ಐಪಿಎಲ್ 2025 | ಓಡಿದ್ದ 2 ರನ್‌ ಹಾಗೂ ಆ ಒಂದು ನಿರ್ಧಾರ ಚೆನ್ನೈ ಸೋಲಿಗೆ ಕಾರಣವಾಯಿತೆ?

Date:

ಈ ಬಾರಿಯ ಐಪಿಎಲ್‌ನಲ್ಲಿ ಅಂಪೈರ್‌ಗಳ ನಿರ್ಣಯಗಳು ಮತ್ತೊಮ್ಮೆ ವಿವಾದಕ್ಕೆ ಎಡೆಮಾಡಿಕೊಡುತ್ತಿವೆ. ಆರ್‌ಸಿಬಿ ಹಾಗೂ ಚೆನ್ನೈ ಸೂಪರ್ ಕಿಂಗ್ಸ್‌ ನಡುವಣ ಪಂದ್ಯವೂ ಇದಕ್ಕೆ ಸಾಕ್ಷಿಯಾಗಿದೆ.

ಆರ್‌ಸಿಬಿ ನೀಡಿದ್ದ 214 ರನ್‌ಗಳ ಸವಾಲಿನ ಗುರಿಯನ್ನು ಬೆನ್ನಟ್ಟಿದಾಗ ಚೆನ್ನೈ ಸೂಪರ್‌ ಕಿಂಗ್ಸ್‌ ಪರ 16.2 ಓವರ್‌ನಲ್ಲಿ ಆಯುಷ್‌ ಮಾತ್ರೆ (94) ಔಟ್ ಆಗುತ್ತಿದ್ದಂತೆ, ಕ್ರೀಸ್‌ಗೆ ಡೆವಾಲ್ಡ್ ಬ್ರೆವಿಸ್ ಮೈದಾನಕ್ಕೆ ಬಂದರು. ಇವರು ಲುಂಗಿ ಎನ್‌ಗಿಡಿ ಅವರ ಎಸೆತದಲ್ಲಿ ಔಟ್ ಆದರು. ಆದರೆ ಇವರಿಗೆ ಡಿಆರ್‌ಎಸ್‌ ತೆಗೆದುಕೊಳ್ಳಲು ಆಗಲಿಲ್ಲ

ಡೆವಾಲ್ಡ್‌ ಬ್ರಾವಿಸ್‌ ಎಲ್‌ಬಿ ಔಟ್‌ ಆದಾಗ ದೊಡ್ಡ ಪರದೆಯ ಮೇಲೆ ಟೈಮರ್ ಕಾಣಿಸಿಕೊಳ್ಳದೇ ಸಮಸ್ಯೆಯನ್ನು ಸೃಷ್ಟಿಸಿತು. ಡೆವಾಲ್ಡ್‌ ಬ್ರಾವಿಸ್‌ ಔಟ್ ಎಂದು ತೀರ್ಪು ನೀಡುತ್ತಿದ್ದಂತೆ ಅದಕ್ಕೂ ತಲೆ ಕಡಿಸಿಕೊಳ್ಳದೆ ರನ್ ಓಡಲು ಮುಂದಾದರು. ಬಳಿಕ ರವೀಂದ್ರ ಜಡೇಜಾ ಅವರನ್ನು ಸಂಪರ್ಕಿಸಿ ಡಿಆರ್‌ಎಸ್‌ ಮೇಲ್ಮನವಿ ಸಲ್ಲಿಸಿದರು. ಆಗಲೇ ವಿವಾದ ಹುಟ್ಟಿಕೊಂಡಿತು. ಏಕೆಂದರೆ ಮನವಿ ಸಲ್ಲಿಸುವ ನಿಗದಿತ ಅವಧಿ ಮೀರಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಐಪಿಎಲ್​ ನಿಯಮದ ಪ್ರಕಾರ, ಎಲ್​ಬಿಡಬ್ಲ್ಯೂ ಆದರೆ 15 ಸೆಕೆಂಡ್​ಗಳ ಒಳಗೆ ಡಿಆರ್​ಎಸ್​ಗೆ ಮನವಿ ಸಲ್ಲಿಸಬೇಕು. ಅದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ, ಮನವಿಯನ್ನು ತಿರಸ್ಕರಿಸಲಾಗುತ್ತದೆ.

ಈ ಸುದ್ದಿ ಓದಿದ್ದೀರಾ? 2026ರ ಏಷ್ಯನ್ ಕ್ರೀಡಾಕೂಟದಲ್ಲಿ ಕ್ರಿಕೆಟ್‌ಗೆ ಸ್ಥಾನ; ಒಲಿಂಪಿಕ್ ಕೌನ್ಸಿಲ್ ಆಫ್ ಏಷ್ಯಾ ಒಪ್ಪಿಗೆ

ಆದರೆ ಈ ನಿಯಮದ ಬಗ್ಗೆ ಅರಿವಿಲ್ಲದೆ, ಡೆವಾಲ್ಡ್ ಬ್ರೆವಿಸ್ ಹಾಗೂ ರವೀಂದ್ರ ಜಡೇಜಾ 2 ರನ್ ಓಡಿದ್ದಾರೆ. ಅದರಲ್ಲೂ ಒಂದು ರನ್ ಕಲೆಹಾಕಿದ ಬಳಿಕ ಡಿಆರ್​ಎಸ್​ಗೆ ಮನವಿ ಸಲ್ಲಿಸಿದ್ದರೂ ಬ್ರೆವಿಸ್​ ಅವರಿಗೆ ರಿವ್ಯೂ ಲಭಿಸುತ್ತಿತ್ತು.

ಇದರ ಪರಿಕಲ್ಪನೆಯೇ ಇಲ್ಲದೆ, ರವೀಂದ್ರ ಜಡೇಜಾ ಡೆವಾಲ್ಡ್ ಬ್ರೆವಿಸ್ ಅವರನ್ನು 2ನೇ ರನ್​ಗಾಗಿ ಕರೆದಿದ್ದಾರೆ. ಇತ್ತ ಕಡೆಯಿಂದ ಸ್ಟ್ರೈಕ್​ನತ್ತ ಓಡಿದ ಬ್ರೆವಿಸ್ ಆ ಬಳಿಕ ಜಡೇಜಾ ಜೊತೆ ಚರ್ಚಿಸಿ ಡಿಆರ್​ಎಸ್​ಗೆ ಮನವಿ ಸಲ್ಲಿಸಿದ್ದಾರೆ.

ಅಷ್ಟರಲ್ಲಾಗಲೇ ಟೈಮರ್ 25 ಸೆಕೆಂಡ್​ಗಳನ್ನು ದಾಟಿತ್ತು. ಅಂದರೆ 15 ಸೆಕೆಂಡ್​ಗಳಲ್ಲಿ ತೆಗೆದುಕೊಳ್ಳಬೇಕಾದ ರಿವ್ಯೂ ಅನ್ನು ಬ್ರೆವಿಸ್ 25 ಸೆಕೆಂಡ್​ಗಳ ಬಳಿಕ ತೆಗೆದುಕೊಂಡಿದ್ದಾರೆ. ಹೀಗಾಗಿ ಅಂಪೈರ್ ಮನವಿಯನ್ನು ತಿರಸ್ಕರಿಸಿದರು.

ಇದರಿಂದಾಗಿ ಡೆವಾಲ್ಡ್ ಬ್ರೆವಿಸ್ ಮೇಲ್ಮನವಿ ಇಲ್ಲದೆ ಪೆವಿಲಿಯನ್​ಗೆ ಹಿಂತಿರುಗಬೇಕಾಯಿತು. ಕುತೂಹಲಕಾರಿ ವಿಷಯ ಎಂದರೆ ಅದು ನಾಟೌಟ್ ಆಗಿತ್ತು. ಅಂದರೆ ರಿಪ್ಲೇ ವಿಡಿಯೋದಲ್ಲಿ ಡೆವಾಲ್ಡ್ ಬ್ರೆವಿಸ್ ಕಾಲಿಗೆ ತಾಗಿದ ಚೆಂಡು ವಿಕೆಟ್​ನಿಂದ ದೂರ ಸಾಗುತ್ತಿರುವುದು ಕಂಡು ಬಂದಿದೆ.

ಈ ಒಂದೇ ಓವರ್‌ನಲ್ಲಿ ಬ್ಯಾಕ್‌ ಟು ಬ್ಯಾಕ್‌ ಎರಡು ವಿಕೆಟ್‌ಗಳನ್ನು ಪಡೆದ ಲುಂಗಿ ಎನ್‌ಗಿಡಿ ಅಬ್ಬರಿಸಿದರು. ಅಲ್ಲದೆ ಆರ್‌ಸಿಬಿ ಪಂದ್ಯದಲ್ಲಿ ಭರ್ಜರಿ ವಾಪಸಾತಿ ಮಾಡುವಲ್ಲಿ ತಮ್ಮದೇ ಆದ ಕಾಣಿಕೆ ನೀಡಿದರು. ರೆವ್ಯೂ ತೆಗೆದುಕೊಂಡು ಓಡಿದ 2 ರನ್‌ ಲೆಕ್ಕಕ್ಕಿದ್ದರೆ ಸಿಎಸ್​ಕೆ ತಂಡಕ್ಕೆ ಗೆಲ್ಲುವ ಅವಕಾಶವಿರುತ್ತಿತ್ತು. ಕೊನೆಗೆ 2 ರನ್‌ನಿಂದಲೇ ಸೋಲು ಅನುಬೇಕಾಯಿತು.

ಪಂದ್ಯ ಫಲಿತಾಂಶ ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 213 ರನ್‌ ಗಳಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್‌ಗಳಲ್ಲಿ 5 ವಿಕೆಟ್‌ಗೆ 211 ರನ್‌ ಸೇರಿಸಿ ಸೋಲು ಕಂಡಿತು. ಈ ಪಂದ್ಯದಲ್ಲಿ ಮಹತ್ವದ 2 ಅಂಕ ಕಲೆ ಹಾಕುತ್ತಿದ್ದಂತೆ ಆರ್‌ಸಿಬಿ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...