ಐಪಿಎಲ್ 2023 | ಪ್ಲೇಆಫ್ ಪ್ರವೇಶಿಸಿದ ಚೆನ್ನೈ; 9 ಸೋಲಿನೊಂದಿಗೆ ಟೂರ್ನಿಯಿಂದ ಡೆಲ್ಲಿ ನಿರ್ಗಮನ

Date:

ಐಪಿಎಲ್‌ 2023ರ 16ನೇ ಆವೃತ್ತಿಯಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ ತಂಡ ತನ್ನ 14ನೇ ಹಾಗೂ ಕೊನೆಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸುವುದರೊಂದಿಗೆ ಅಂಕಪಟ್ಟಿಯಲ್ಲಿ 8 ಪಂದ್ಯಗಳನ್ನು ಗೆದ್ದು ಎರಡನೇ ತಂಡವಾಗಿ ಪ್ಲೇಆಫ್ ಪ್ರವೇಶಿಸಿತು.

ದೆಹಲಿಯ ಅರುಣ್ ಜೈಟ್ಲಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ನೀಡಿದ 224 ರನ್‌ಗಳ ಬೃಹತ್‌ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 146 ರನ್‌ಗಳನ್ನು ಮಾತ್ರ ಗಳಿಸುವುದರೊಂದಿಗೆ 77 ರನ್‌ಗಳ ಭಾರಿ ಅಂತರದಿಂದ ಸೋಲು ಒಪ್ಪಿಕೊಂಡಿತು. ಡೆಲ್ಲಿ ಪರ ನಾಯಕ ಡೇವಿಡ್‌ ವಾರ್ನರ್‌ ಮಾತ್ರ ಬಿರುಸಿನ 86 ರನ್‌ (58 ಎಸೆತ, 5 ಸಿಕ್ಸರ್, 7 ಬೌಂಡರಿ) ಏಕಾಂಗಿ ಹೋರಾಟ ನಡೆಸಿದರು.

ಈಗಾಗಲೇ ಟೂರ್ನಿಯಿಂದ ನಿರ್ಗಮಿಸಿದ್ದ ಡೆಲ್ಲಿ ಕೊನೆಯ ಪಂದ್ಯದಲ್ಲೂ ಸೋಲು ಕಂಡಿತು. ಚೆನ್ನೈ ಪರ ದೀಪಕ್‌ ಚಹರ್ 22/3 ಹಾಗೂ ಮತೀಶಾ ಪತಿರಣ 22/2 ವಿಕೆಟ್‌ ಗಳಿಸುವುದರೊಂದಿಗೆ ಗೆಲುವಿನ ರೂವಾರಿಗಳಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹೊರಗೆ ಮಾತನಾಡುವವರ ಕುರಿತು ತಲೆಕೆಡಿಸಿಕೊಳ್ಳುವುದಿಲ್ಲ; ವಿರಾಟ್ ಕೊಹ್ಲಿ ‌

ಇದಕ್ಕೂ ಮೊದಲು ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಚೆನ್ನೈ ಸೂಪರ್‌ ಕಿಂಗ್ಸ್ ತಂಡ ಋತುರಾಜ್‌ ಗಾಯಕ್ವಾಡ್‌ (79 ರನ್‌) ಹಾಗೂ ಡೆವೋನ್‌ ಕಾನ್ವೇ (87) ಅವರ ಅರ್ಧಶತಕಗಳ ಬಲದಿಂದ ಚೆನ್ನೈ ಸೂಪರ್‌ ಕಿಂಗ್ಸ್ ತಂಡ ತನ್ನ ಪಾಲಿನ 20 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 223 ರನ್‌ಗಳ ಉತ್ತಮ ಮೊತ್ತ ಗಳಿಸಿತು. ಆರಂಭಿಕ ಆಟಗಾರರಾದ ಋತುರಾಜ್ ಗಾಯಕ್ವಾಡ್ ಹಾಗೂ ಡೆವೋನ್ ಕಾನ್ವೆ ಆರಂಭದಿಂದಲೇ ಆಕ್ರಮಣಕಾರಿ ಆಟಕ್ಕೆ ಮುಂದಾಗಿದ್ದರು. ಈ ಜೋಡಿಯನ್ನು ಕಟ್ಟಿಹಾಕಲು ಡೆಲ್ಲಿ ಕ್ಯಾಪಿಟಲ್ಸ್‌ಗೆ ಸಾಧ್ಯವಾಗಲಿಲ್ಲ. ಮೊದಲ ವಿಕೆಟ್‌ಗೆ ಈ ಜೋಡಿ ಬರೊಬ್ಬರಿ 141 ರನ್‌ಗಳನ್ನು ಕಲೆಹಾಕುವಲ್ಲಿ ಯಶಸ್ವಿಯಾದರು.

ಚೆನ್ನೈ 14.3 ಓವರ್‌ಗಳಲ್ಲಿ 141 ರನ್‌ಗಳಿಸಿದ್ದಾಗ ಋತುರಾಜ್ 50 ಎಸೆತಗಳಲ್ಲಿ 79 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ಅವರ ಇನ್ನಿಂಗ್ಸ್‌ನಲ್ಲಿ 3 ಬೌಂಡರಿ ಹಾಗೂ 7 ಸಿಕ್ಸರ್ ಸೇರಿತ್ತು. ನಂತರ ಬ್ಯಾಟಿಂಗ್‌ಗೆ ಇಳಿದ ಶಿವಂ ದುಬೆ ಕೇವಲ 9 ಎಸೆತಗಳಲ್ಲಿ 22 ರನ್‌ಗಳಿಸಿ ಸ್ಪೋಟಕ ಪ್ರದರ್ಶನದ ನಂತರ ನಿರ್ಗಮಿಸಿದರು. ನಾಯಕ ಎಂಎಸ್ ಧೋನಿ 4 ಎಸೆತಗಳಲ್ಲಿ 5 ರನ್‌ಗಳಿಸಿ ಅಜೇಯವಾಗುಳಿದರೆ, ರವೀಂದ್ರ ಜಡೇಜಾ ಕೇವಲ 7 ಎಸೆತಗಳಲ್ಲಿ 20 ರನ್ ಬಾರಿಸಿ ಅಬ್ಬರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...