಯನ್ನೂ ಲೆಕ್ಕಿಸದೆ, ಪಂದ್ಯವನ್ನು ಗೆಲುವಿನತ್ತ ಕೊಂಡೊಯ್ದಿದ್ದು, ಆ ಗೆಲುವನ್ನು ಧೋನಿಗಾಗಿ ಮುಡಿಪಾಗಿಟ್ಟಿದ್ದು, ಎಲ್ಲ ಆಟಗಾರರಲ್ಲೂ ಎದ್ದು ಕಾಣುತ್ತಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...