ಐಪಿಎಲ್ 2023 | ಸಿಎಸ್‌ಕೆ ಬ್ಯಾಟ್ಸ್‌ಮನ್‌ಗಳ ಅಬ್ಬರಕ್ಕೆ ನಲುಗಿದ ಕೋಲ್ಕತ್ತಾ; ಕೆಕೆಆರ್‌ಗೆ ಸತತ ನಾಲ್ಕನೇ ಸೋಲು

Date:

ಅಜಿಂಕ್ಯ ರಹಾನೆ, ಶಿವಂ ದುಬೆ, ಡೇವೋನ್ ಕಾನ್ವೇ ಹಾಗೂ ರುತುರಾಜ್ ಗಾಯಕ್ವಾಡ್ ಅವರ ಸ್ಪೋಟಕ ಬ್ಯಾಟಿಂಗ್‌ ಹಾಗೂ ಬೌಲರ್‌ಗಳ ಕರಾರುವಕ್ಕ್ ದಾಳಿಯಿಂದ ಚೆನ್ನೈ ಸೂಪರ್‌ ಕಿಂಗ್ಸ್ ತಂಡ ಕೋಲ್ಕತ್ತಾ ನೈಟ್‌ ರೈಡರ್ಸ್ ವಿರುದ್ಧ 49 ರನ್‌ಗಳಿಂದ ಜಯಗಳಿಸಿತು.

ಕೋಲ್ಕತ್ತಾದ ಈಡನ್‌ ಗಾರ್ಡನ್‌ ಕ್ರೀಡಾಂಗಣದಲ್ಲಿ ಐಪಿಎಲ್‌ 16ನೇ ಆವೃತ್ತಿಯ 33ನೇ ಪಂದ್ಯದಲ್ಲಿ ಸಿಎಸ್‌ಕೆ ನೀಡಿದ್ದ 235 ರನ್‌ಗಳ ಸವಾಲನ್ನು ಬೆನ್ನಟ್ಟಿದ ಕೆಕೆಆರ್‌ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 53 ರನ್‌ಗಳಷ್ಟೆ ಗಳಿಸಲು ಶಕ್ತವಾಯಿತು. ಜೇಸನ್‌ ರಾಯ್‌ ಹಾಗೂ ರಿಂಕು ಸಿಂಗ್‌ ಅಬ್ಬರಿಸಿದರೂ ಗುರಿ ಮುಟ್ಟಲಾಗಲಿಲ್ಲ. ಇದರೊಂದಿಗೆ ಸಿಎಸ್‌ಕೆ ಟೂರ್ನಿಯಲ್ಲಿ 5ನೇ ಗೆಲುವು ದಾಖಲಿಸಿದರೆ, ಕೆಕೆಆರ್‌ ಸತತ ನಾಲ್ಕನೇ ಸೋಲು ಕಂಡಿತು.

ಜೇಸನ್‌ ರಾಯ್‌ ಕೇವಲ 26 ಎಸೆತಗಳಲ್ಲಿ 5 ಸಿಕ್ಸರ್‌ ಹಾಗೂ 5 ಬೌಂಡರಿಯೊಂದಿಗೆ 61 ರನ್‌ ಚಚ್ಚಿದರು. ರಿಂಕು ಸಿಂಗ್‌ 32 ಚೆಂಡುಗಳಲ್ಲಿ 4 ಸಿಕ್ಸರ್ ಹಾಗೂ 3 ಬೌಂಡರಿಯೊಂದಿಗೆ ಅಜೇಯ 53 ರನ್‌ ಪೇರಿಸಿದರು. ಉಳಿದಂತೆ ಇತರ ಆಟಗಾರ್ಯಾರು ಉತ್ತಮ ಪ್ರದರ್ಶನ ತೋರಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಎಸ್‌ಕೆ ಪರ ತುಷಾರ್‌ ದೇಶಪಾಂಡೆ 43/2, ಮಹೀಶ್ ತೀಕ್ಷಣಾ 32/2 ವಿಕೆಟ್ ಪಡೆದು ಯಶಸ್ವಿ ಬೌಲರ್‌ಗಳೆನಿಸಿದರು

ಇದಕ್ಕೂ ಮೊದಲು ಟಾಸ್‌ ಸೋತು ಬ್ಯಾಟಿಂಗ್‌ ಆರಂಭಿಸಿದ ಧೋನಿ ಸಾರಥ್ಯದ ಚೆನ್ನೈ ಸೂಪರ್‌ ಕಿಂಗ್ಸ್ ಮೊದಲ ಓವರ್‌ನಿಂದಲೇ ಬೌಂಡರಿ, ಸಿಕ್ಸರ್‌ ಬಾರಿಸತೊಡಗಿದರು. ಆರಂಭಿಕರಾಗಿ ಕಣಕ್ಕಿಳಿದ ಋತುರಾಜ್ ಗಾಯಕ್ವಾಡ್ ಹಾಗೂ ಡೆವೋನ್ ಕಾನ್ವೆ ಜೋಡಿ ಮೊದಲ ವಿಕೆಟ್‌ಗೆ 73 ರನ್‌ಗಳ ಜೊತೆಯಾಟ ನೀಡಿ ಬೇರ್ಪಟ್ಟಿತು. ಋತುರಾಜ್ 20 ಎಸೆತಗಳಲ್ಲಿ 35 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ನಂತರ ಅರ್ಧ ಶಥಕ ಸಿಡಿಸಿದ ಕಾನ್ವೆ 40 ಎಸೆತಗಳಲ್ಲಿ 56 ರನ್‌ಗಳಿಸಿ ಔಟಾದರು. ನಂತರ ಜೊತೆಯಾಗಿದ್ದು ರಹಾನೆ ಹಾಗೂ ದುಬೆ ಜೋಡಿ.

ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಶಿವಂ ದುಬೆ ಕೇವಲ 21 ಎಸೆತಗಳಲ್ಲಿ 5 ಸಿಕ್ಸರ್ 2 ಬೌಂಡರಿಯೊಂದಿಗೆ 50 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ಆದರೆ ಅಜಿಂಕ್ಯಾ ರಹಾನೆ ಕೊನೆಯವರೆಗೂ ವಿಕೆಟ್ ಕಳೆದುಕೊಳ್ಳದೆ ಅಬ್ಬರದ ಬ್ಯಾಟಿಂಗ್ ನಡೆಸಿದರು. ಕೇವಲ 29 ಎಸೆತಗಳಲ್ಲಿ ಅವರು 71 ರನ್‌ ಬಾರಿಸಿ ಅಜೇಯವಾಗುಳಿದರು. ಇವರ ಅಮೋಘ ಆಟದಲ್ಲಿ 5 ಸಿಕ್ಸರ್‌ ಹಾಗೂ 6 ಬೌಂಡರಿಗಳಿದ್ದವು.

ಇನ್ನು ಕೊನೆಯ ಕ್ಷಣದಲ್ಲಿ ರವೀಂದ್ರ ಜಡೇಜಾ 8 ಎಸೆತಗಳನ್ನು ಎದುರಿಸಿ 18 ರನ್ ಬಾರಿಸಿ ವಿಕೆಟ್ ಕಳೆದುಕೊಂಡರು. ಎಂಎಸ್ ಧೋನಿ 2 ರನ್‌ಗಳಿಸಿ ಅಜೇಯವಾಗುಳಿದರು. ಈ ಮೂಲಕ ಸಿಎಸ್‌ಕೆ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 235 ರನ್‌ಗಳಿಸಿದೆ.

ಇದು ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ದಾಖಲಿಸಿದ 3ನೇ ಅತೀದೊಡ್ಡ ಮೊತ್ತವಾಗಿದೆ. 2010ರಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಚೆನ್ನೈ 5 ವಿಕೆಟ್ ಕಳೆದುಕೊಂಡು 246 ರನ್ ಸಿಡಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...