ಟೀಮ್ ಇಂಡಿಯಾ ಕೋಚ್ | ‘ದೇಶಕ್ಕಾಗಿ ಒಪ್ಪಿಕೊಳ್ಳಿ’ ಎಂದು ಗೌತಮ್‌ ಗಂಭೀರ್‌ ಬಳಿ ತಿಳಿಸಿದ್ದ ಜಯ್ ಶಾ!

Date:

ಮುಂಬರುವ 2024ರ ಐಸಿಸಿ ಟಿ20 ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯ ಬಳಿಕ ಭಾರತ ತಂಡಕ್ಕೆ ಗೌತಮ್‌ ಗಂಭೀರ್‌ ಮುಖ್ಯ ಕೋಚ್ ಆಗಿ ನೇಮಕವಾಗಲಿದ್ದಾರಂದು ವರದಿಯಾಗಿದೆ.

ಟೀಮ್‌ ಇಂಡಿಯಾ ಹೆಡ್‌ ಕೋಚ್‌ ಸಂಬಂಧ ಗೌತಮ್‌ ಗಂಭೀರ್‌ ಹಾಗೂ ಬಿಸಿಸಿಐ ನಡುವೆ ಒಪ್ಪಂದ ಆಗಿದೆ ಎಂದು ಐಪಿಎಲ್‌ನ ಫ್ರಾಂಚೈಸಿ ಮಾಲೀಕರೊಬ್ಬರು ‘ಕ್ರಿಕ್‌ಬಝ್‌’ಗೆ ತಿಳಿಸಿದ್ದಾರೆ. ಹಾಗಾಗಿ ಶೀಘ್ರದಲ್ಲಿಯೇ ಬಿಸಿಸಿಐ ಅಧಿಕೃತವಾಗಿ ಪ್ರಕಟಿಸಲಿದೆ ಎಂದು ವರದಿಯಾಗಿದೆ.

2024ರ ಐಪಿಎಲ್‌ ಟೂರ್ನಿಯಲ್ಲಿ ಗೌತಮ್‌ ಗಂಭೀರ್‌ ಮೆಂಟರ್‌ ಆಗಿದ್ದ ಕೋಲ್ಕತಾ ನೈಟ್‌ ರೈಡರ್ಸ್ ತಂಡ ಚಾಂಪಿಯನ್‌ ಆಗಿದೆ. ಫೈನಲ್ ಪಂದ್ಯದ ಬಳಿಕ ಜಯ್ ಶಾ ಹಾಗೂ ಗೌತಮ್ ಗಂಭೀರ್ ಮಾತುಕತೆ ನಡೆಸುತ್ತಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ವೈರಲ್ ಬೆನ್ನಲ್ಲೇ ಗೌತಮ್ ಗಂಭೀರ್, ಟೀಮ್ ಇಂಡಿಯಾ ಕೋಚ್ ಆಗಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಪರಸ್ಪರ ಮಾತುಕತೆ ನಡೆಸಿದ್ದರು. ಈ ಮಾತುಕತೆಯ ವೇಳೆ, ‘ದೇಶಕ್ಕಾಗಿ ನೀವು ಒಪ್ಪಿಕೊಳ್ಳಬೇಕಿದೆ(ದೇಶ್ ಕೇಲಿಯೇ ಕರ್ನಾ ಹೇ)’ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಗೌತಮ್ ಗಂಭೀರ್ ಅವರಲ್ಲಿ ತಿಳಿಸಿರುವುದಾಗಿ ವರದಿಯಾಗಿದೆ.

ಪ್ರಸ್ತುತ ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್‌ ಆಗಿ ರಾಹುಲ್ ದ್ರಾವಿಡ್ ಕಾರ್ಯನಿರ್ವಹಿಸುತ್ತಿದ್ದು, 2023ರ ಏಕದಿನ ವಿಶ್ವಕಪ್‌ ವೇಳೆಗೆ ರಾಹುಲ್ ದ್ರಾವಿಡ್‌ ಅವರ ಅವಧಿ ಮುಗಿದಿದೆ. ಬಿಸಿಸಿಐ ದ್ರಾವಿಡ್ ಅವರ ಅವಧಿಯನ್ನುಅಮೆರಿಕ ಹಾಗೂ ವೆಸ್ಟ್‌ ಇಂಡೀಸ್‌ನಲ್ಲಿ ನಡೆಯಲಿರುವ 2024ರ ಟಿ20 ವಿಶ್ವಕಪ್‌ ತನಕ ಮುಂದುವರಿಸಿದೆ.

ಭಾರತ ತಂಡದಲ್ಲಿ ರಾಹುಲ್‌ ದ್ರಾವಿಡ್‌ ಅವರ ಸ್ಥಾನವನ್ನು ತುಂಬಲು ಉತ್ಸುಕನಾಗಿದ್ದೇನೆಂದು ಗೌತಮ್ ಗಂಭೀರ್‌ ಅವರು, ತಮ್ಮ ಆತ್ಮೀಯ ಸ್ನೇಹಿತರ ಬಳಿ ಹೇಳಿಕೊಂಡಿರುವುದಾಗಿ ತಿಳಿದುಬಂದಿದೆ.

ಐಪಿಎಲ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಮೂರನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂರು ಬಾರಿ ಕೂಡ ಗೌತಮ್ ಗಂಭೀರ್ ಕೆಕೆಆರ್ ತಂಡದ ಭಾಗವಾಗಿದ್ದರು ಎಂಬುದು ವಿಶೇಷ. ಅಂದರೆ 2012 ಮತ್ತು 2014 ರಲ್ಲಿ ಗಂಭೀರ್ ನಾಯಕತ್ವದಲ್ಲಿ ಕೆಕೆಆರ್ ಚಾಂಪಿಯನ್ ಪಟ್ಟಕ್ಕೇರಿದರೆ, 2024 ರಲ್ಲಿ ಗೌತಿ ಅವರ ಮಾರ್ಗದರ್ಶನದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಟ್ರೋಫಿ ಮುಡಿಗೇರಿಸಿಕೊಂಡಿದೆ. ಹೀಗಾಗಿಯೇ ಟಿ20 ವಿಶ್ವಕಪ್​ ಬಳಿಕ ರಾಹುಲ್ ದ್ರಾವಿಡ್ ಅವರ ಉತ್ತರಾಧಿಕಾರಿಯಾಗಿ ಗೌತಮ್ ಗಂಭೀರ್ ಅವರನ್ನು ನೇಮಿಸಲು ಬಿಸಿಸಿಐ ಆಸಕ್ತಿವಹಿಸಿದೆ.

ಇದನ್ನು ಓದಿದ್ದೀರಾ? ಟೀಂ ಇಂಡಿಯಾ ಕೋಚ್ ಸ್ಥಾನಕ್ಕೆ ಅರ್ಜಿ ಸಲ್ಲಿಸಿರುವ ನರೇಂದ್ರ ಮೋದಿ, ಅಮಿತ್ ಶಾ, ಸಚಿನ್ !

ಟೀ ಇಂಡಿಯಾ ಮುಖ್ಯ ಕೋಚ್‌ ಸ್ಥಾನಕ್ಕೆ ಕರೆಯಲಾಗಿದ್ದ ಅರ್ಜಿಯ ಅವಧಿ ಸೋಮವಾರ ಮುಗಿದಿದ್ದು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 3 ಸಾವಿರಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...