ಐಪಿಎಲ್‌ 2023 | ಮುಂಬೈ ವಿರುದ್ಧದ ಸೋಲಿನ ಸರಪಳಿ ತುಂಡರಿಸಿದ ಚೆನ್ನೈ

Date:

ಮುಂಬೈ ಇಂಡಿಯನ್ಸ್‌ ತಂಡವನ್ನು ಸಾಮಾನ್ಯ ಮೊತ್ತಕ್ಕೆ ನಿಯಂತ್ರಿಸಿದ ಚೆನ್ನೈ ಸೂಪರ್​ ಕಿಂಗ್ಸ್, ಶನಿವಾರದ ಮೊದಲ ಪಂದ್ಯದಲ್ಲಿ ಸುಲಭ ಜಯ ಸಾಧಿಸಿದೆ.

ಚೆನ್ನೈಯ ಚೆಪಾಕ್​ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಮಾಡಿದ್ದ ಮುಂಬೈ ಇಂಡಿಯನ್ಸ್,​ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ​ನಷ್ಟದಲ್ಲಿ 139 ರನ್​ ಗಳಿಸಿತು.

ಸಾಮನ್ಯ ಮೊತ್ತವನ್ನು 17.4 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟದಲ್ಲಿ ಚೇಸ್‌ ಮಾಡಿದ ಆತಿಥೇಯ ಸಿಎಸ್‌ಕೆ ಮುಂಬೈ ಇಂಡಿಯನ್ಸ್​ ವಿರುದ್ಧ 6 ವಿಕೆಟ್​ಗಳ ಗೆಲುವು ಸಾಧಿಸಿತು. ಈ ಗೆಲುವಿನೊಂದಿಗೆ ಧೋನಿ ಸಾರಥ್ಯದ ಚೆನ್ನೈ, 13 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2012 ಬಳಿಕ ಚೆಪಾಕ್‌ ಮೈದಾನದಲ್ಲಿ ಮುಂಬೈ ವಿರುದ್ಧ ಚೆನ್ನೈ ಸೂಪರ್‌ ಕಿಂಗ್ಸ್‌ ದಾಖಲಿಸಿದ ಮೊದಲ ಗೆಲುವು ಇದಾಗಿದೆ. ಇದಕ್ಕೂ ಮೊದಲಿನ 5 ಪಂದ್ಯಗಳಲ್ಲಿ ರೋಹಿತ್‌ ಪಡೆ ಗೆಲುವಿನ ದಾಖಲೆ ಹೊಂದಿತ್ತು.

ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ಪ್ರಸಕ್ತ ಆವೃತ್ತಿಯಲ್ಲಿ ಆಡಿದ್ದ ಕಳೆದ ಮೂರು ಪಂದ್ಯಗಳಲ್ಲಿ ಗೆಲುವು ಕಂಡಿರಲಿಲ್ಲ. ಎರಡು ಸೋಲು ಮತ್ತು ಒಂದು ಪಂದ್ಯ ಮಳೆಯಿಂದ ರದ್ದಾಗಿತ್ತು . ಇಂದಿನ ಗೆಲುವಿನೊಂದಿಗೆ ಐಪಿಎಲ್‌ 16ನೇ ಆವೃತ್ತಿಯಲ್ಲಿ ಮುಂಬೈ ವಿರುದ್ಧ ಆಡಿದ 2 ಪಂದ್ಯಗಳಲ್ಲಿಯೂ ಚೆನ್ನೈ ಗೆಲುವಿನ ನಗೆ ಬೀರಿದೆ.

ಆರಂಭಿಕರಾದ ಋತುರಾಜ್​ ಗಾಯಕ್ವಾಡ್​ ಮತ್ತು ಡೆವೋನ್​ ಕಾನ್ವೆ ಚೆನ್ನೈ ತಂಡಕ್ಕೆ  ಉತ್ತಮ ಆರಂಭ ಒದಗಿಸಿದರು. ನಾಲ್ಕು ಓವರ್​ ಮುಕ್ತಾಯಕ್ಕೆ 46 ರನ್​ ಒಟ್ಟುಗೂಡಿಸಿದ್ದರು. ಗಾಯಕ್ವಾಡ್ 30 ಮತ್ತು  ಡೆವೋನ್​ ಕಾನ್ವೆ 44 ರನ್‌ಗಳಿಸಿ ವಿಕೆಟ್‌ ಒಪ್ಪಿಸಿದರು. ರಹಾನೆ 21 ರನ್​ ಮತ್ತು ಇಂಪ್ಯಾಕ್ಟ್​ ಪ್ಲೇಯರ್​ ಆಗಿ ಕಣಕ್ಕಿಳಿದ ಅಂಬಾಟಿ ರಾಯುಡು, ಒಂದು ಸಿಕ್ಸರ್​ ಸೇರಿದಂತೆ 12ರನ್​ ಗಳಿಸಿ ಔಟಾದರು.

ಆಕ್ರಮಣಕಾರಿಯಾಗಿ ಬ್ಯಾಟ್‌ ಬೀಸಿದ ಶಿವಂ ದುಬೆ, ಮೂರು ಸಿಕ್ಸರ್​ ನೆರವಿನಿಂದ ಅಜೇಯ 26 ರನ್​ ಗಳಿಸಿದರು. ಅಂತಿಮವಾಗಿ ಎಂ.ಎಸ್​ ಧೋನಿ ಒಂಟಿ ಓಟದ ಮೂಲಕ ಗೆಲುವಿನ ರನ್‌ಗಳಿಸಿದರು.

ಇದಕ್ಕೂ ಮುನ್ನ ಬ್ಯಾಟಿಂಗ್‌ ನಡೆಸಿದ್ದ ಮುಂಬೈ 14 ರನ್​ ತಲುಪುವಷ್ಟರಲ್ಲಿ ಅಗ್ರ ಕ್ರಮಾಂಕದ  ಮೂರು ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಇಶಾನ್​ ಕಿಶನ್​(7), ಕ್ಯಾಮರೂನ್​ ಗ್ರೀನ್(6)​, ನಾಯಕ ರೋಹಿತ್​ ಶರ್ಮ(0) ತಂಡಕ್ಕೆ ಯಾವುದೇ ಕೊಡುಗೆ ನೀಡಲಿಲ್ಲ.

ಆಸರೆಯಾದ ವದೇರಾ

ಯುವ ಬ್ಯಾಟರ್​ ನೆಹಾಲ್ ವದೇರಾ ಚೊಚ್ಚಲ ಅರ್ಧಶತಕ ಬಾರಿಸಿ ಮುಂಬೈಗೆ ಆಸರೆಯಾದರು. 1 ಸಿಕ್ಸರ್​ ಮತ್ತು 8 ಬೌಂಡರಿ  ನೆರವಿನಿಂದ 51 ಎಸೆತಗಳಲ್ಲಿ 64 ರನ್‌ಗಳಿಸಿದರು. ಸೂರ್ಯಕುಮಾರ್​ ಮೂರು ಬೌಂಡರಿ ನೆರವಿನಿಂದ 26 ರನ್​ ಗಳಿಸಿ ಜಡೇಜಾ ಎಸೆತದಲ್ಲಿ ಕ್ಲೀನ್​ ಬೌಲ್ಡ್​ ಆದರು. ಈ ಜೋಡಿ 4ನೇ ವಿಕೆಟ್​​ಗೆ 55 ರನ್ ಒಟ್ಟುಗೂಡಿಸಿತು.

ಮೂರು ಓವರ್​ ಎಸೆದ ದೀಪಕ್​ ಚಹರ್​, 18 ರನ್​ ಬಿಟ್ಟುಕೊಟ್ಟು 2 ವಿಕೆಟ್​ ಪಡೆದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...