ವಿಶ್ವಕಪ್ ಫೈನಲ್ | ರಾಜ್ಯದ ಎಲ್ಲ ಜಿಲ್ಲಾ ಕ್ರೀಡಾಂಗಣಗಳಲ್ಲಿ ಎಲ್‌ಇಡಿ ಪರದೆಯಲ್ಲಿ ನೇರಪ್ರಸಾರದ ವ್ಯವಸ್ಥೆ ಕಲ್ಪಿಸಿದ ರಾಜ್ಯ ಸರ್ಕಾರ

Date:

ಬಹುನಿರೀಕ್ಷಿತ ಏಕದಿನ ವಿಶ್ವಕಪ್​ನ ಫೈನಲ್ ಪಂದ್ಯಕ್ಕಾಗಿ ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿದೆ. ಅಹಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಚಾಂಪಿಯನ್ ಪಟ್ಟಕ್ಕಾಗಿ ಪಂದ್ಯ ನಡೆಯಲಿದೆ.

ದೇಶಾದ್ಯಂತ ಹಬ್ಬದ ವಾತಾವರಣ ಶನಿವಾರದಿಂದಲೇ ಶುರುವಾಗಿದೆ. ಈ ನಡುವೆ ರಾಜ್ಯದ ಕಾಂಗ್ರೆಸ್ ಸರ್ಕಾರವು, ಎಲ್ಲ ಜಿಲ್ಲಾ ಕ್ರೀಡಾಂಗಣಗಳಲ್ಲಿ ಎಲ್‌ಇಡಿ ಪರದೆಯಲ್ಲಿ ಕ್ರಿಕೆಟ್ ಪ್ರಿಯರಿಗಾಗಿ ನೇರಪ್ರಸಾರದ ವ್ಯವಸ್ಥೆ ಕಲ್ಪಿಸಿರುವುದಾಗಿ ಆದೇಶ ಹೊರಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, “ನಾಡಿನ ಸಮಸ್ತ ಕ್ರಿಕೆಟ್ ಪ್ರಿಯರಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ನಾಳಿನ ವಿಶ್ವಕಪ್ ಪಂದ್ಯಾಕೂಟದ ಫೈನಲ್ ಪಂದ್ಯವನ್ನು ರಾಜ್ಯದ ಎಲ್ಲ ಜಿಲ್ಲಾ ಕ್ರೀಡಾಂಗಣಗಳಲ್ಲಿ ದೊಡ್ಡ ಪರದೆಯಲ್ಲಿ ನೇರಪ್ರಸಾರದ ವ್ಯವಸ್ಥೆ ಕಲ್ಪಿಸಲಾಗಿದೆ. ಕ್ರಿಕೆಟ್ ಅಭಿಮಾನಿಗಳು‌ ಈ ಅವಕಾಶವನ್ನು ಬಳಸಿಕೊಂಡು ಫೈನಲ್ ಪಂದ್ಯದ ರೋಚಕ ಕ್ಷಣಗಳನ್ನು ಕಣ್ತುಂಬಿಕೊಳ್ಳಬೇಕೆಂದು ವಿನಂತಿಸುತ್ತೇನೆ’ ಎಂದು ತಿಳಿಸಿದ್ದಾರೆ.

‘2023ನೇ ಸಾಲಿನ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯನ್ನು ನಮ್ಮ ದೇಶದಲ್ಲಿ ಆಯೋಜಿಸುತ್ತಿದ್ದು, ಇದರಲ್ಲಿ ನಮ್ಮ ಭಾರತ ತಂಡವು ವಿಶ್ವಕಪ್ ಪಂದ್ಯಾವಳಿಯ ಫೈನಲ್‌ಗೆ ತಲುಪಿರುವುದು ಸಂತೋಷದ ವಿಷಯ. ಈ ಸಂಬಂಧ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ದೊಡ್ಡ ಸ್ಕ್ರೀನ್‌ಗಳನ್ನು ಅಳವಡಿಸಿ, ಫೈನಲ್ ಪಂದ್ಯಾವಳಿಯನ್ನು ಕ್ರೀಡಾಪಟುಗಳಿಗೆ ಮತ್ತು ಸಾರ್ವಜನಿಕರಿಗೆ MC&A ಇವರ ಸಹಯೋಗದೊಂದಿಗೆ ನೇರ ಪ್ರಸಾರ ಮಾಡುವಂತೆ ಆದೇಶದಲ್ಲಿ ಸೂಚಿಸಿದ್ದಾರೆ. ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯವನ್ನು ಮಧ್ಯಾಹ್ನ 1.30ರಿಂದ ಮುಕ್ತಾಯವಾಗುವವರೆಗೆ ದೊಡ್ಡ ಎಲ್.ಇ.ಡಿ ಸ್ಕ್ರೀನ್‌ಗಳನ್ನು ಅಳವಡಿಸಿ, ನೇರ ಪ್ರಸಾರ ಮಾಡಲಾಗುವುದು’ ಎಂದು ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಹೊರಡಿಸಿದ ಆದೇಶದಲ್ಲಿ ತಿಳಿಸಿದೆ. ಜೊತೆಗೆ ಈ ಸಂದರ್ಭದಲ್ಲಿ ಸೂಕ್ತವಾದ ಭದ್ರತೆಯನ್ನು ಕೂಡ ಕಲ್ಪಿಸಲು ಸೂಚಿಸಿದೆ.

‘ಟೀಮ್ ಇಂಡಿಯಾ ಗೆಲ್ಲಲಿ’ ಎಂದು ಶುಭ ಹಾರೈಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

‘ನಾಳಿನ ವಿಶ್ವಕಪ್ ಕ್ರಿಕೆಟ್ ಪಂದ್ಯಾಕೂಟದ ಫೈನಲ್ ಪಂದ್ಯದಲ್ಲಿ ಭಾರತೀಯರ ಗೆಲುವನ್ನು ಸಂಭ್ರಮಿಸಲು ನಾನು ಎಲ್ಲರಂತೆ ಕಾತುರನಾಗಿದ್ದೇನೆ.
ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್ ಎಲ್ಲಾ ವಿಭಾಗಗಳಲ್ಲೂ ನಮ್ಮದು ಒಂದು ಪರಿಪೂರ್ಣ ತಂಡವಾಗಿರುವುದರಿಂದ ಈ ಬಾರಿಯ ವಿಶ್ವಕಪ್ ಭಾರತದ ಮಡಿಲು ಸೇರುವುದು ನಿಶ್ಚಿತ’ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...