BREAKING NEWS | ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಚೇತೇಶ್ವರ ಪೂಜಾರ

Date:

ಟೆಸ್ಟ್ ಕ್ರಿಕೆಟ್‌ ದಿಗ್ಗಜರಲ್ಲಿ ಒಬ್ಬರಾದ ಚೇತೇಶ್ವರ ಪೂಜಾರ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ಭಾನುವಾರ ನಿವೃತ್ತಿ ಘೋಷಿಸಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಿರಿಯ ಆಟಗಾರರನ್ನು ಟೆಸ್ಟ್‌ ಕ್ರಿಕೆಟ್‌ಗೆ ಆಯ್ಕೆ ಮಾಡುತ್ತಿರುವ ಹಿನ್ನೆಲೆ ದೀರ್ಘಕಾಲದಿಂದ ಟೆಸ್ಟ್‌ನಲ್ಲಿ ಕಾಣಿಸಿಕೊಳ್ಳದ ಪೂಜಾರ ಭಾವನಾತ್ಮಕ ಪೋಸ್ಟ್ ಒಂದು ಮಾಡಿ ನಿವೃತ್ತಿ ಘೋಷಿಸಿದ್ದಾರೆ.

ಟೆಸ್ಟ್ ಕ್ರಿಕೆಟ್‌ ದಿಗ್ಗಜರಲ್ಲಿ ಒಬ್ಬರಾದ ಚೇತೇಶ್ವರ ಪೂಜಾರ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ಭಾನುವಾರ ನಿವೃತ್ತಿ ಘೋಷಿಸಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಿರಿಯ ಆಟಗಾರರನ್ನು ಟೆಸ್ಟ್‌ ಕ್ರಿಕೆಟ್‌ಗೆ ಆಯ್ಕೆ ಮಾಡುತ್ತಿರುವ ಹಿನ್ನೆಲೆ ದೀರ್ಘಕಾಲದಿಂದ ಟೆಸ್ಟ್‌ನಲ್ಲಿ ಕಾಣಿಸಿಕೊಳ್ಳದ ಪೂಜಾರ ಭಾವನಾತ್ಮಕ ಪೋಸ್ಟ್ ಒಂದು ಮಾಡಿ ನಿವೃತ್ತಿ ಘೋಷಿಸಿದ್ದಾರೆ.

ಇದನ್ನು ಓದಿದ್ದೀರಾ? ರಾಹುಲ್‌ಗೆ ಹಿಂಬಡ್ತಿ; ಜಡೇಜಾಗೆ ‘ಎ+’ ಶ್ರೇಣಿಗೆ ಬಡ್ತಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಪೂಜಾರ, “ಭಾರತೀಯ ಜೆರ್ಸಿ ಧರಿಸುವುದು, ರಾಷ್ಟ್ರಗೀತೆ ಹಾಡುವುದು ಮತ್ತು ನಾನು ಪ್ರತಿ ಬಾರಿ ಮೈದಾನಕ್ಕೆ ಕಾಲಿಟ್ಟಾಗಲೂ ನನ್ನ ಕೈಲಾದಷ್ಟು ಪ್ರಯತ್ನಿಸುವುದು – ಇವೆಲ್ಲವುದರ ನಿಜವಾದ ಅರ್ಥವನ್ನು ಪದಗಳಲ್ಲಿ ಹೇಳುವುದು ಅಸಾಧ್ಯ. ಆದರೆ ಅಪಾರ ಕೃತಜ್ಞತೆಯಿಂದ ನಾನು ಎಲ್ಲಾ ರೀತಿಯ ಭಾರತೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ. ಎಲ್ಲಾ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು” ಎಂದು ತಿಳಿಸಿದ್ದಾರೆ.

“ನನ್ನ ಕ್ರಿಕೆಟ್ ವೃತ್ತಿಜೀವನದುದ್ದಕ್ಕೂ ಅವಕಾಶ ಮತ್ತು ಬೆಂಬಲ ನೀಡಿದ್ದಕ್ಕಾಗಿ ಬಿಸಿಸಿಐ ಮತ್ತು ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್‌ಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ವರ್ಷಗಳಲ್ಲಿ ನಾನು ಪ್ರತಿನಿಧಿಸಲು ಸಾಧ್ಯವಾದ ಎಲ್ಲಾ ತಂಡಗಳು, ಫ್ರಾಂಚೈಸಿಗಳು ಮತ್ತು ಕೌಂಟಿಗಳಿಗೂ ಧನ್ಯವಾದಗಳು” ಎಂದು ತಿಳಿಸಿದ್ದಾರೆ.

“ನನ್ನ ಮಾರ್ಗದರ್ಶಕರು, ತರಬೇತುದಾರರು ಮತ್ತು ಆಧ್ಯಾತ್ಮಿಕ ಗುರುಗಳ ಅಮೂಲ್ಯ ಮಾರ್ಗದರ್ಶನವಿಲ್ಲದೆ ನಾನು ಇಷ್ಟು ದೂರ ತಲುಪಲು ಸಾಧ್ಯವಾಗುತ್ತಿರಲಿಲ್ಲ. ಅವರಿಗೆ ನಾನು ಯಾವಾಗಲೂ ಋಣಿಯಾಗಿರುತ್ತೇನೆ” ಎಂದು ಪೋಸ್ಟ್‌ನಲ್ಲಿ ಬರೆದಿದ್ದಾರೆ.

“ನನ್ನ ಎಲ್ಲಾ ತಂಡದ ಸದಸ್ಯರು, ಸಹಾಯಕ ಸಿಬ್ಬಂದಿ, ನೆಟ್ ಬೌಲರ್‌ಗಳು, ವಿಶ್ಲೇಷಕರು, ಲಾಜಿಸ್ಟಿಕ್ಸ್ ತಂಡ, ಅಂಪೈರ್‌ಗಳು, ಮೈದಾನದ ಸಿಬ್ಬಂದಿ, ಸ್ಕೋರರ್‌ಗಳು, ಮಾಧ್ಯಮ ಸಿಬ್ಬಂದಿ ಮತ್ತು ನಾವು ಪ್ರೀತಿಸುವ ಈ ಆಟವನ್ನು ಸ್ಪರ್ಧಿಸಲು ಮತ್ತು ಆಡಲು ಅನುವು ಮಾಡಿಕೊಡಲು ತೆರೆಮರೆಯಲ್ಲಿ ಅವಿಶ್ರಾಂತವಾಗಿ ಶ್ರಮಿಸುವ ಎಲ್ಲರಿಗೂ ಧನ್ಯವಾದಗಳು” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಜುಗೆ ಧೋನಿ ಕೀಪಿಂಗ್ ಗ್ಲೌಸ್ ಹಸ್ತಾಂತರ; ಮುಂದೆ ನಾಯಕತ್ವವೂ? ಸಿಎಸ್‌ಕೆ ಯೋಜನೆ ಬಗ್ಗೆ ಕುಂಬ್ಳೆ ವಿಶ್ಲೇಷಣೆ

ಭಾರತದ ಟಿ20 ವಿಶ್ವಕಪ್ ಗೆಲುವಿನಲ್ಲಿ ರುವಾರಿ ಎಂದೇ ಮಿಂಚುತ್ತಿರುವ ಸಂಜು ಸ್ಯಾಮ್ಸನ್,...

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

BREAKING NEWS | ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ದಿನಾಂಕ ಘೋಷಣೆ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ಘೋಷಣೆಯ...