ಬೆಂಗಳೂರು ಕಾಲ್ತುಳಿತಕ್ಕೆ ಆರ್‌ಸಿಬಿ ಕಾರಣ: ಸಿಐಡಿ ತನಿಖಾ ವರದಿ

Date:

ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜೂನ್‌ 4ರಂದು ಸಂಭವಿಸಿದ್ದ ಕಾಲ್ತುಳಿತ ಘಟನೆಯ ತನಿಖೆ ನಡೆಸುತ್ತಿರುವ ಸಿಐಡಿ, ತಂಡದ ಆಟಗಾರ ವಿರಾಟ್ ಕೊಹ್ಲಿಗಾಗಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ಆಡಳಿತ ಮಂಡಳಿ ತೆಗೆದುಕೊಂಡ ತರಾತುರಿಯ ನಿರ್ಧಾರವೇ 11 ಮಂದಿಯ ಸಾವಿಗೆ ಕಾರಣವಾಗಿದೆ ಎಂಬುದಾಗಿ ವರದಿ ಸಿದ್ಧಪಡಿಸಿದೆ ಎಂದು ಮೂಲಗಳು ಹೇಳಿವೆ.

‘ಈ ತನಿಖಾ ವರದಿಗೆ ಇನ್ನಷ್ಟು ಸಾಕ್ಷ್ಯಾಧಾರಗಳನ್ನು ಕಲೆ ಹಾಕಲಾಗುತ್ತಿದೆ. ಅದು ಪೂರ್ಣಗೊಂಡ ಬಳಿಕ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗುವುದು’ ಎಂದು ಸಿಐಡಿ ಮೂಲಗಳು ತಿಳಿಸಿವೆ.

ಘಟನೆಯ ಬಳಿಕ ಕಬ್ಬನ್‌ಪಾರ್ಕ್‌ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿತ್ತು. ಮೃತ ಕುಟುಂಬಸ್ಥರ ಆಕ್ರೋಶ ಹೆಚ್ಚಾದ ಬೆನ್ನಲ್ಲೇ ಕೆಎಸ್‌ಸಿಎ, ಡಿಎನ್‌ಎ (ಇವೆಂಟ್‌ ಮ್ಯಾನೇಜ್‌ ಮೆಂಟ್‌) ಹಾಗೂ ಆರ್‌ಸಿಬಿ ಫ್ರಾಂಚೈಸಿಯ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದರು. ನಾಲ್ವರನ್ನು ಬಂಧಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅದಾದ ಮೇಲೆ ಕಬ್ಬನ್‌ಪಾರ್ಕ್ ಠಾಣೆಯಲ್ಲಿ ದಾಖಲಾಗಿದ್ದ ಎರಡೂ ಪ್ರಕರಣಗಳ ತನಿಖೆಯನ್ನೂ ರಾಜ್ಯ ಸರ್ಕಾರವು ಸಿಐಡಿಗೆ ವಹಿಸಿತ್ತು. ಕಾಲ್ತುಳಿತಕ್ಕೆ ಕಾರಣವಾದ ಅಂಶಗಳನ್ನು ಸಿಐಡಿ ತನಿಖಾಧಿಕಾರಿಗಳು ಪತ್ತೆ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವಿಶ್ವಾಸಾರ್ಹತೆ ಕಳೆದುಕೊಂಡ ಚುನಾವಣಾ ಆಯೋಗದ ಅವಶ್ಯಕತೆ ಇದೆಯೇ?

ಹರಿದಾಡಿದ ‘ಘಟನೆಗೆ ಸಂಬಂಧಿಸಿದಂತೆ ಸಾಮಾ ಜಿಕ ಮಾಧ್ಯಮ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವಿಡಿಯೊಗಳನ್ನು ವಶಕ್ಕೆ ಪಡೆದು ಪರಿಶೀಲಿಸಲಾಗಿದೆ. ಕ್ರೀಡಾಂಗಣದ ಗೇಟ್‌ಗಳ ಬಳಿಯ ಅವ್ಯವಸ್ಥೆ, ಪೊಲೀಸರ ನಿಯೋಜನೆ ಹಾಗೂ ನೂಕುನುಗ್ಗಲು ಉಂಟಾಗಲು ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆಸಲಾಗಿದೆ. ಈ ಎಲ್ಲ ಅಂಶಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.

‘ಅರ್‌ಸಿಬಿ ತಂಡವು ಐಪಿಎಲ್ ಟ್ರೋಫಿ ಜಯಿಸಿದರೆ ಜೂನ್ 4ರಂದೇ ವಿಜಯೋತ್ಸವ ಆಯೋಜನೆ ಮಾಡಬೇಕೆಂದು ಆಡಳಿತ ಮಂಡಳಿ ನಿರ್ಧಾರ ಮಾಡಿತ್ತು. ಆರ್‌ಸಿಬಿ ಸಿಇಒ ರಾಜೇಶ್ ಮೆನನ್, ಮಾರುಕಟ್ಟೆ ವಿಭಾಗದ ಮುಖ್ಯಸ್ಥ ನಿಖಿಲ್ ಸೋಸಲೆ ಅವರು ಕಾರ್ಯಕ್ರಮ ಆಯೋಜನೆಯ ನಿರ್ಧಾರ ಮಾಡಿದ್ದರು. ವಿರಾಟ್ ಕೊಹ್ಲಿಯವರ ಕಾರಣ ಮುಂದಿಟ್ಟಿದ್ದ ಕೊಹ್ಲಿ ಆಪ್ತ ನಿಖಿಲ್ ಸೋಸ್ಥೆ ಕೆಎಸ್‌ಸಿಎ ಮೇಲೆ ಒತ್ತಡ ತಂದು ಕಾರ್ಯಕ್ರಮ ಆಯೋಜಿಸಿದ್ದರು ಎಂಬುದು ತನಿಖೆ ವೇಳೆ ಗೊತ್ತಾಗಿದೆ. ಅದನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ’ ಎಂದು ಸಿಐಡಿ ಮೂಲಗಳು ತಿಳಿಸಿವೆ.

‘ಕಾರ್ಯಕ್ರಮ ಮುಂದೂಡಿಕೆ ಬಗ್ಗೆ ಪೊಲೀಸ್ ಇಲಾಖೆ ಹಾಗೂ ಕೆಎಸ್‌ಸಿಎ ಅಭಿಪ್ರಾಯ ವ್ಯಕ್ತಪಡಿಸಿತ್ತು. ಆದರೆ, ಕೊಹ್ಲಿ ಕಾರಣ ಹೇಳಿ ಜೂನ್ 4ರಂದೇ ಕಾರ್ಯಕ್ರಮ ಆಯೋಜನೆ ಆಗಬೇಕು ಎಂದು ನಿಖಿಲ್ ಸೋಸಲೆ ಒತ್ತಡ ಹೇರಿದ್ದರು. ಕೊಹ್ಲಿ ಲಂಡನ್‌ಗೆ ಹೋಗಬೇಕಿದ್ದು, ವಿಜಯೋತ್ಸವ ಮುಂದೂಡಿದರೆ ಕೊಹ್ಲಿ ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂಬುದಾಗಿ ಕಾರಣ ನೀಡಿದ್ದರು. ನಿಖಿಲ್ ಸೋಸಲೆ ಒತ್ತಡದಿಂದಾಗಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು’ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...