ಕರ್ನಾಟಕ ರಣಜಿ ಗೆದ್ದಾಗ ಆರ್‌ಸಿಬಿ ಅಭಿಮಾನಿಗಳು ಹೀಗೆ ಬರುತ್ತಾರೆಯೇ: ಕ್ರಿಕೆಟರ್‌ ಸೈಯದ್‌ ಕಿರ್ಮಾನಿ ಪ್ರಶ್ನೆ

Date:

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಆಯೋಜಿಸಿದ್ದ ವಿಜಯೋತ್ಸವ ಕಾರ್ಯಕ್ರಮ ವೇಳೆ ಉಂಟಾದ ಕಾಲ್ತುಳಿತದಲ್ಲಿ11 ಅಭಿಮಾನಿಗಳು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನ ಗಾಯಗೊಂಡಿರುವ ದುರಂತದ ಬಗ್ಗೆ ಮಾಜಿ ಕ್ರಿಕೆಟರ್‌ ಸೈಯದ್‌ ಕಿರ್ಮಾನಿ ಬೇಸರ ವ್ಯಕ್ತಪಡಿಸಿದ್ದಾರೆ.

“ಚಾಂಪಿಯನ್‌ಗಳಿಗೆ ಇದೊಂದು ಡೆಡ್ಲಿ ವೆಲ್‌ಕಮ್. ಒಂದು ಕಪ್ ಪಡೆಯಲು 18 ವರ್ಷ ಕಾದರು. ಆದರೆ, ಹರ್ಷೋತ್ಸವ ಮಾಡಲು ಇನ್ನೊಂದೆರಡು ದಿನ ಕಾಯಬಹುದಿತ್ತು. ವ್ಯವಸ್ಥಿತ ಕಾರ್ಯಕ್ರಮ ಆಯೋಜಿಸಿ ಆರ್‌ಸಿಬಿ ಹಿರೋಗಳನ್ನು ಸ್ವಾಗತಿಸಬಹುದಿತ್ತು” ಎಂದು ಹೇಳಿದ್ದಾರೆ.

“ಸಾಕಷ್ಟು ಮುಂಜಾಗ್ರತೆ ವಹಿಸಿದ್ದರೆ ಭಾರಿ ದುರ್ಘಟನೆಯನ್ನು ತಡೆಯಬಹುದಿತ್ತು. ಸಮಯ ಹೊಂದಾಣಿಕೆ ಮಾಡಿಕೊಂಡು ಕಾರ್ಯಕ್ರಮ ಆಯೋಜನೆ ಮಾಡಿದ್ದರೆ ಅಮಾಯಕರ ಜೀವ ಉಳಿಯುತ್ತಿದ್ದವು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆರ್‌ಸಿಬಿ ಅಭಿಮಾನಿಗಳ ಅಭಿಮಾನ ಹುಚ್ಚುತನಕ್ಕೆ ತಿರುಗಿರುವುದು ಸ್ಪಷ್ಟವಾಗಿದೆ. ಆರ್‌ಸಿಬಿ ಕಪ್ ಗೆದ್ದಾಗ ಬಂದಿರುವ ಅಭಿಮಾನಿಗಳು ಕರ್ನಾಟಕ ತಂಡ ರಣಜಿ ಟ್ರೋಪಿ ಗೆದ್ದಾಗ ಬರುತ್ತಾರೆಯೇ? ನಮ್ಮ ಕಾಲದಲ್ಲಿ ಕ್ರಿಕೆಟ್‌ನ ಹುಚ್ಚು ಅಭಿಮಾನಿಗಳನ್ನು ನೋಡಲು ಸಾಧ್ಯವಿರಲಿಲ್ಲ. ಅದೂ ಸಹ ಇಂದಿನ ಐಪಿಎಲ್ ಅಭಿಮಾನಿಗಳ ಹುಚ್ಚು ವಿಪರೀತ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಇಂತಹದ್ದೆಲ್ಲ ಆಗುತ್ತೆ ಎನ್ನುವುದನ್ನು ನೋಡಿದರೆ ನಮ್ಮ ಕಾಲದಲ್ಲಿ ಆಗ ಯಾವುದೇ ಟಿ.ವಿ ಮಾಧ್ಯಮಗಳ ಚೀತ್ಕಾರಗಳಿರಲಿಲ್ಲ, ಸಮೂಹ ಸನ್ನಿಗಳಿರಲಿಲ್ಲ. ಅದಕ್ಕೆ ಇಂತಹ ಘಟನೆಗಳು ನಡೆಯುತ್ತಿರಲಿಲ್ಲ” ಎಂದು ಪರೋಕ್ಷವಾಗಿ ಮಾಧ್ಯಮಗಳ ವಿರುದ್ಧವೂ ಹರಿಹಾಯ್ದಿದ್ದಾರೆ.

1983ರಲ್ಲಿ ಭಾರತ ವಿಶ್ವಕಪ್ ಗೆದ್ದಾಗ ಸೈಯದ್ ಕಿರ್ಮಾನಿ ತಂಡದ ಸದಸ್ಯರಾಗಿದ್ದರು. ರಣಜಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...